ಮಂತ್ರಾಲಯದಲ್ಲಿಂದು 2500 ಗಾಯಕರ ಕೀರ್ತನೆ-ಗಾಯನ


Team Udayavani, Aug 20, 2017, 8:05 AM IST

Sri-Subudhendra-Teertha-Swa.jpg

ರಾಯಚೂರು: ತೆಲುಗು ಬುಕ್‌ ಆಫ್‌ ರೆಕಾರ್ಡ್‌ ಸೇರಿ 9 ವಿವಿಧ ದಾಖಲೆಗಳ ನಿರ್ಮಾಣಕ್ಕಾಗಿ ಮಂತ್ರಾಲಯದಲ್ಲಿ ಭಾನುವಾರ 2,500 ಗಾಯಕರಿಂದ ಏಕಕಾಲಕ್ಕೆ ಆಂಜನೇಯ ಸ್ವಾಮಿಯ 108 ಕೀರ್ತನೆಗಳ ಗಾಯನ ಜರುಗಲಿದೆ.

ಮಂತ್ರಾಲಯ ಆಡಳಿತ ಮಂಡಳಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಠದ ವಿದ್ಯಾಪೀಠದ ಪ್ರಾಚಾರ್ಯ ಡಾ| ವಾದಿರಾಜಾಚಾರ್ಯ ಈ ಬಗ್ಗೆ ಮಾಹಿತಿ ನೀಡಿದರು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಐದನೇ ಚಾತುರ್ಮಾಸ್ಯ ನಿಮಿತ್ತ ವಿವಿಧ ಭಜನಾ ಮಂಡಳಿಗಳಿಂದ ಭಾನುವಾರ ಕಾರ್ಯಕ್ರಮ ಜರುಗಲಿದೆ.

ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ನಿಂದ ಕಾರ್ಯಕ್ರಮ ಆಯೋಜಿಸಿದ್ದು, ಸತತ ಆರು ಗಂಟೆ ಹರಿದಾಸರ 108 ಆಂಜನೇಯ ಕೀರ್ತನೆಗಳ ಗಾಯನ ಜರುಗಲಿದೆ.

ತೆಲುಗು ಬುಕ್‌ ಆಫ್‌ ರೆಕಾರ್ಡ್‌, ಇಂಡಿಯನ್‌ ಟ್ಯಾಲೆಂಟ್‌ ಆರ್ಗನೈಸೇಷನ್‌ ರೆಕಾರ್ಡ್‌, ವಂಡರ್‌ ಬುಕ್‌ ಆಫ್‌ ರೆಕಾರ್ಡ್‌, ವರ್ಲ್ ರೆಕಾರ್ಡ್‌ ಇಂಡಿಯಾ, ಜೀನಿಯಸ್‌ ಬುಕ್‌ ಆಫ್‌ ರೆಕಾರ್ಡ್‌, ಮಿರಾಕಲ್‌ ವರ್ಲ್ಡ್ ರೆಕಾರ್ಡ್‌, ವರ್ಲ್ಡ್ ಬುಕ್‌ ಆಫ್‌ ಇಂಡಿಯಾ, ಗೋಲ್ಡ್‌ನ ಸ್ಟಾರ್‌ ರೆಕಾರ್ಡ್‌, ಹೈರೇಂಜ್‌ ಬುಕ್‌ ಆಫ್‌ ರೆಕಾರ್ಡ್‌, ಮಾರ್ಬಲೆಸ್  ರೆಕಾರ್ಡ್‌ ಸೇರಿ ಒಟ್ಟು 9 ದಾಖಲೆ ನಿರ್ಮಿಸಲು ಸಿದಟಛಿತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಸೇರಿ ಒಡಿಶಾ, ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ವಿವಿಧ ಭಜನಾ ಮಂಡಳಿಗಳ 2,500 ಸದಸ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಭಜನಾ ಮಂಡಳಿಗಳ ಸದಸ್ಯರಿಗೂ ವಸತಿ, ಊಟ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ. ಕನ್ನಡ ಭಾಷೆ ಬಾರದವರಿಗೆ ತರಬೇತಿ ನೀಡಿದ್ದು, ಅವರೂ ಗಾಯನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಠದ ಗುರುಸಾರ್ವಭೌಮ ದಾಸ ಸಾಹಿತ್ಯದ ವಿಶೇಷಾ ಧಿಕಾರಿ ಅಪ್ಪಣ್ಣಾಚಾರ್ಯ ಕೌತಾಳಂ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ ಎಂದರು.

ಮಠದ ವ್ಯವಸ್ಥಾಪಕ ಎಸ್‌.ಕೆ. ಶ್ರೀನಿವಾಸರಾವ್‌, ಗುರು ಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್‌ನ ವಿಶೇಷ ಅ ಧಿಕಾರಿ ಅಪ್ಪಣ್ಣಾಚಾರ್ಯ, ನಾರಾಯಣದಾಸ,ಗುರುರಾಜ, ಸುಳಾದಿ ಹನುಮೇಶಾಚಾರ್ಯ ಇತರರಿದ್ದರು.

ಮಂತ್ರಾಲಯದ ರಾಯರ ಮಠದಲ್ಲಿ ಭಾನುವಾರ ವಿದ್ವಾಂಸರ ಸಮಾವೇಶ ಆಯೋಜಿಸಲಾಗಿದ್ದು, ದೇಶದ ವಿವಿಧ ರಾಜ್ಯಗಳ 300ಕ್ಕೂ ಹೆಚ್ಚು ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ. ಧರ್ಮ ಪ್ರಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಮಠದ ಪ್ರಗತಿ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು.
– ಶ್ರೀ ಸುಬುಧೇಂದ್ರ ತೀರ್ಥರು, ಮಠದ
ಪೀಠಾಧಿಪತಿ, ಮಂತ್ರಾಲಯ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.