ಮಂಗಳೂರು ಚಲೋ: ಹಲವು ನಾಯಕರು ವಶಕ್ಕೆ ;ಆಕ್ರೋಶ 


Team Udayavani, Sep 7, 2017, 10:40 AM IST

20.jpg

ಮಂಗಳೂರು: ಬಿಜೆಪಿ ಯುವಮೋರ್ಚಾ ಗುರುವಾರ ನಡೆಸುತ್ತಿರುವ ಮಂಗಳೂರು ಚಲೋ ರ‍್ಯಾಲಿ ಜ್ಯೋತಿ ಸರ್ಕಲ್‌ನಲ್ಲೇ ನಾಯಕರ ಖಂಡನಾ ಭಾಷಣದೊಂದಿಗೆ ರ‍್ಯಾಲಿ ಅಂತ್ಯವಾಗಿದ್ದು ಹೊರಡುವ ಮುನ್ನವೇ ಹಲವರನ್ನು ಬಂಧಿಸಿ ತಡೆ ಒಡ್ಡಲಾಗಿದೆ. ಬೈಕ್‌ ರ‍್ಯಾಲಿಯಾಗಲಿ ಪಾದಯಾತ್ರೆಯಾಗಲಿ ನಡೆಸುವುದಕ್ಕೆ ಪೊಲೀಸರು ಅವಕಾಶ ನಿಡಲಿಲ್ಲ.

ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರೊಂದಿಗೆ ಹೊರಡಲು ಮುಂದಾಗ ಬಿ.ಎಸ್‌.ಯಡಿಯೂರಪ್ಪ, ಶೋಭಾ ಕರಂದ್ಲಾಜೆ , ಈಶ್ವರರಪ್ಪ, ಆರ್‌.ಅಶೋಕ್‌, ನಳಿನ್‌ ಕುಮಾರ್‌ ಕಟೀಲ್‌ , ಪ್ರತಾಪ್‌ ಸಿಂಹ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. 

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ತೀವ್ರ ವಾಗ್ವಾದ ನಡೆಯಿತು. 60 ಕ್ಕೂ ಹೆಚ್ಚು ಬಸ್‌ಗಳಲ್ಲಿ ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದು ಕರೆದೊಯ್ಯಲಾಗಿದೆ.


ಜ್ಯೋತಿ ಸರ್ಕಲ್‌ನಲ್ಲೇ ಪ್ರತಿಭಟನಾ ಭಾಷಣ 

ಬಿಜೆಪಿ ನಾಯಕರು ನೆಹರು ಮೈದಾನಕ್ಕೆ ರ‍್ಯಾಲಿಯಲ್ಲಿ ತೆರಳಲು ಪೊಲೀಸರು ಅವಕಾಶ ನೀಡದ ಹಿನ್ನಲೆಯಲ್ಲಿ ಜ್ಯೋತಿ ಸರ್ಕಲ್‌ನಲ್ಲೇ ತೆರದ ವಾಹನದಲ್ಲೇ ವೇದಿಕೆ ನಿರ್ಮಿಸಲಾಗಿದ್ದು ಅಲ್ಲಿಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಷಣ ಮಾಮಾಡಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ನೆಹರೂ ಮೈದಾನದಲ್ಲಿ ಸಭೆ ಆಯೋಜಿಸುವುದಕ್ಕೆ ತೆರಳುತ್ತಿದ್ದ ಹಲವನ್ನು ವಶಕ್ಕೆ ಪಡೆಯಲಾಗಿದ್ದು, ನೂರಾರು ಸಂಖ್ಯೆಯ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಬೈಕ್‌ ಏರಿದ್ದ ಹಲವರಿಗೆ ತಡೆ ಒಡ್ಡಿದ್ದಾರೆ. ಪ್ರಮುಖ ನಾಯಕರನ್ನು ವಶಕ್ಕೆ ಪಡೆದ ಬಗ್ಗೆ ವರದಿಯಾಗಿದೆ. 

ನೆಹರೂ ಮೈದಾನದಲ್ಲಿ ಸಮಾವೇಶ ನಡೆಸಲು ಷರತ್ತುಬದ್ಧ ಅನುಮತಿ ನೀಡಲಾಗಿದ್ದು,  ಸಮಾವೇಶವನ್ನು ಪೂರ್ವಾಹ್ನ 11ರಿಂದ ಮಧ್ಯಾಹ್ನ 2 ಗಂಟೆ ತನಕ ನಡೆಸ ಬಹುದು ಎಂದು ಆಯುಕ್ತರು ತಿಳಿಸಿದ್ದರು. 

ನಗರದ ಜ್ಯೋತಿ ಸರ್ಕಲ್‌ನಲ್ಲಿ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣಗೆಗಳನ್ನು ಕೂಗಿದರು. ತೊಲಗಲಿ ತೊಲಗಲಿ ಹಿಂದೂ ವಿರೋಧಿ ಸರ್ಕಾರ ತೊಲಗಲಿ ಎನ್ನುವ ಘೋಷಣೆಗಳು ಕೇಳಿ ಬಂದವು. 

ಜ್ಯೋತಿ ಸರ್ಕಲ್‌ನಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದ್ದು,ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ನಗರ ಪ್ರವೇಶಿಸುವ ಪ್ರತಿಯೊಂದು ರಸ್ತೆಗಳಲ್ಲೂ ಪೊಲೀಸರಿಂದ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

ಟ್ರಾಫಿಕ್‌ನಲ್ಲಿ ಭಾರೀ ವ್ಯತ್ಯಯವಾಗಿದ್ದು  ಶಾಲಾ ಕಾಲೇಜುಗಳಿಗೆ ತೆರಳಬೇಕಾಗಿದ್ದ ವಿದ್ಯಾರ್ಥಿಗಳು, ಕಚೇರಿಗಳಿಗೆ ತೆರಳಬೇಕಾಗಿದ್ದವರು ಪರದಾಡಬೇಕಾಯಿತು. ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ಸುಗಳ ಮಾರ್ಗಸೂಚಿ ಬದಲಾವಣೆ ಮಾಡಲಾಗಿದೆ. 

ರ‍್ಯಾಲಿಗೆ ಅನುಮತಿ ನಿರಾಕರಿಸಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. 

ಬೆಳಗ್ಗಿನ ನೆಹರೂ ಮೈದಾನದ ಚಿತ್ರಣ 

ಆರೆಸ್ಸೆಸ್‌ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪಿಎಫ್ ಐ, ಕೆಎಫ್ ಡಿ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸ ಬೇಕು ಹಾಗೂ ಈ ಸಂಘಟನೆಗಳಿಗೆ ಬೆಂಬಲವಾಗಿ ನಿಂತಿರುವ ಅರಣ್ಯ ಸಚಿವ ಬಿ. ರಮಾನಾಥ ರೈ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ “ಮಂಗಳೂರು ಚಲೋ’ ರ‍್ಯಾಲಿ ಹಮ್ಮಿಕೊಂಡಿದೆ.  ಬೈಕ್‌ ಜಾಥಾಗೆ ರಾಜ್ಯಾದ್ಯಂತ ಪೊಲೀಸರು ತಡೆ ಒಡ್ಡಿದ್ದರು. 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.