ಕೇಂದ್ರ ಸರ್ಕಾರದಿಂದಲೇ ರಾಜ್ಯ ಕೈ ನಾಯಕರ ಫೋನ್ ಕದ್ದಾಲಿಕೆ!
Team Udayavani, Sep 19, 2017, 3:56 PM IST
ಬೆಂಗಳೂರು: ನಮ್ಮ ಸರ್ಕಾರ ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಿಲ್ಲ. ಕೇಂದ್ರ ಸರ್ಕಾರವೇ ನಮ್ಮ ಫೋನ್ ಕದ್ದಾಲಿಸುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ತಿರುಗೇಟು ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ ‘ಕೇಂದ್ರ ಸರ್ಕಾರ ರಾಜ್ಯದ ಸಚಿವರು, ಶಾಸಕರು ಸೇರಿ 35 ಮುಖಂಡರ ಫೋನ್ ಕದ್ದಾಲಿಕೆ ಮಾಡಿದೆ. ಐಟಿ, ಇಡಿ,ಸಿಬಿಐ, ಆರ್ಬಿಐ ಎಲ್ಲವನ್ನೂ ದುರ್ಬಳಕೆ ಮಾಡಿ ನಮ್ಮ ವಿರುದ್ಧ ಪಿತೂರಿ ನಡೆಸುತ್ತಿದೆ’ ಎಂದು ಆರೋಪಿಸಿದರು.
ಆರ್.ಅಶೋಕ್ ಮಾಡಿರುವ ಆರೋಪ ಸುಳ್ಳಾಗಿದೆ. ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪ ಸುಳ್ಳು ಎಂದರು.
ಸಚಿವರ ಭ್ರಷ್ಟಾಚಾರದ ಚಾರ್ಜ್ಶೀಟ್ ಬಿಡುಗಡೆ ಮಾಡುತ್ತೇನೆ ಎಂದ ಯಡಿಯೂರಪ್ಪ ಹೇಳಿಕೆಯನ್ನು ಲೇವಡಿ ಮಾಡಿದ ರೆಡ್ಡಿ ‘ಯಡಿಯೂರಪ್ಪ ಮೊದಲು ತಮ್ಮ ಮೇಲಿರುವ ಪ್ರಕರಣಗಳ ಕುರಿತು ಜನರಿಗೆ ಉತ್ತರಿಸಲಿ, ಆ ಬಳಿಕ ನಮ್ಮ ಕುರಿತು ಮಾತನಾಡಲಿ’ ಎಂದರು.
‘ಪತ್ರಕರ್ತೆ ಗೌರಿ ಹತ್ಯೆ ಕುರಿತು ಸುಳಿವು ಲಭ್ಯವಾಗಿದ್ದು, ಶೀಘ್ರ ಆರೋಪಿಗಳನ್ನು ವಶಕ್ಕೆ ಪಡೆಯುತ್ತೇವೆ’ ಎಂದು ತಿಳಿಸಿದರು.
ಶೋಭಾ ಸವಾಲು
ಫೋನ್ ಕದ್ದಾಲಿಕೆ ಕುರಿತು ರಾಮಲಿಂಗಾ ರೆಡ್ಡಿ ಆರೋಪಕ್ಕೆ ಭಟ್ಕಳದಲ್ಲಿ ಪ್ರತಿಕ್ರಿಯೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ‘ಫೋನ್ ಕದ್ದಾಲಿಕೆ ಮಾಡಿದ ಕುರಿತು ದಾಖಲೆಗಳಿದ್ದರೆ ಕೂಡಲೇ ಬಿಡುಗಡೆ ಮಾಡಲಿ’ ಎಂದು ಸವಾಲೆಸೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!