ಆಕಸ್ಮಿಕ ಬೆಂಕಿ ಅವಘಡ: ನವರತ್ನನ್ ಆ್ಯಂಟಿಕ್ ಆರ್ಟ್ ಮಳಿಗೆ ಧಗಧಗ
Team Udayavani, Aug 22, 2017, 7:36 AM IST
ಬೆಂಗಳೂರು: ನಗರದ ಎಂಜಿ ರಸ್ತೆಯ ಕಾವೇರಿ ಜಂಕ್ಷನ್ ಬಳಿಯಲ್ಲಿರುವ ನವರತ್ನನ್ ಆ್ಯಂಟಿಕ್ ಆರ್ಟ್ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮಳಿಗೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಇದರಿಂದ ಮಳಿಗೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಅಹುತಿಯಾಗಿದೆ.
9 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.