ಲಿಂಗಾಯತರ ವಿಚಾರದಲ್ಲಿ ಪೇಜಾವರ ಶ್ರೀಗಳ ಹಸ್ತಕ್ಷೇಪ ಬೇಡ
Team Udayavani, Jul 25, 2017, 1:38 PM IST
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ವಿಚಾರದಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವುದು ಬೇಡ. ಆ ವಿಚಾರ ನೋಡಿಕೊಳ್ಳಲು ನಮ್ಮ ಸ್ವಾಮೀಜಿಗಳಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಕಿಡಿ ಕಾರಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಕುರಿತು ನಮ್ಮ ಸಮುದಾಯದ ಶ್ರೀಗಳಿದ್ದಾರೆ ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಈ ವಿಚಾರದಲ್ಲಿ ಆರ್ಎಸ್ಎಸ್ ಮಧ್ಯ ಪ್ರವೇಶಿಸುವ ಅಗತ್ಯ ಇಲ್ಲ ಎಂದರು.
ಪಂಚ ಪೀಠ ಮಠಾಧಿಪತಿಗಳು ಬರದಿದ್ದರೂ ಲಿಂಗಾಯತ ಪ್ರತ್ಯೇಕ ಧರ್ಮವನ್ನಾಗಿಸಲು ಹೋರಾಟ ನಡೆಸುತ್ತೇವೆ. ಕ್ಯಾಬಿನೆಟ್ನಲ್ಲೂ ಒಪ್ಪಿಸುತ್ತೇವೆ, ಕೇಂದ್ರ ಸರ್ಕಾರ ನಮ್ಮ ಮನವಿ ಪುರಸ್ಕರಿಸದಿದ್ದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದರು.
ನಮ್ಮ ಸಮಾಜದಲ್ಲಿ ಕೆಲವರು ಬಸವಣ್ಣನನ್ನು ನಂಬುವುದಿಲ್ಲ.ಅಂತಹವರು ಹಿಂದೂ ಧರ್ಮದಲ್ಲೇ ಮುಂದುವರಿಯಲಿ ಎಂದರು.
ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟವಾಗಿ ಎನನ್ನೂ ಹೇಳುವುದಿಲ್ಲ,ಅವರು ಆರ್ಎಸ್ಎಸ್ ಕಪಿಮುಷ್ಠಿಯಲ್ಲಿದ್ದಾರೆ.ಲಿಂಗಾಯತ ಧರ್ಮಕ್ಕೆ ಅವರು ಬೆಂಬಲಿಸಬೇಕಿತ್ತು. ಚುನಾವಣೆಯಲ್ಲಿ ತೊಂದರೆಯಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ತಪ್ಪು ಮಾಡುತ್ತಿದ್ದಾರೆ ಎಂದರು.
ಹಿಂದೂ ದೇವತೆಗಳನ್ನು ಒಪ್ಪಿ ಆರಾಧಿಸುವವರು ಹಿಂದೂಗಳೇ ಆಗಿದ್ದಾರೆ. ಆದ್ದರಿಂದ ಲಿಂಗಾಯತರು ತಾವು ಹಿಂದೂ ಧರ್ಮದ ಭಾಗವಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