ಗೊಂದಲಗಳ ನಡುವೆ ಆರ್‌ಟಿಇ ಸೀಟು ಹಂಚಿಕೆಗೆ ಸಿದ್ಧತೆ


Team Udayavani, Jul 20, 2017, 5:35 AM IST

RTE-19.gif

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ ) ಅಡಿ ಸೀಟು ಸಿಗುವುದೆಂದು ಕಾದು ಕುಳಿತು ಸೀಟು ಲಭ್ಯವಾಗದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ ಒಂದೂವರೆ ತಿಂಗಳು ಕಳೆದ ನಂತರ ಇದೀಗ ನಾಲ್ಕನೇ ಸುತ್ತಿನ ಸೀಟು ಹಂಚಿಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಈ ಮಧ್ಯೆ, ಮೂರನೇ ಸುತ್ತಿನ ಪ್ರಕ್ರಿಯೆ ಮುಗಿದ ನಂತರ ಖಾಲಿ ಉಳಿದಿದ್ದ ಸೀಟುಗಳನ್ನು ಭರ್ತಿ ಮಾಡಿಕೊಂಡಿರುವ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ನಾಲ್ಕನೇ ಸುತ್ತು ಪ್ರವೇಶ ಬೇಡವೇ ಬೇಡ ಎಂದು ವಿರೋಧ ವ್ಯಕ್ತಪಡಿಸುತ್ತಿವೆ.

ಇದರ ನಡುವೆ, ಖಾಸಗಿ ಶಾಲೆಯಲ್ಲಿ ದುಬಾರಿ ಶುಲ್ಕ ಕೊಟ್ಟು ಪಡೆದಿರುವ ಸೀಟಿನಡಿ ಮಗುವಿನ ಶಿಕ್ಷಣ ಮುಂದುವರಿಸುವುದಾ? ಅಥವಾ ನಾಲ್ಕನೇ ಆರ್‌ಟಿಇ ಸುತ್ತಿನಲ್ಲಿ ಸೀಟು ಸಿಕ್ಕರೆ ಅಲ್ಲಿಂದ ಮಗುವನ್ನು ಬಿಡಿಸಿ ಆರ್‌ಟಿಇ ಅಡಿ ಸೇರಿಸುವುದಾ ಎಂಬ ಗೊಂದಲ ಪೋಷಕರದು.

ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ )ಅಡಿ ಮೂರನೇ ಸುತ್ತಿನ ಸೀಟು ಹಂಚಿಕೆಯಾಗಿ ತಿಂಗಳು ಕಳೆದರೂ, ಎಷ್ಟು ಮಕ್ಕಳು ದಾಖಲಾಗಿದ್ದಾರೆಂಬ ನಿರ್ದಿಷ್ಟ ಮಾಹಿತಿಯೂ ಸಾರ್ವಜನಿಕ ಶಿಕ್ಷಣ ಇಲಾಖೆ ಬಳಿ ಇಲ್ಲ. ಹೀಗಾಗಿ, ಒಟ್ಟಾರೆ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಸಂಪೂರ್ಣ ಗೋಜಲುಮಯವಾಗಿದೆ.

ಲಭ್ಯ ಸೀಟು: 2017 18ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ 1.28 ಲಕ್ಷ ಸೀಟು
ಲಭ್ಯವಿದ್ದು, ಮೊದಲ ಸುತ್ತಿನ ಆನ್‌ಲೈನ್‌ ಲಾಟರಿಯಲ್ಲಿ 86 ಸಾವಿರ ಮಕ್ಕಳು ಸೀಟು ಪಡೆದಿದ್ದರು. ಉಳಿದ 40 ಸಾವಿರ ಸೀಟಿಗೆ ಎರಡನೇ ಸುತ್ತಿನ ಸೀಟು ಹಂಚಿಕೆ ನಡೆದು, 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ಮೂರನೇ ಸುತ್ತಿನ ಸೀಟು ಹಂಚಿಕೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಹಂತದಲ್ಲೇ ಮಾಡುವ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜೂನ್‌ 14ರಂದು ಶಿಕ್ಷಣ ಇಲಾಖೆ ಕಚೇರಿಯಲ್ಲೆ ಆನ್‌ ಲೈನ್‌ ಲಾಟರಿ ಮೂಲಕ ಹಂಚಿಕೆ ಮಾಡಲಾಗಿತ್ತು.

