ಶೋಭಾಗೆ ದೇಶದ ಕಾನೂನು ಗೊತ್ತಾ?: ಖಾದರ್
Team Udayavani, Jul 23, 2017, 7:35 AM IST
ಬಾಗಲಕೋಟೆ: ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ದೇಶ ಮತ್ತು ರಾಜ್ಯದ ಕಾನೂನು ಗೊತ್ತಿಲ್ಲವೇ ಎಂದು ಆಹಾರ ಸಚಿವ ಯು.ಟಿ.ಖಾದರ್ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಮಡಿವಾಳ ಕೊಲೆ ಪ್ರಕರಣದಲ್ಲಿ ಎನ್ಐಎ ತನಿಖೆಗೆ ಒತ್ತಾಯಿಸಿ ಸಂಸದೆ ಶೋಭಾ ಪತ್ರ ಬರೆದಿದ್ದಾರೆ. ಅದೇ ರೀತಿ ಹರೀಶ, ವಿನಾಯಕ, ಪ್ರವೀಣ ಅವರ ಪ್ರಕರಣಗಳಲ್ಲೂ ಒತ್ತಾಯಿಸಲಿ. ಮುಖ್ಯವಾಗಿ ಈಶ್ವರಪ್ಪ ಪಿಎ ಅವರ ಮೇಲೆ ಬಿಎಸ್ವೈ ಪಿಎ ಹಲ್ಲೆ ಮಾಡಿಸಿದ ಘಟನೆಯನ್ನೂ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ಒತ್ತಾಯಿಸುತ್ತಾರಾ ಎಂದು ಪ್ರಶ್ನಿಸಿದರು.
ಎನ್ಐಎ ತನಿಖೆ ಅವಶ್ಯವೆನಿಸಿದಾಗ ಸರ್ಕಾರವೇ ವಹಿಸಿದೆ. ಮೈಸೂರು ಚರ್ಚ್ ಬಾಂಬ್ ಸ್ಫೋಟದ ತನಿಖೆ ವಹಿಸಲಾಗಿತ್ತು. ಈ ದೇಶ ಹಾಗೂ ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಬಂದಾಗ, ಭಯೋತ್ಪಾದನೆ ಚಟುವಟಿಕೆ ಕುರಿತು ಸಂಶಯ ಬಂದಾಗ ಎನ್ಐಎ ತನಿಖೆ ನಡೆಸಲಾಗುತ್ತದೆ. ಸಂಸದೆ ಶೋಭಾ ಕರಂದ್ಲಾಜೆ ಪ್ರಚಾರಕ್ಕಾಗಿ ಏನೇನೋ ಹೇಳಿಕೆ ಕೊಡಬಾರದು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