ಮರೀಚಿಕೆಯಾದ ರಾಜ್ಯ ಸಚಿವ ಸಂಪುಟ ವಿಸ್ತರಣೆ


Team Udayavani, Aug 1, 2017, 6:50 AM IST

Siddu-Cm.jpg

ಬೆಂಗಳೂರು: ಖಾಲಿ ಇರುವ ಮೂರು ಸಚಿವ ಸ್ಥಾನ ತುಂಬುವ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಳಂಬ ಮಾಡುತ್ತಿರುವುದರಿಂದ ಆಕಾಂಕ್ಷಿಗಳೂ ಸಂಪುಟ ಸೇರುವ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ.

ಡಾ. ಜಿ. ಪರಮೇಶ್ವರ್‌ ರಾಜೀನಾಮೆ ನಂತರ ಮೂರು ಸ್ಥಾನಗಳನ್ನು ಭರ್ತಿ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ,
“ಆಷಾಢ, ಹುಣ್ಣಿಮೆ- ಅಮವಾಸ್ಯೆ ನೋಡುವುದಿಲ್ಲ’ ಎಂದು ಹೇಳಿದ್ದರು. ಆ ನಂತರ ದೆಹಲಿಗೆ ಹೋಗಿ ಬಂದರೂ ಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ನಡೆಸದೆ ವಾಪಸ್‌ ಬಂದರು.

ಸಚಿವಾಕಾಂಕ್ಷಿಗಳು ಕೂಡ ಆಷಾಢದಲ್ಲಿ ವಿಸ್ತರಣೆ ಆಗುವುದಿಲ್ಲ ಎಂಬ ಲೆಕ್ಕಾಚಾರದಲ್ಲಿಯೇ ಆಷಾಢ ಮುಗಿಯುವವರೆಗೂ ಮೌನವಾಗಿದ್ದರು. ಈಗ ಶ್ರಾವಣ ಮಾಸ ಬಂದಿದ್ದು, ಆಗಸ್ಟ್‌ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈಗಿನ ಪರಿಸ್ಥಿತಿಯಲ್ಲಿ ಆಗಸ್ಟ್‌ ಮೊದಲ ವಾರವೂ ಸಂಪುಟ ವಿಸ್ತರಣೆ ಆಗುವುದು ಅನುಮಾನ ಎಂದು ಮುಖ್ಯಮಂತ್ರಿಗಳ ಆಪ್ತ ಮೂಲಗಳು ತಿಳಿಸಿವೆ. ಆ.4 ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ರಾಯಚೂರಿಗೆ ಆಗಮಿಸುವ ಕಾರ್ಯಕ್ರಮವಿದ್ದ ಕಾರಣ ಕಾರ್ಯಕ್ರಮ ಮುಗಿದ ಬಳಿಕ ಸಂಪುಟ ವಿಸ್ತರಣೆಯಾಗುತ್ತದೆ ಎಂದೇ ಹೇಳಲಾಗಿತ್ತು. ಆದರೆ, ಮಾಜಿ ಸಿಎಂ ಧರಂಸಿಂಗ್‌ ನಿಧನ ಹಿನ್ನೆಲೆಯಲ್ಲಿ ಆ.4 ರಂದು ಅವರ 11 ನೇ ದಿನದ ಕಾರ್ಯವಿರುವುದರಿಂದ ರಾಯಚೂರು ಕಾರ್ಯಕ್ರಮ ಮುಂದೂಡಲಾಗಿದೆ. ಆ.12 ರಂದು ಸಮಾವೇಶ ನಡೆಸಲು ರಾಜ್ಯ ಕಾಂಗ್ರೆಸ್‌ ತೀರ್ಮಾನಿಸಿದೆ.

