ಶಂಭೂಕನ ತಲೆ ಕತ್ತರಿಸಿದ ಜಾತಿವಾದಿ ರಾಮ ದೇವನಲ್ಲ! 


Team Udayavani, Sep 26, 2017, 2:42 PM IST

655656.jpg

ಮೈಸೂರು : ವಿಚಾರವಾದಿ ಪ್ರೊಫೆಸರ್‌ ಕೆ.ಎಸ್‌.ಭಗವಾನ್‌ ಮತ್ತೆ ಹಿಂದೂ ದೇವರಾದ ರಾಮನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 

ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ರಾಮನ ಕುರಿತಾಗಿ ವಿಚಾರ ಪ್ರಸ್ತಾವಿಸಿ”ರಾಮ ದೇವರೆ ಅಲ್ಲ, ನರಮಾನವ. ಕವಿ ವಾಲ್ಮೀಕಿ ರಾಮನನ್ನು ದೇವರು ಎಂದು ಎಲ್ಲೂ ಹೇಳಿಲ್ಲ. ರಾಮ ಜಾತಿ ವಾದಿಯಾಗಿದ್ದು, ಚಾತುರ್‌ವರ್ಣ ಪದ್ಧತಿಯನ್ನು ಬೆಂಬಲಿಸುತ್ತಿದ್ದ. ತುಂಬು ಗರ್ಭಿಣಿ ಸೀತೆಯನ್ನು ಕಾಡಿಗೆ ಕಳುಹಿಸಿದ. ಬ್ರಾಹ್ಮಣರ ಮಾತು ಕೇಳಿ ರಾಮ ಶಂಭೂಕನ ತಲೆ ಕತ್ತರಿಸಿದ್ದ. ರಾಮನಿಗೆ ಈಗ ದೇವಸ್ಥಾನ ಕಟ್ಟಲು ಹೊರಟಿದ್ದಾರೆ. ನಾವು ಇದನ್ನೆಲ್ಲಾ ಎಚ್ಚರಿಕೆಯಿಂದ ಗಮನಿಸಬೇಕಾಗಿದೆ” ಎಂದರು. 

ವಾಲ್ಮೀಕಿ ರಾಮಾಯಣದ ಅನೇಕ ಶ್ಲೋಕಗಳನ್ನು ತಮ್ಮ ಭಾಷಣದ ವೇಳೆ ಭಗವಾನ್‌ ಅವರು ಉಲ್ಲೇಖ ಮಾಡಿದರು.

ಅಂಧರು, ಕಿವುಡರು,ಮಂಗಳಮುಖಿಯರು,ವೃದ್ಧರು, ಅನಾಥಾಶ್ರಮಗಳಿಂದ ಬಂದವರು ಈ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. 

ಏನಿದು ಶಂಭೂಕನ ಕಥೆ ? 

 ಬ್ರಾಹ್ಮಣನೊಬ್ಬ ತನ್ನ ಮಗನ ಸಾವಿಗೆ ನ್ಯಾಯ ಕೇಳಲು ರಾಮನ ಆಸ್ಥಾನಕ್ಕೆ ಬರುತ್ತಾನೆ. ‘ಎಲೈ ರಾಜನೇ, ನೀನೇನೋ ಅನ್ಯಾಯ ಮಾಡಿರಬೇಕು, ಆದ್ದರಿಂದ ಯಾವ ತಪ್ಪನ್ನೂ ಮಾಡದ ನನ್ನ ಮಗ ಸಾವನ್ನಪ್ಪಿದ್ದಾನೆ’ ಎಂದು ರಾಮನ ವಿರುದ್ಧವೇ ಆರೋಪಿಸುತ್ತಾನೆ.

ಆ ವೇಳೆ ನಾರದಮುನಿಗಳು ರಾಮನಿಗೆ ಬ್ರಾಹ್ಮಣ ವಟುವಿನ ಸಾವಿಗೆ ಶಂಭೂಕನ ತಪಸ್ಸು ಕಾರಣ ಎಂದು ತಿಳಿಸುತ್ತಾರೆ. ತಕ್ಷಣ ರಾಮ ಶಂಭೂಕನಿದ್ದಲ್ಲಿಗೆ ತೆರಳಿ ಅವನ ತಪಸ್ಸಿನ ಕಾರಣ ಕೇಳುತ್ತಾನೆ.  

ಇದಕ್ಕುತ್ತರವಾಗಿ ಶಂಭೂಕ ‘ರಾಮ, ನಾನು ಶೂದ್ರ ಕುಟುಂಬದಲ್ಲಿ ಜನಿಸಿದವ. ನನ್ನ ಕಠಿಣ ಪರಿಶ್ರಮದಿಂದ ದೇವತೆಗಳನ್ನು ಮೆಚ್ಚಿಸಿ, ದೇವಲೋಕವನ್ನು ನನ್ನದಾಗಿ ಮಾಡಿಕೊಂಡು ಸಶರೀರಿಯಾಗಿ ಸ್ವರ್ಗವನ್ನು ಪ್ರವೇಶಿಸಬೇಕೆಂದು ಘೋರ ತಪಸ್ಸನ್ನು ಮಾಡುತ್ತಿದ್ದೇನೆ’ ಎನ್ನುತ್ತಾನೆ. 

ಅದಕ್ಕೆ ರಾಮ ‘ಅಯ್ಯಾ ನಿನ್ನ ತಪಸ್ಸು, ಪರಿಶ್ರಮ ಒಳ್ಳೆಯದೇ ಆದರೂ, ಅದರ ಹಿಂದಿನ ಕಾರಣ ಅಸಾತ್ವಿಕವಾದದ್ದು’ ಎಂಬ  ಕಾರಣ ನೀಡಿ  ಅವನ ತಲೆ ಕಡಿಯುತ್ತಾನೆ ಎನ್ನುವುದು ಕಥೆಯಲ್ಲಿ ಉಲ್ಲೇಖವಿದೆ. 

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.