ರಾಜಕೀಯ ಜಗಳವಾದ ಶಿಕಾಗೋ ಭಾಷಣದ 125ನೇ ವರ್ಷಾಚರಣೆ


Team Udayavani, Sep 12, 2017, 6:25 AM IST

Swami-Vivekananda-Chicago-s.jpg

ಬೆಂಗಳೂರು: ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವರ್ಷಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ಇದೀಗ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ಮಧ್ಯೆ ರಾಜಕೀಯ ಜಗಳದ ವೇದಿಕೆಯಾಗಿದೆ.

ಪ್ರಧಾನಿ ಭಾಷಣವನ್ನು ಕೇಳಲು ವ್ಯವಸ್ಥೆ ಮಾಡುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಗಳಿಗೆ ಸೂಚನೆ ನೀಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರೆ, ಸಿದ್ದರಾಮಯ್ಯ ತಮ್ಮ ಈ ಮಾತಿಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವರ್ಷಾಚರಣೆ  ಮತ್ತು ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಜನ್ಮಶತಾಬ್ಧಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಭಾಷಣವನ್ನು ಕಡ್ಡಾಯವಾಗಿ ವೀಕ್ಷಿಸಬೇಕೆಂಬ ಯುಜಿಸಿ ಆದೇಶ ಆಕ್ಷೇಪಾರ್ಹ. ದೀನದಯಾಳ್‌ ಉಪಾಧ್ಯಾಯರ ಬಗ್ಗೆ ಭಾಷಣವಾದರೆ ಅದು ಹಿಂದುತ್ವದ ಭಾಷಣವೇ ಆಗಿರುತ್ತದೆ. ಅಂತಹ ಭಾಷಣವನ್ನು ಕೇಳುವ ಅಗತ್ಯವಿಲ್ಲ. ಈ ಬಗ್ಗೆ ವಿಶ್ವವಿದ್ಯಾನಿಲಯಗಳ ಜತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಬಿ.ಎಸ್‌.ಯಡಿಯೂರಪ್ಪ, ಎಲ್ಲವನ್ನೂ ಹಳದಿ ಕಣ್ಣಿನಿಂದ ನೋಡುವ ಮುಖ್ಯಮಂತ್ರಿಗಳ ರೀತಿಯನ್ನು ಖಂಡಿಸುತ್ತೇನೆ. ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಹಿಂದೂ ಸಂಸ್ಕೃತಿ ಬಗ್ಗೆ ಮಾಡಿದ್ದ ಭಾಷಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಣೆ ಮಾಡುವುದನ್ನು ಇತರರು ಕೇಳಬೇಕು ಎಂಬುದಕ್ಕೆ ಆಕ್ಷೇಪ ವ್ಯಕ್ತಪಡಿಸುವುದಾದರೆ ಈ ದೇಶದ ಬಗ್ಗೆ, ಹಿಂದೂ ಸಂಸ್ಕೃತಿ ಬಗ್ಗೆ, ಭಾರತೀಯರ ಬಗ್ಗೆ ನಿಲುವೇನು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಜತೆಗೆ ಇವರು ಮುಸ್ಲಿಮರೋ, ಕ್ರೈಸ್ತರೋ, ಹಿಂದೂಗಳ್ಳೋ ಎಂಬುದನ್ನು ಜನತೆಗೆ ತಿಳಿಸಬೇಕು ಮತ್ತು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇನ್ನೊಂದೆಡೆ ಬಿಜೆಪಿಯವರು ಸ್ವಾಮಿ ವಿವೇಕನಂದರ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ, ವಿವೇಕಾನಂದರ ವಿಚಾರಧಾರೆಗಳಿಗೂ ಬಿಜೆಪಿಯವರ ತತ್ವಕ್ಕೂ ಸಂಬಂಧವಿಲ್ಲ. ವಿವೇಕಾನಂದರ ಆದರ್ಶ ಪಾಲಿಸುವುದಾದರೆ ಪರಧರ್ಮ ಸಹಿಷ್ಣುತತೆ ಹಾಗೂ ಇತರೆ ಧರ್ಮಗಳನ್ನು ಗೌರವಿಸಿ ಪಾಲಿಸಬೇಕು. ಆದರೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಈ ರೀತಿ ನಡೆದುಕೊಳ್ಳುತ್ತಿಲ್ಲ. ವಿವೇಕಾನಂದರನ್ನು ತಮ್ಮ ಸ್ವತ್ತು ಎಂದು ಬಿಜೆಪಿಯವರು ಹೇಳುವುದಾದರೆ ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.