ಆ.12 ರಂದು ರಾಹುಲ್‌ ಗಾಂಧಿ ರಾಜ್ಯಕ್ಕೆ ಆಗಮಿಸಿ ವಾಪಸ್ಸಾದ ನಂತರ ಆ.15ರ ಹೊತ್ತಿಗೆ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆಯಲ್ಲಿ ಆಕಾಂಕ್ಷಿಗಳಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ಆಪ್ತ ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಕುರಿತು ಯಾವುದೇ ರೀತಿಯ ಬೆಳವಣಿಗೆ ಸದ್ಯಕ್ಕೆ ಇಲ್ಲ ಎಂದು ಹೇಳಲಾಗುತ್ತಿದೆ. ಈಗ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಶಾಸಕರು ಕ್ಷೇತ್ರದ ಕಡೆಗೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಸಚಿವ ಸ್ಥಾನಕ್ಕಿಂತ ಮುಂದಿನ ಬಾರಿ ಚುನಾವಣೆ ಗೆಲ್ಲುವುದು ಮುಖ್ಯವಾಗಿದೆ.

ಕೊನೇ ಘಳಿಗೆಯಲ್ಲಿ ಸಚಿವರಾಗುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಸಚಿವಾಕಾಂಕ್ಷಿ ಶಾಸಕರು ಅಭಿಪ್ರಾಯ ಪಟ್ಟಿದ್ದಾರೆ.

ಕ್ಷೇತ್ರದತ್ತ ಗಮನ
ಸಚಿವ ಮಹದೇವ ಪ್ರಸಾದ್‌ ನಿಧನ,ಲೈಂಗಿಕ ಹಗರಣದಿಂದ ಎಚ್‌.ವೈ ಮೇಟಿ ರಾಜೀನಾಮೆ, ಕೆಪಿಸಿಸಿ ಅಧ್ಯಕ್ಷರಾಗಿ
ಮುಂದುವರಿಯಲು ಪರಮೇಶ್ವರ್‌ ಗೃಹ ಖಾತೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜಾತಿ ಹಾಗೂ ಪ್ರಾದೇಶಿಕ ಹಿನ್ನೆಲೆಯಲ್ಲಿ ಮೂರು ಸ್ಥಾನಗಳಿಗೆ 15 ಕ್ಕೂ ಹೆಚ್ಚು ಶಾಸಕರು ಸಂಪುಟ ಸೇರಲು ಲಾಬಿ ಆರಂಭಿಸಿದ್ದರು. ಹೈಕಮಾಂಡ್‌ ಮಟ್ಟದಲ್ಲಿಯೂ ಲಾಬಿ ನಡೆಸಿದ್ದ ಶಾಸಕರು, ಮುಖ್ಯಮಂತ್ರಿ ವಿಳಂಬ ಧೋರಣೆಯಿಂದ ಸಚಿವರಾಗುವ ಆಸೆಗೆ ಆದ್ಯತೆ ನೀಡದೆ, ಚುನಾವಣೆ ದೃಷ್ಠಿಯಿಂದ ಕ್ಷೇತ್ರದ ಕಡೆಗೆ ಗಮನ ಹರಿಸುತ್ತಿದ್ದಾರೆ.

12ರಂದು ರಾಯಚೂರಿಗೆ
ರಾಹುಲ್‌ಗಾಂಧಿ ರಾಹುಲ್‌ ಗಾಂಧಿ ರಾಯಚೂರಿಗೆ ಭೇಟಿ ನೀಡುವ ಕಾರ್ಯಕ್ರಮ ಆಗಸ್ಟ್‌ 12ಕ್ಕೆ ನಿಗದಿಪಡಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಧರಂಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಆ.4 ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಈಗ ಆ.12 ಕ್ಕೆ ಕಾರ್ಯಕ್ರಮ ನಿಗದಿಗೊಳಿಸಲಾಗಿದೆ.

ಹೈದರಾಬಾದ್‌ ಕರ್ನಾಟಕ ಪ್ರದೇಶಕ್ಕೆ
ವಿಶೇಷ ಸ್ಥಾನ ಮಾನ ದೊರೆತ ಹಿನ್ನೆಲೆಯಲ್ಲಿ ಜನರ ಬೇಡಿಕೆ ಈಡೇರಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸುವ ಕಾರ್ಯಕ್ರಮದ ಮೂಲಕ ಹೈದರಾಬಾದ್‌ ಕರ್ನಾಟಕದಲ್ಲಿ ಈಗಿನಿಂದಲೇ ಚುನಾವಣೆ ಪ್ರಚಾರಕ್ಕೆ ರಾಹುಲ್‌ ಗಾಂಧಿ ಮುನ್ನುಡಿ ಬರೆಯಲಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.