ಸಂಘ ಪರಿವಾರ-ಬಿಜೆಪಿ ಮಧ್ಯೆ ಒಗ್ಗಟ್ಟು ಮೂಡಿಸಿದ ಶಾ


Team Udayavani, Aug 15, 2017, 9:41 AM IST

15-STATE-3.jpg

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅಂತರ ಕಾಯ್ದುಕೊಳ್ಳುತ್ತಿರುವ ಸಂಘ ಪರಿವಾರ ಮತ್ತು ಬಿಜೆಪಿಯನ್ನು ಮತ್ತೆ ಒಟ್ಟುಗೂಡಿಸುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮುಂದಿನ ದಿನಗಳಲ್ಲಿ ಇಬ್ಬರೂ ಒಟ್ಟಾಗಿ ಕಾರ್ಯತಂತ್ರಗಳನ್ನು ರೂಪಿಸಲು ವೇದಿಕೆ ಸಿದ್ಧಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಾದಲ್ಲಿ ಸಂಘ ಪರಿವಾರದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು, ಪಕ್ಷ ಮತ್ತು ಸಂಘ ಪರಿವಾರದ ನಡುವೆ ಹಿಂದೆ ಇದ್ದ ಸಾಮರಸ್ಯ ಸ್ವಲ್ಪ ಮಟ್ಟಿಗೆ ಕೆಡಲು ಕಾರಣಗಳನ್ನು ತಿಳಿದುಕೊಂಡರಲ್ಲದೆ, ಪರಿವಾರದ
ಮುಖಂಡರನ್ನು ದೂರವಿಟ್ಟು ಯಾವುದೇ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಬಿಜೆಪಿ ನಾಯಕರಿಗೆ ನಿರ್ದೇಶನ ನೀಡುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು ಎಂದು ಮೂಲಗಳು ಹೇಳಿವೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆದಿರುವ ಹಿಂದೂ ಸಂಘಟನೆಯ ಕಾರ್ಯಕರ್ತರ
ಹತ್ಯೆ ಸಂಬಂಧ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆರ್‌ಎಸ್‌ಎಸ್‌ ಮುಖಂಡರು ಒತ್ತಾಯಿಸಿದಾಗ, ಈ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಕಾನೂನು ಚೌಕಟ್ಟು ಮತ್ತು ತಮ್ಮ ವ್ಯಾಪ್ತಿಯೊಳಗೆ ಸಾಧ್ಯವಿರುವ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದೆ. ರಾಜಕೀಯ ಪಕ್ಷವಾಗಿ ನಾವೇನು ಮಾಡಬಹುದೋ ಅದನ್ನು ಖಂಡಿತವಾಗಿಯೂ ಮಾಡುತ್ತೇವೆ. ಇದರ ಜತೆಗೆ ಸಂಘ ಪರಿವಾರದ ಕಡೆಯಿಂ ದಲೂ ಹೋರಾಟ ಕೈಗೊಳ್ಳುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿ ಸುವ ಕೆಲಸ ಆಗಬೇಕು ಎಂದು ಹೇಳಿದರು ಎನ್ನಲಾಗಿದೆ.

