ಆರನೇ ವೇತನ ಆಯೋಗ ಕಾರ್ಯಾರಂಭ


Team Udayavani, Jul 23, 2017, 7:20 AM IST

GOVT.gif

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಸ್ಥಾಪಿಸಿರುವ ಆರನೇ ವೇತನ ಆಯೋಗ ತನ್ನ ಕೆಲಸ ಆರಂಭಿಸಿದ್ದು, ಆದಷ್ಟು ಶೀಘ್ರ ವರದಿ ಕೊಡುವ ನಿಟ್ಟಿನಲ್ಲಿ ಜುಲೈ 27ರಿಂದ ಸರ್ಕಾರಿ ನೌಕರರ ಸಂಘಟನೆಗಳೊಂದಿಗೆ ಸಮಾಲೋಚನೆ ಆರಂಭಿಸಲಿದೆ.

ಇದರ ಜತೆಗೆ ಪ್ರಶ್ನಾವಳಿಗಳನ್ನೂ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಸಮಾಲೋಚನೆ, ಪ್ರಶ್ನಾವಳಿಗಳಿಗೆ ಉತ್ತರ
ಪಡೆಯುವುದು, ಸರ್ಕಾರಿ ನೌಕರರ ಸಂಘಟನೆಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆಗೆ ಕಾಲಮಿತಿ
ನಿಗದಿಪಡಿಸಿರುವ ಆಯೋಗ, ಇವೆಲ್ಲವನ್ನೂ ಸೆಪ್ಟೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸಲು ನಿರ್ಧರಿಸಿದೆ. ನಂತರ
ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ.

ಒಂದು ವೇಳೆ ವರದಿ ವಿಳಂಬವಾಗುವುದಾದರೆ ಮಾತ್ರ ನೌಕರರಿಗೆ ಮಧ್ಯಂತರ ಪರಿಹಾರ ನೀಡುವ ಬಗ್ಗೆ ಸರ್ಕಾರಕ್ಕೆ
ಶಿಫಾರಸು ಮಾಡಲು ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಈ ಕುರಿತು ಮಾಹಿತಿ ನೀಡಿದ ಆಯೋಗದ ಅಧ್ಯಕ್ಷರೂ ಆಗಿರುವ ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್‌.ಶ್ರೀನಿವಾಸಮೂರ್ತಿ, ಜುಲೈ 27ರಿಂದ ಸರ್ಕಾರಿ ನೌಕರರೊಂದಿಗೆ ಸಮಾಲೋಚನೆ ಆರಂಭಿಸಿ ಆಗಸ್ಟ್‌ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಸರ್ಕಾರಿ ನೌಕರರ ನೋಂದಾಯಿತ ಸಂಘಗಳು ಮತ್ತು ಇತರರೊಂದಿಗೆ ಸಮಾಲೋಚನಾ ಸಭೆಗಳನ್ನು ಏರ್ಪಡಿಸುವ ಕುರಿತು ಆಯೋಗವು ಪ್ರಶ್ನಾವಳಿಗಳನ್ನುಸಿದಟಛಿಪಡಿಸಿದೆ. ಈ ಪ್ರಶ್ನಾವಳಿಗಳಿಗೆ ಉತ್ತರ ಸಲ್ಲಿಸುವುದರ ಜತೆಗೆ ಇತರೆ ವಿಚಾರಗಳೇನಾದರೂ ಇದ್ದಲ್ಲಿ ಆ ಕುರಿತು ಮಾಹಿತಿ ಸಲ್ಲಿಸುವಂತೆ ಸರ್ಕಾರಿ ನೌಕರರು,  ಪಿಂಚಣಿದಾರರು, ನೌಕರರ ಮತ್ತು ಪಿಂಚಣಿದಾರರ ಸಂಘಗಳಿಗೆ ಸೂಚಿಸಲಾಗಿದೆ ಎಂದರು.

ಏಳು ರೀತಿಯ ಪ್ರಶ್ನಾವಳಿ: ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರಿಗೆ ಸಂಬಂಧಿಸಿದಂತೆ ಏಳು ಪ್ರತ್ಯೇಕ ಪ್ರಶ್ನಾವಳಿಗಳನ್ನು ಆಯೋಗವು ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ. ಪ್ರಶ್ನಾವಳಿಗಳ ಜತೆಗೆ ಸರ್ಕಾರಿ ನೌಕರರ ಪ್ರಸ್ತುತ ವೇತನ ರಚನೆಯ ವಿವರಗಳಿರುವ ಟಿಪ್ಪಣಿಗಳನ್ನೂ ನೀಡಲಾಗಿದೆ ಎಂದು ತಿಳಿಸಿದರು.ಇದಲ್ಲದೆ, ಸಮಾಲೋಚನೆ ಪ್ರಕ್ರಿಯೆಯಲ್ಲಿ ಸಂಸತ್‌ ಸದಸ್ಯರು, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರು, ಪ್ರಮುಖ ಚುನಾಯಿತ ಸಂಸ್ಥೆಗಳ ಸದಸ್ಯರು, ಸರ್ಕಾರದ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರಂತಹ ಹಿರಿಯ ಅಧಿಕಾರಿಗಳ ಅಭಿಪ್ರಾಯಗಳನ್ನು ಪಡೆಯಲೂ ಉದ್ದೇಶಿಸಲಾಗಿದೆ. ಸಾರ್ವಜನಿಕರು ಮತ್ತು ನೌಕರರ ಅಭಿಪ್ರಾಯ ಪಡೆಯಲು ಆಯ್ದ ಜಿಲ್ಲಾ ಕೇಂದ್ರಗಳಲ್ಲೂ ಆಯೋಗದ ಸಭೆ ನಡೆಸಲಾಗುವುದು ಎಂದು ಹೇಳಿದರು.

