ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಆಮಿಷ: ಮಾತೆ ಮಹಾದೇವಿ ಆರೋಪ
Team Udayavani, Sep 13, 2017, 6:16 PM IST
ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ತಮ್ಮ ಬೆಂಬಲವಿದೆ ಎಂಬ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆಯನ್ನು ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ತಳ್ಳಿಹಾಕಿದ್ದಾರೆ. ಏತನ್ಮಧ್ಯೆ ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಆಮಿಷವೊಡ್ಡುವ ಮೂಲಕ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಮಾತೆ ಮಹಾದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬುಧವಾರ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತೆ ಮಹಾದೇವಿ, ಸಿದ್ದಗಂಗಾಶ್ರೀಗಳಿಗೆ ಈಗ ನೆನಪಿನ ಶಕ್ತಿ ಉಳಿಯುತ್ತಿಲ್ಲ. ಬೇಲಿಮಠದ ಶ್ರೀಗಳನ್ನು ನೀವು ಯಾರು ಎಂದು ಕೇಳಿದ್ದರು. ಇದನ್ನೇ ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಕೊಡಿಸುವ ಆಮಿಷವೊಡ್ಡಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಸೋಮಣ್ಣ ಶ್ರೀಗಳಿಗೆ ಆಮಿಷವೊಡ್ಡಿರುವುದಾಗಿ ದೂರಿದರು. ಶೀಘ್ರದಲ್ಲಿಏಯ ನಾವಿದನ್ನು ಸಾಬೀತು ಮಾಡುತ್ತೇವೆ. ಭಾರತ ರತ್ನಕ್ಕಾಗಿ ಶ್ರೀಗಳು ಹೀಗೆ ಮಾತು ತಿರುಗಿಸಬಾರದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