ಶಂಭೂಕನ ತಲೆ ಕತ್ತರಿಸಿದ ಜಾತಿವಾದಿ ರಾಮ ದೇವನಲ್ಲ! 


Team Udayavani, Sep 26, 2017, 2:42 PM IST

655656.jpg

ಮೈಸೂರು : ವಿಚಾರವಾದಿ ಪ್ರೊಫೆಸರ್‌ ಕೆ.ಎಸ್‌.ಭಗವಾನ್‌ ಮತ್ತೆ ಹಿಂದೂ ದೇವರಾದ ರಾಮನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 

ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ರಾಮನ ಕುರಿತಾಗಿ ವಿಚಾರ ಪ್ರಸ್ತಾವಿಸಿ”ರಾಮ ದೇವರೆ ಅಲ್ಲ, ನರಮಾನವ. ಕವಿ ವಾಲ್ಮೀಕಿ ರಾಮನನ್ನು ದೇವರು ಎಂದು ಎಲ್ಲೂ ಹೇಳಿಲ್ಲ. ರಾಮ ಜಾತಿ ವಾದಿಯಾಗಿದ್ದು, ಚಾತುರ್‌ವರ್ಣ ಪದ್ಧತಿಯನ್ನು ಬೆಂಬಲಿಸುತ್ತಿದ್ದ. ತುಂಬು ಗರ್ಭಿಣಿ ಸೀತೆಯನ್ನು ಕಾಡಿಗೆ ಕಳುಹಿಸಿದ. ಬ್ರಾಹ್ಮಣರ ಮಾತು ಕೇಳಿ ರಾಮ ಶಂಭೂಕನ ತಲೆ ಕತ್ತರಿಸಿದ್ದ. ರಾಮನಿಗೆ ಈಗ ದೇವಸ್ಥಾನ ಕಟ್ಟಲು ಹೊರಟಿದ್ದಾರೆ. ನಾವು ಇದನ್ನೆಲ್ಲಾ ಎಚ್ಚರಿಕೆಯಿಂದ ಗಮನಿಸಬೇಕಾಗಿದೆ” ಎಂದರು. 

ವಾಲ್ಮೀಕಿ ರಾಮಾಯಣದ ಅನೇಕ ಶ್ಲೋಕಗಳನ್ನು ತಮ್ಮ ಭಾಷಣದ ವೇಳೆ ಭಗವಾನ್‌ ಅವರು ಉಲ್ಲೇಖ ಮಾಡಿದರು.

ಅಂಧರು, ಕಿವುಡರು,ಮಂಗಳಮುಖಿಯರು,ವೃದ್ಧರು, ಅನಾಥಾಶ್ರಮಗಳಿಂದ ಬಂದವರು ಈ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. 

ಏನಿದು ಶಂಭೂಕನ ಕಥೆ ? 

 ಬ್ರಾಹ್ಮಣನೊಬ್ಬ ತನ್ನ ಮಗನ ಸಾವಿಗೆ ನ್ಯಾಯ ಕೇಳಲು ರಾಮನ ಆಸ್ಥಾನಕ್ಕೆ ಬರುತ್ತಾನೆ. ‘ಎಲೈ ರಾಜನೇ, ನೀನೇನೋ ಅನ್ಯಾಯ ಮಾಡಿರಬೇಕು, ಆದ್ದರಿಂದ ಯಾವ ತಪ್ಪನ್ನೂ ಮಾಡದ ನನ್ನ ಮಗ ಸಾವನ್ನಪ್ಪಿದ್ದಾನೆ’ ಎಂದು ರಾಮನ ವಿರುದ್ಧವೇ ಆರೋಪಿಸುತ್ತಾನೆ.

ಆ ವೇಳೆ ನಾರದಮುನಿಗಳು ರಾಮನಿಗೆ ಬ್ರಾಹ್ಮಣ ವಟುವಿನ ಸಾವಿಗೆ ಶಂಭೂಕನ ತಪಸ್ಸು ಕಾರಣ ಎಂದು ತಿಳಿಸುತ್ತಾರೆ. ತಕ್ಷಣ ರಾಮ ಶಂಭೂಕನಿದ್ದಲ್ಲಿಗೆ ತೆರಳಿ ಅವನ ತಪಸ್ಸಿನ ಕಾರಣ ಕೇಳುತ್ತಾನೆ.  

ಇದಕ್ಕುತ್ತರವಾಗಿ ಶಂಭೂಕ ‘ರಾಮ, ನಾನು ಶೂದ್ರ ಕುಟುಂಬದಲ್ಲಿ ಜನಿಸಿದವ. ನನ್ನ ಕಠಿಣ ಪರಿಶ್ರಮದಿಂದ ದೇವತೆಗಳನ್ನು ಮೆಚ್ಚಿಸಿ, ದೇವಲೋಕವನ್ನು ನನ್ನದಾಗಿ ಮಾಡಿಕೊಂಡು ಸಶರೀರಿಯಾಗಿ ಸ್ವರ್ಗವನ್ನು ಪ್ರವೇಶಿಸಬೇಕೆಂದು ಘೋರ ತಪಸ್ಸನ್ನು ಮಾಡುತ್ತಿದ್ದೇನೆ’ ಎನ್ನುತ್ತಾನೆ. 

ಅದಕ್ಕೆ ರಾಮ ‘ಅಯ್ಯಾ ನಿನ್ನ ತಪಸ್ಸು, ಪರಿಶ್ರಮ ಒಳ್ಳೆಯದೇ ಆದರೂ, ಅದರ ಹಿಂದಿನ ಕಾರಣ ಅಸಾತ್ವಿಕವಾದದ್ದು’ ಎಂಬ  ಕಾರಣ ನೀಡಿ  ಅವನ ತಲೆ ಕಡಿಯುತ್ತಾನೆ ಎನ್ನುವುದು ಕಥೆಯಲ್ಲಿ ಉಲ್ಲೇಖವಿದೆ. 

ಟಾಪ್ ನ್ಯೂಸ್

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.