ಡಿಕೆಶಿಗೆ ಐಟಿ ಸಮನ್ಸ್; ವಿಚಾರಣೆಗೆ ಹಾಜರಾಗಲು ಸೂಚನೆ
Team Udayavani, Aug 7, 2017, 6:00 AM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಬಳಿಕ ಕೊಂಚ ನಿರಾಳರಾಗಿದ್ದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ಸಮನ್ಸ್ ನೀಡಿದೆ.
ನಾಲ್ಕು ದಿನ ಡಿಕೆಶಿ ಅವರ “ಕೆಂಕೇರಿ’ ನಿವಾಸ ಹಾಗೂ ಆಪ್ತರ ನಿವಾಸಗಳ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿರುವ ಅಪಾರ ಪ್ರಮಾಣದ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ಆರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಡಿಕೆಶಿ ಅವರ ಆಪ್ತ ಜೋತಿಷಿ ದ್ವಾರಕಾನಾಥ್, ಸಚಿನ್ ನಾರಾಯಣ್, ಮಾವ ತಿಮ್ಮಯ್ಯ ಸಹಿತ ಹಲವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಆದರೆ ಎರಡು ದಿನಗಳ ಕಾಲ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಡಿಕೆಶಿ ಐಟಿ ಇಲಾಖೆಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರವಿವಾರ ಮಾಧ್ಯಮದವರ ಜತೆ ಮಾತನಾಡಿದ ಸಚಿವ ಶಿವಕುಮಾರ್, ಐಟಿ ಇಲಾಖೆ ವಿಚಾರಣೆಗೆ ಹಾಜ
ರಾಗುವ ಸಂಬಂಧ ತನಗೆ ಸಮನ್ಸ್ ಜಾರಿಗೊಳಿಸಿದ್ದನ್ನು ಖಚಿತಪಡಿಸಿದ್ದಾರೆ. ಕಾನೂನಿನ ಪ್ರಕಾರ ಐಟಿಯವರು ಸಮನ್ಸ್ ಕೊಟ್ಟಿದ್ದಾರೆ. ನಾನು ವಿಚಾರಣೆಗೆ ಹಾಜರಾಗುತ್ತೇನೆ. ಕಾನೂನಿಗೆ ಎಲ್ಲರೂ ತಲೆಬಾಗಲೇಬೇಕು. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ.
ದಾಖಲೆಗಳ ಪರಿಶೀಲನೆ: ಈಗಾಗಲೇ ಅಘೋಷಿತ 300 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳನ್ನು ಪ್ರಾಥಮಿಕ ತನಿಖೆಯಲ್ಲಿ ಪತ್ತೆ ಹಚ್ಚಿರುವ ಐಟಿ ಅಧಿಕಾರಿಗಳು, ಶೋಧ ಕಾರ್ಯ ನಡೆಸಿದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ವಶಪಡಿಸಿಕೊಂಡು ಬಂದಿದ್ದ ಭಾರೀ ಪ್ರಮಾಣದ ದಾಖಲೆಗಳನ್ನು ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಡಿಕೆಶಿ ಹೆಸರಿನಲ್ಲಿರುವ ಸ್ಥಿರಾಸ್ತಿ ಚರಾಸ್ಥಿ ಸಂಬಂಧದ ದಾಖಲೆಗಳು, ಡಿಕೆಶಿ ನಿವಾಸ ಹೊರತು ಪಡಿಸಿ ಅವರ ಸಂಬಂಧಿಕರು ಹಾಗೂ ಆಪ್ತರು ನಿವಾಸ, ಕಂಪೆನಿಗಳಲ್ಲಿ ದೊರೆತ ದಾಖಲೆಗಳಿಗೂ ಡಿಕೆಶಿ ವ್ಯವಹಾರ, ವಹಿವಾಟುಗಳಿಗೆ ಸಂಬಂಧವಿದೆಯೇ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ಪರಿಶೀಲನೆ ಕಾರ್ಯ ನಡೆಯಲಿದೆ.
ಈ ಪ್ರಕ್ರಿಯೆ ವೇಳೆ ಶೋಧಕಾರ್ಯಕ್ಕೊಳಗಾದ ಪ್ರತಿಯೊಬ್ಬ ರಿಗೂ ಸಮನ್ಸ್ ನೀಡಿ ವಿಚಾರಣೆಗೆ ಕರೆಯಿಸಿಕೊಳ್ಳಲಿದ್ದು, ತನ್ನ ಬಳಿಯಿರುವ ದಾಖಲೆಗಳನ್ನು ಮುಂದಿಟ್ಟುಕೊಂಡು ಅವರ ಹೆಸರಿನಲ್ಲಿರುವ ಆಸ್ತಿ, ತೆರಿಗೆ ಪಾವತಿಸಿದ್ದಾರೆಯೇ ಅಥವಾ ಬೇನಾಮಿ ಹೆಸರುಗಳಲ್ಲಿ ಆಸ್ತಿ ಹೊಂದಿದ್ದಾರೆಯೇ ಎಂಬ ಆಯಾಮಗಳಲ್ಲಿ ಲೆಕ್ಕಪತ್ರಗಳನ್ನಿಟ್ಟು ವಿಚಾರಣೆ ನಡೆಸಲಿದ್ದಾರೆ.
ಒಂದು ವಾರದಲ್ಲಿ ಇಡಿಗೆ ಪತ್ರ ಸಾಧ್ಯತೆ!: ಐಟಿ ಇಲಾಖೆ ಅಧಿಕಾರಿಗಳ ಪ್ರಾಥಮಿಕ ವರದಿಯಲ್ಲಿ ಅಘೋಷಿತ 300 ಕೋಟಿ ರೂ. ಮೌಲ್ಯದ ಆಸ್ತಿಪತ್ರಗಳು ದೊರೆತಿದ್ದು, ಈ ಬಗ್ಗೆ ಮತ್ತಷ್ಟು ಕೂಲಂಕಷವಾಗಿ ಪರಿಶೀಲನೆ ನಡೆಸಲು ನಿರ್ಧರಿಸಿರುವ ಐಟಿ ಅಧಿಕಾರಿಗಳು. ಈ ಸಂಬಂಧ ಮುಂದಿನ ಒಂದು ವಾರದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!