ಸಚಿವ ಡಿಕೆಶಿ ರಾಜೀನಾಮೆ ನೀಡಲಿ: ಈಶ್ವರಪ್ಪ
Team Udayavani, Aug 10, 2017, 7:55 AM IST
ದೇವದುರ್ಗ: “ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು 300 ಕೋಟಿ
ರೂ. ಬೇನಾಮಿ ಆಸ್ತಿ ಪತ್ತೆ ಮಾಡಿದ್ದು, ಇದರ ಸತ್ಯಾಂಶ ಹೊರಬರುವವರೆಗೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ
ನೀಡಬೇಕು’ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, “ಭ್ರಷ್ಟಾಚಾರ, ಕಪ್ಪು ಹಣ ಇರುವುದನ್ನು ಪತ್ತೆ ಹಚ್ಚಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಕಾಂಗ್ರೆಸ್ ಮುಖಂಡರು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.
ಬಿಜೆಪಿ ಸಂಸದ ಸಿದ್ದೇಶ್ವರ್ ಮನೆ ಮೇಲೆ ಐಟಿ ದಾಳಿ ಆಗಿದ್ದು ಇವರಿಗೆ ಗೊತ್ತಿಲ್ಲವೇ’ ಎಂದು ಪ್ರಶ್ನಿಸಿದರು. ತನ್ನ ಆಪ್ತ ಸಹಾಯಕ, ಯಡಿಯೂರಪ್ಪನವರ ಆಪ್ತ ಸಹಾಯಕ ಮಧ್ಯೆ ನಡೆದ ಗದ್ದಲ ಅವರಿಬ್ಬರ ವೈಯಕ್ತಿಕ ವಿಚಾರ. ಈ ಪ್ರಕರಣದಲ್ಲಿ ತನ್ನನ್ನು ಮತ್ತು ಬಿಎಸ್ವೈ ಅವರನ್ನು ತಳುಕು ಹಾಕುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು