ಜಾನುವಾರು ಹತ್ಯೆ ಪ್ರಕರಣ: 33ಕ್ಕೂ ಅಧಿಕ ಜನರು ವಶಕ್ಕೆ
Team Udayavani, Sep 3, 2017, 12:15 PM IST
ಹುನಗುಂದ(ಬಾಗಲಕೋಟೆ): ಪಟ್ಟಣದಲ್ಲಿ ಬಕ್ರೀದ್ ನಿಮಿತ್ತ ನಡೆದಿದೆ ಎನ್ನಲಾದ ಜಾನುವಾರು ಹತ್ಯೆ ಪ್ರಕರಣದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೆದಿದೆ. ಇದರಿಂದ ಓರ್ವ ವ್ಯಕ್ತಿ
ಗಾಯಗೊಂಡಿದ್ದು, ಪೊಲೀಸರು 33ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಬಸ್ ನಿಲ್ದಾಣ ಹಿಂಬದಿಯ ಶಹಾನ್ ಷಾ ಓಣಿಯಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಜಾನುವಾರು ಬಲಿಕೊಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಹಿಂದೂ ಪರ ಸಂಘಟನೆ ಯುವಕರು, ಜಾನುವಾರು ನಿಷೇಧ ಕಾಯ್ದೆ ಜಾರಿಯಲ್ಲಿದೆ, ಜಾನುವಾರು ಹತ್ಯೆ ಮಾಡಬೇಡಿ ಎಂದು ತಕರಾರು ತೆಗೆದಿದ್ದಾರೆ. ಇದಕ್ಕೆ ಸೊಪ್ಪು ಹಾಕದಿದ್ದಾಗ ಯುವಕರು, ಆ ದೃಶ್ಯಗಳನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ, ಇದು ಗಲಾಟೆ ತೀವ್ರಗೊಳ್ಳಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ಹರಡುತ್ತಿದ್ದಂತೆ ಮತ್ತಷ್ಟು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅದರಲ್ಲಿ ಓರ್ವ ಯುವಕನ ತಲೆಗೆ ಪೆಟ್ಟಾಗಿ,
ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹಿಂದೂ ಪರ ಸಂಘಟನೆಯ 5 ಹಾಗೂ ಮುಸ್ಲಿಂ ಸಮುದಾಯದ 28ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ
ನಡೆಸಿದ್ದಾರೆ. ಜತೆಗೆ ಶಾಂತಿ ಸುವ್ಯವಸ್ಥೆಗೆ ಸೂಚಿಸಿದ್ದು, ಘಟನೆಗೆ ಕಾರಣರಾದವರ ವಿರುದಟಛಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?