ಮೂರನೇ ಸುತ್ತಿನಲ್ಲಿ 20 ಸಾವಿರಕ್ಕೂ ಅಧಿಕ ಸೀಟುಗೆ 95,898 ಅರ್ಜಿಯನ್ನು ಪರಿಗಣಿಸಲಾಗಿತ್ತು. ಆದರೆ, ಸೀಟು ಹಂಚಿಕೆಯಾಗಿರುವ ವಿದ್ಯಾರ್ಥಿಗಳ ಪೈಕಿ ಎಷ್ಟು ಮಂದಿ ಶಾಲೆಗೆ ದಾಖಲಾಗಿದ್ದಾರೆಂಬ ಸ್ಪಷ್ಟ ಮಾಹಿತಿ ಇನ್ನೂ ಶಿಕ್ಷಣ ಇಲಾಖೆಗೆ ಸಿಕ್ಕಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಹಂಚಿಕೆಯಾಗಿರುವ ಮತ್ತು ಹಂಚಿಕೆಯಾಗದೇ ಉಳಿದ ಸೀಟುಗಳ ಮಾಹಿತಿಯನ್ನು ಈಗಷ್ಟೆ ಪಡೆಯುತ್ತಿದ್ದಾರೆ.

ಅರ್ಜಿ ತಿದ್ದುಪಡಿಗೆ ಅವಕಾಶ: ಮೂರನೇ ಸುತ್ತಿನ ಸೀಟು ಹಂಚಿಕೆ ನಂತರ ದಾಖಲಾದ ವಿದ್ಯಾರ್ಥಿಗಳ ಮಾಹಿತಿ ಶಿಕ್ಷಣ ಇಲಾಖೆಗೆ ತಲುಪಿದ ನಂತರ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಸಿ, ಸೀಟು ಹಂಚಿಕೆಯಾಗಿದೆ ಇರುವ ಪಾಲಕರು ತಮ್ಮ ಸಮೀಪದ ಶಾಲೆಯಲ್ಲಿ ಆರ್‌ಟಿಇ ಅಡಿ ಸೀಟು ಲಭ್ಯವಿರುವ ಬಗ್ಗೆ www.schooleducation.com ನಲ್ಲಿ ಮಾಹಿತಿ ಪಡೆದು, ಮೂಲ ಅರ್ಜಿಯನ್ನು ತಿದ್ದುಪಡಿ ಮಾಡಿಕೊಳ್ಳಬಹುದು. ಜು.20ರ ತನಕ ಅರ್ಜಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಇಂಥ ನಿರ್ಧಾರಗಳು ಖಾಸಗಿ ಶಾಲೆಯ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ.
ಕೆಲವರನ್ನು ಓಲೈಸಿಕೊಳ್ಳಲು ನಾಲ್ಕನೇ ಸುತ್ತಿನ ಆರ್‌ಟಿಇ ಸೀಟು ಹಂಚಿಕೆ ಮಾಡುತ್ತಿದ್ದಾರೆ. ಅರ್‌ಟಿಇ ಮಕ್ಕಳಿಗೆ ಬಟ್ಟೆ ಮತ್ತು ಪಠ್ಯಪುಸ್ತಕವನ್ನೇ ಸರಿಯಾಗಿ ಹಂಚಿಕೆ ಮಾಡಿಲ್ಲ. ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಸರ್ಕಾರದ ತಲೆಕೆಟ್ಟ ನಿರ್ಧಾರ.

  – ಡಿ. ಶಶಿಕುಮಾರ್‌, ಪ್ರಧಾನ ಕಾರ್ಯದರ್ಶಿ, ರಾಜ್ಯ
ಖಾಸಗಿ ಅನುದಾನರಹಿತ ಶಾಲೆಗಳ ಸಂಘಟನೆ

ನಾಲ್ಕನೇ ಸುತ್ತಿನ ಸೀಟು ಹಂಚಿಕೆಗೆ ಬೇಕಾದ ರೀತಿಯಲ್ಲಿ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ್ದೇವೆ. 
ಉಳಿಕೆಯಾಗಿರುವ ಎಲ್ಲಾ ಸೀಟುಗಳನ್ನು ಹಂಚಿಕೆ ಮಾಡುವ ಮೂಲಕ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ದಾರಿಯಾಗಲಿದೆ.

– ಬಿ.ಕೆ.ಬಸವರಾಜು, ನಿರ್ದೇಶಕ, ಪ್ರಾಥಮಿಕ ಶಿಕ್ಷಣ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.