ಕೋರ್ಟ್ ತೀರ್ಪಿಗೆ ಹೆದರಿ ಆತ್ಮಹತ್ಯೆ
Team Udayavani, Sep 14, 2017, 7:30 AM IST
ಚಿಕ್ಕಬಳ್ಳಾಪುರ: ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದಿದ್ದ ಸಹಾಯಕ ಅಭಿಯಂತರ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ವಂಗಿಮಾಳ್ಳು ಗ್ರಾಮದಲ್ಲಿ ಬುಧವಾರ ನಡೆದಿದೆ.
ಚಿಂತಾಮಣಿ ತಾಲೂಕು ವಂಗಿಮಾಳ್ಳು ನಿವಾಸಿ ಶ್ರೀನಾಥ (25) ಮೃತ ಅಭಿಯಂತರ. ಬಾಗೇಪಲ್ಲಿ ತಾಲೂಕಿನ ಬಿಳ್ಳೂರು,
ನಾರೇಮುದ್ದೇಪಲ್ಲಿ ಮತ್ತಿತರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಗೆ ಹೊರ ಗುತ್ತಿಗೆ ಆಧಾರದಲ್ಲಿ ಎಂಜಿಯರ್ ಆಗಿದ್ದರು. ತಮ್ಮ ತೋಟದಲ್ಲಿ ಟೊಮೆಟೋ ಕಟ್ಟಿಗೆಗಳ ರಾಶಿ ಮೇಲೆ ಮಲಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ.
ಮೃತ ದೇಹ ಸುಟ್ಟುಕರಲಾಗಿದೆ. ಕಳೆದ ಜನವರಿ 24 ರಂದು ಶ್ರೀನಾಥ್, ವ್ಯಕ್ತಿಯೊಬ್ಬರಿಂದ 12 ಸಾವಿರ ರೂ. ಲಂಚ
ಸ್ವೀಕರಿಸುವ ವೇಳೆ ಎಸಿಬಿಗೆ ಸೆರೆಸಿಕ್ಕಿ ನ್ಯಾಯಾಂಗ ಬಂಧನಕ್ಕೊಳಗಾಗಿ ಕೆಲಸ ಕಳೆದು ಕೊಂಡಿದ್ದರು. ಲಂಚ ಪ್ರಕರಣದ ತೀರ್ಪು ಬುಧವಾರ ಇದ್ದುದರಿಂದ ಶ್ರೀನಾಥ ತಮಗೆ ಶಿಕ್ಷೆ ಆಗುವ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಶ್ರೀನಾಥ್ ಆತ್ಮಹತ್ಯೆಗೂ ಮುನ್ನ 9 ಪುಟಗಳ ಡೆತ್ನೋಟ್ ಬರೆದಿಟ್ಟಿದ್ದು, ತಾನು ಕೆಲಸ ನಿರ್ವಹಿಸಿದ ಗ್ರಾಪಂಗಳ ವ್ಯಾಪ್ತಿಯಲ್ಲಿ ಪಿಡಿಒಗಳು ಹಾಗೂ ಗುತ್ತಿಗೆದಾರರ ನೀಡಿದ ಹಿಂಸೆ ಬಗ್ಗೆ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