ಒಟ್ಟಾರೆಯಾಗಿ ಆರನೇ ವೇತನ ಆಯೋಗವು ಸುಮಾರು 5.2 ಲಕ್ಷ ಸರ್ಕಾರಿ ನೌಕರರ ವೇತನ ರಚನೆ ಮತ್ತು ಅವರಿಗೆ ವಿವಿಧ ವೇತನಗಳ ಪರಿಷ್ಕರಣೆ ಬಗ್ಗೆ ಶಿಫಾರಸು ಮಾಡಬೇಕಾಗಿದೆ. ಈ ಶಿಫಾರಸುಗಳು ಸುಮಾರು 5.56 ಲಕ್ಷ ಪಿಂಚಣಿದಾರರು ಹಾಗೂ 1.5 ಲಕ್ಷ ಸ್ಥಳೀಯ ಸಂಸ್ಥೆಗಳ, ಅನುದಾನಿತ ಶಿಕ್ಷಣ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಎಲ್ಲಿಗೆ ಉತ್ತರ ಸಲ್ಲಿಸಬೇಕು? ಏಳು ರೀತಿಯ ಪ್ರಶ್ನಾವಳಿಗಳನ್ನು ಸಿದಟಛಿಪಡಿಸಿರುವ ಆಯೋಗ ಅದನ್ನು ತನ್ನ ವೆಬ್‌ಸೈಟ್‌  ನಲ್ಲಿ ಪ್ರಕಟಿಸಿದ್ದು, ಇವುಗಳಿಗೆ ಉತ್ತರ ಹಾಗೂ ಆಯೋಗಕ್ಕೆ ಸಲ್ಲಿಸಬೇಕಾದ ಇನ್ಯಾವುದೇ ಮಾಹಿತಿ, ಮನವಿಗಳನ್ನು ಕಾರ್ಯದರ್ಶಿ, 6ನೇ ವೇತನ ಆಯೋಗ, ಕಾμ ಬೋರ್ಡ್‌ ಬಿಲ್ಡಿಂಗ್‌ (ಮೊದಲನೇ ಮಹಡಿ), ಡಾ.ಅಂಬೇಡ್ಕರ್‌ ವೀದಿ, ಬೆಂಗಳೂರು-1 ಈ ವಿಳಾಸಕ್ಕೆ ಕಳುಹಿಸುವಂತೆ ಕೋರಿದೆ.

ದಕ್ಷರಿಗೆ ಇನ್‌ಸೆಂಟಿವ್‌? ಅತ್ಯುತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರನ್ನು ಪ್ರೋತ್ಸಾಹಿಸಲು ನೌಕರರ ಸಾಧನೆ ಆಧರಿಸಿ ಇನ್‌ಸೆಂಟಿವ್‌ ನೀಡುವ ಕುರಿತಂತೆ ಪರಿಶೀಲಿಸಿ ವರದಿ ನೀಡಲು ರಾಜ್ಯ ಸರ್ಕಾರ ಆರನೇ ವೇತನ ಆಯೋಗಕ್ಕೆ ಸೂಚನೆ ನೀಡಿದೆ. ಕಾರ್ಪೋರೇಟ್‌ ಕಂಪನಿಗಳು ತನ್ನ ಉತ್ತಮ ನೌಕರರನ್ನು ಪ್ರೋತ್ಸಾಹಿಸಲು ಇನ್‌ಸೆಂಟಿವ್‌ ನೀಡುತ್ತವೆ. ಅದೇ ಮಾದರಿಯಲ್ಲಿ ಸರ್ಕಾರಿ ನೌಕರರಿಗೂ ಇನ್‌ಸೆಂಟಿವ್‌ ನೀಡುವ ಕುರಿತು 
ಪರಿಶೀಲಿಸುವಂತೆ ಸರ್ಕಾರ ಸೂಚಿಸಿದೆ ಎಂದು ಆಯೋಗದ ಅಧ್ಯಕ್ಷ ಶ್ರೀನಿವಾಸಮೂರ್ತಿ ಹೇಳಿದ್ದಾರೆ.

ವೇತನ ಆಯೋಗವು ವರದಿ ನೀಡುವಾಗ, ಸರ್ಕಾರಿ ನೌಕರರ ವೇತನ ಹೆಚ್ಚಳದ ಜತೆಗೆ ಆಡಳಿತ ಸುಧಾರಣೆ
ಬಗ್ಗೆಯೂ ಶಿಫಾರಸು ಗಳನ್ನು ಮಾಡುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ಬೊಕ್ಕಸಕ್ಕೆ ಆಗುವ ಹೊರೆ ತಪ್ಪಿಸಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆಯೂ ಗಮನಹರಿಸುತ್ತದೆ. ಆ ನಿಟ್ಟಿನಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿರಬಹುದು. ಅಂತಿಮವಾಗಿ ಇಲಾಖಾ ಮುಖ್ಯಸ್ಥರು ನೀಡುವ ವರದಿ ಆಧರಿಸಿ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಹೀಗಾಗಿ ಹುದ್ದೆಗಳ ಕಡಿತ, ಹೊರಗುತ್ತಿಗೆ ವಿಚಾರದಲ್ಲಿ ಈಗ ಏನೂ ಹೇಳಲು ಸಾಧ್ಯವಿಲ್ಲ
.
– ಬಿ.ಪಿ.ಮಂಜೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.