ಶೇ.60ರಷ್ಟು ಹೊಸಬರಿಗೆ ಟಿಕೆಟ್‌?: ಪಕ್ಷ ಸಂಘಟನೆ ಹಾಗೂ ಚುನಾವಣೆ ಸಂಬಂಧಿಸಿದಂತೆ ಯುವಕರನ್ನು ಹಾಗೂ ಹೊಸಬರನ್ನು ಪಕ್ಷಕ್ಕೆ ಕರೆತರುವ ಕೆಲಸ ನಡೆಯುತ್ತಿದೆ. ಹೊಸಬರಿಗೆ ಹೆಚ್ಚಿನ ಅವಕಾಶ ಹಾಗೂ ಜವಾಬ್ದಾರಿ ನೀಡುತ್ತಿದ್ದೇವೆ. ಪಕ್ಷದಲ್ಲಿ ತುಂಬಾ ಬದಲಾವಣೆ ಮಾಡಲಿದ್ದೇವೆ. ಹಾಗೆಯೇ ಮುಂದಿನ ವಿಧಾನ ಚುನಾವಣೆಯಲ್ಲಿ ಶೇ.60ರಷ್ಟು ಹೊಸಬರಿಗೆ ಹಾಗೂ ಯುವಕರಿಗೆ ಸೀಟು ನೀಡಲಿದ್ದೇವೆ. ಶಾಸಕರಾಗಿರಲಿ ಅಥವಾ ಮಾಜಿ ಶಾಸಕರಾಗಿರಲಿ, ಅವರ ಕಾರ್ಯವೈಖರಿಯ ಆಧಾರದಲ್ಲಿ ಸೀಟು ನೀಡಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸುತ್ತೇವೆ. ಅನೇಕರು ನಾನೇ ಅಭ್ಯರ್ಥಿ ಎಂಬಂತೆ ಬಿಂಬಿಸಿಕೊಳ್ಳುತಿರುವುದು ಗಮನಕ್ಕೆ ಬಂದಿದೆ. ಅದಕ್ಕೆಲ್ಲ ಕಡಿವಾಣ ಹಾಕಲಿದ್ದೇವೆ ಎಂಬುದನ್ನು ಆರ್‌ಎಸ್‌
ಎಸ್‌ ಮುಖಂಡರಿಗೆ ಶಾ ಮಾಹಿತಿ ನೀಡಿದರು. 

ಅಲ್ಪಸಂಖ್ಯಾತರ ಓಲೈಕೆ ಮಾಡಲ್ಲ: ನರೇಂದ್ರ ಮೋದಿಯವರು ಇತ್ತೀಚೆಗೆ ಘೋಷಣೆ ಮಾಡಿದ ಶಾದಿ ಶಗೂನ್‌ ಯೋಜನೆಯ ಬಗ್ಗೆ ಆರ್‌ಎಸ್‌ಎಸ್‌ ನಾಯಕರು ಆಕ್ಷೇಪ ವ್ಯಕ್ತಪಡಿಸಿದಾಗ, ಅಲ್ಪಸಂಖ್ಯಾತರ ಓಲೈಕೆಗಾಗಿ ಈ ಕೆಲಸ ಮಾಡುತ್ತಿಲ್ಲ. ಅವರಿಗೆ ನಿಗದಿಪಡಿಸಿರುವ ಅನುದಾನ
ಸದ್ಬಳಕೆಯಾಗಬೇಕು ಎಂಬ ದೃಷ್ಟಿಯಿಂದ ಮತ್ತು ಒಂದು ಸರ್ಕಾರವಾಗಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರೆನ್ನಲಾಗಿದೆ.ಕೇಂದ್ರ ಸಚಿವರಾದ ಅನಂತ್‌ ಕುಮಾರ್‌, ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಸಂಘಟನಾ ಕಾರ್ಯದರ್ಶಿ ಅರುಣ್‌
ಕುಮಾರ್‌, ಆರ್‌ಎಸ್‌ಎಸ್‌ ಪ್ರಮುಖರಾದ ಮುಕುಂದ್‌, ಶ್ರೀಧರ್‌ ಸ್ವಾಮಿ, ತಿಪ್ಪೇಸ್ವಾಮಿ, ಗುರುಪ್ರಸಾದ್‌, ಸುಧೀರ್‌ ಸೇರಿದಂತೆ ಎಬಿವಿಪಿ, ವಿಶ್ವಹಿಂದು ಪರಿಷತ್‌, ಸೇವಾ ಭಾರತಿ, ಕಿಸಾನ್‌ ಸಂಘ, ವನವಾಸಿ ಕಲ್ಯಾಣಾಶ್ರಮ, ಶಿಕ್ಷಣ ಭಾರತಿ ಮೊದಲಾದ ಸಂಘ ಪರಿವಾರದ ಪ್ರಮುಖರು
ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.