ರಾಯಚೂರು ಸಮಾವೇಶಕ್ಕೆರಾಹುಲ್‌ ಗಾಂಧಿ : ಭರದ ಸಿದ್ಧತೆ


Team Udayavani, Aug 9, 2017, 10:10 AM IST

09-STATE-12.jpg

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಷ್ಟ್ರೀಯ ನಾಯಕರ ಮೂಲಕ ಕಸರತ್ತು ಆರಂಭಿಸಿವೆ. ಆಗಸ್ಟ್‌ 12 ರಿಂದ ಮೂರು ದಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅದಕ್ಕೆ ಪರ್ಯಾಯವಾಗಿ ಕಾಂಗ್ರೆಸ್‌ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್‌ ಗಾಂಧಿ ಕೂಡ ರಾಯಚೂರಿಗೆ ಆಗಮಿಸಿ ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ಮೊಳಗಿಸಲು ಮುಂದಾಗಿದ್ದಾರೆ.

ಆ.12ರಂದು ರಾಯಚೂರಿನಲ್ಲಿ ನಡೆಯುವ ಹೈದರಾಬಾದ್‌ ಕರ್ನಾಟಕ ಭಾಗದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಮಂಗಳವಾರ ಯುವ ಕಾಂಗ್ರೆಸ್‌ ಘಟಕವು ಸಿಂಧನೂರಿನಿಂದ ರಾಯಚೂರುವರೆಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ “ಕಿಸಾನ್‌ ಆಕ್ರೋಶ್‌ ಯಾತ್ರೆ’ ಆರಂಭಿಸಿದ್ದಾರೆ. ಆ.12ರಂದು ರಾಹುಲ್‌ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೈ-ಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ನಿರಂತರ ಹೋರಾಟ ನಡೆದಾಗ 2008ರಲ್ಲಿ ರಾಹುಲ್‌ ಗಾಂಧಿ ಹೈದರಾಬಾದ್‌ ಕರ್ನಾಟಕಕ್ಕೆ ಆಗಮಿಸಿ ನೀಡಿದ್ದ ಭರವಸೆಯಂತೆ ಯುಪಿಎ ಸರ್ಕಾರ ಸಂವಿಧಾನದ 371(ಜೆ) ಕಲಂಗೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ಒದಗಿಸಿತ್ತು. ಅದನ್ನು ಈಗ ಆ ಭಾಗದ ಆರು ಜಿಲ್ಲೆಗಳ ಜನರಿಗೆ ನೆನಪಿಸಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡುವಂತೆ ಜನರ ಸೆಳೆಯಲು ಈ ಸಮಾವೇಶವನ್ನು ವೇದಿಕೆಯಾಗಿ ಬಳಸಿಕೊಳ್ಳಲಾಗುತ್ತಿದೆ.

4 ಲಕ್ಷ ಜನರ ಸೇರಿಸುವ ಉದ್ದೇಶ: ಹೈ-ಕ ಭಾಗದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಂದ ರಾಯಚೂರು ಸಮಾವೇಶಕ್ಕೆ ಸುಮಾರು 4 ಲಕ್ಷ ಕಾರ್ಯಕರ್ತರನ್ನು ಸೇರಿಸಲು ಕಾಂಗ್ರೆಸ್‌ ಯೋಜನೆ ರೂಪಿಸಿದೆ. ಉತ್ತರ ಕರ್ನಾಟಕ ಜವಾಬ್ದಾರಿ ಹೊತ್ತುಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ್‌ ಈಗಾಗಲೇ ಎಲ್ಲ ಜಿಲ್ಲೆಗಳ ಮುಖಂಡರನ್ನು ಭೇಟಿ ಮಾಡಿ, ಸಮಾವೇಶದ ಯಶಸ್ವಿಗೆ ಕಾರ್ಯಕರ್ತರನ್ನು ಸೇರಿಸುವ ಕುರಿತಂತೆ ನಿರಂತರ ಓಡಾಟ ನಡೆಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಕೂಡಾ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ರಾಜ್ಯದಲ್ಲಿ ಕಾಂಗ್ರೆಸ್‌ ಶಕ್ತಿಯುತವಾಗಿದೆ ಎಂಬುದನ್ನು ಈ ಸಮಾವೇಶದ ಮೂಲಕ ತೋರಿಸುವ ಲೆಕ್ಕಾಚಾರ ನಡೆಸಿದ್ದಾರೆ. ಹೀಗಾಗಿ ರಾಯಚೂರಿನಲ್ಲಿ ನಡೆಯುವ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

ರಾಹುಲ್‌ ಗಾಂಧಿ ಮಾತು ಕೊಟ್ಟಂತೆ ಹೈದರಾಬಾದ್‌- ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿದ್ದಾರೆ. ನಾವು ಆ ಭಾಗದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧರಿಸಿರುವುದರಿಂದ ಕಾಂಗ್ರೆಸ್‌ ಕೊಟ್ಟ ಮಾತು ಉಳಿಸಿಕೊಂಡಿದೆ ಎಂದು ಜನರಿಗೆ ತಿಳಿಸಲು ಬರುತ್ತಿದ್ದಾರೆ. ಹೈ-ಕ ಭಾಗದ ಆರು ಜಿಲ್ಲೆಗಳ ಸುಮಾರು 4 ಲಕ್ಷ ಜನರನ್ನು ಸೇರಿಸುವ ಉದ್ದೇಶ ಇದೆ.
ಎಸ್‌.ಆರ್‌. ಪಾಟೀಲ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.