ಆಸ್ಪತ್ರೆ ಎಡವಟ್ಟು: ಇಲ್ಲದ ಎಚ್‌ಐವಿಗೆ 2 ವರ್ಷ ಔಷಧಿ ತಿಂದ ಮಹಿಳೆ!


Team Udayavani, Sep 27, 2017, 9:55 AM IST

27-STATE-13.jpg

ಶಿರಾ: 2 ವರ್ಷದ ಹಿಂದೆ ಎಚ್‌ಐವಿ ಸೋಂಕಿನಿಂದ ಪೀಡಿತವಾಗಿದ್ದ ಮಹಿಳೆ ಎರಡು ವರ್ಷಗಳ ಸತತ ಔಷಧೋಪಚಾರದಿಂದ ಗುಣ ಮುಖವಾಗಿರುವ ಅತ್ಯಾಶ್ಚರ್ಯ ಘಟನೆಗೆ ತುಮಕೂರು ಜಿಲ್ಲೆ ಶಿರಾ ಸರ್ಕಾರಿ ಆಸ್ಪತ್ರೆ ಸಾಕ್ಷಿಯಾಗಿದೆ!

ಎಚ್‌ಐವಿ ಸೋಂಕಿಗೆ ಔಷಧಿ ಸಂಶೋಧನೆ ಯಾಯಿತಾ ಎಂದು ಆಶ್ಚರ್ಯಪಡಬೇಡಿ. ಇದು ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಆಗಿರುವ ಎಡವಟ್ಟು. 2 ವರ್ಷದ ಹಿಂದೆ ತಪಾಸಣೆಗೆಂದು ಶಿರಾದ ಸರ್ಕಾರಿ ಆಸ್ಪತ್ರೆಗೆ ಬಂದ ಗರ್ಭಿಣಿಯ ರಕ್ತಪರೀಕ್ಷೆ ಮಾಡಿದಾಗ ಆಕೆಗೆ ಎಚ್‌ಐವಿ ಸೋಂಕು ತಗುಲಿದೆ ಎಂದು ವರದಿ ನೀಡಲಾಗಿತ್ತು. ವೈದ್ಯರ ವರದಿ ಯಿಂದ ಬೆಚ್ಚಿ ಬಿದ್ದ ಮಹಿಳೆ ತುಮಕೂರು ಜಿಲ್ಲಾ
ಆಸ್ಪತ್ರೆಯ ಐಸಿಟಿಸಿಗೆ ಈ ವರದಿ ತೋರಿಸಿದ್ದಾರೆ.

ಐಸಿಟಿಸಿಯಲ್ಲಿ ಮತ್ತೂಮ್ಮೆ ರಕ್ತಪರೀಕ್ಷೆ ಮಾಡದೆ ಸದರಿ ವರದಿ ಆಧಾರದಲ್ಲೇ ಔಷಧಿ ನೀಡಿದ್ದಾರೆ. ಎಚ್‌ಐವಿ ಪೀಡಿತ ವರದಿ ಹಿನ್ನೆಲೆಯಲ್ಲಿ ಗರ್ಭ ವನ್ನು ತೆಗೆಸಿಹಾಕಿದ್ದಾರೆ. ನಂತರ 2 ವರ್ಷಗಳಿಂದ ಔಷಧೋಪಚಾರ ಪಡೆದುಕೊಂಡಿದ್ದಾರೆ. ನಂತರ ಎರಡನೇ ಮಗುವಿನ ಗರ್ಭ ಧರಿಸಿದ ಮಹಿಳೆ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹೋದಾಗ ಅಲ್ಲಿ ರಕ್ತ ಪರೀಕ್ಷೆ ಮಾಡಿಸಿದ್ದು, ಎಚ್‌ಐವಿ ಇಲ್ಲ ಎಂಬ ವರದಿ ಬಂದಿದೆ. ಇದರಿಂದ ವಿಚಲಿತ ಳಾದ ಮಹಿಳೆ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ರಕ್ತಪರೀಕ್ಷೆ ಮಾಡಿಸಿದಾಗ ಮತ್ತೆ ನೆಗಟಿವ್‌
ವರದಿ ಬಂದಿದೆ. ವರದಿ ಬಗ್ಗೆ ಇನ್ನೂ ಸಂಶಯ ಹೊಂದಿದ್ದ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗಲೂ ಎಚ್‌ಐವಿ ನೆಗಟಿವ್‌ ವರದಿ ಬಂದಿದೆ.

ಶಿರಾ ಸರ್ಕಾರಿ ಆಸ್ಪತ್ರೆಯಲ್ಲಾದ ಎಡವಟ್ಟು 2 ವರ್ಷಗಳ ಕಾಲ ಈ ಮಹಿಳೆ ತನ್ನ ಜೀವನದ ಖುಷಿಯ ಕ್ಷಣಗಳನ್ನು ಬಲಿ ತೆಗೆದುಕೊಂಡಿದೆ. ಜೊತೆಗೆ ಚೊಚ್ಚಲ ಮಗುವನ್ನೂ ಕಳೆದುಕೊಂಡಿ ದ್ದಾರೆ. ಆಕೆಯ ಸಂಬಂಧಿಕರೂ ದೂರ ಇರಿಸಿದ್ದರು. ಸಮಾಜದಲ್ಲಿ ಆಕೆಯನ್ನು ನೋಡುವ ದೃಷ್ಟಿಯೇ ಬದಲಾಗಿದ್ದರಿಂದ ಆಕೆ ಬದುಕಿದ್ದಾಗಲೇ ನರಕಯಾತನೆ ಅನುಭವಿಸಿದ್ದಾರೆ.  ಈ ಬಗ್ಗೆ ತಾಲೂಕು ವೈದ್ಯಾಧಿಕಾರಿ ಡಾ. ತಿಮ್ಮರಾಜು ಅವರನ್ನು ಸಂಪರ್ಕಿಸಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸದ್ಯ ನಾನು ಮೀಟಿಂಗ್‌ನಲ್ಲಿದ್ದು, ಆಸ್ಪತ್ರೆಗೆ ಬಂದ ನಂತರ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.

ಶಿರಾ ಸರ್ಕಾರಿ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ನನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಿದ್ದೇನೆ. ಈ ರೀತಿ ಮತ್ತಾರಿಗೂ ಸಮಸ್ಯೆ ಆಗಬಾರದು.
ಸಂತ್ರಸ್ತ ಮಹಿಳೆ

ಸರ್ಕಾರಿ ಆಸ್ಪತ್ರೆಗಳಲ್ಲಿ 3 ಹಂತದಲ್ಲಿ ಎಚ್‌ಐವಿ ಪರೀಕ್ಷೆ ಮಾಡಲಾಗುತ್ತದೆ. ಆದರೆ, ಎಚ್‌ಐವಿ ಕಂಡುಬಂದು ಚಿಕಿತ್ಸೆ ಪಡೆದು ನಂತರ ಎಚ್‌ಐವಿ ಇಲ್ಲ ಎನ್ನುವುದು ಅಪರೂಪದಲ್ಲಿ ಅಪರೂಪದ ಘಟನೆ. ಸಂತ್ರಸ್ತ ಮಹಿಳೆ ಈವರೆಗೂ ನಮಗೆ ದೂರು ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಆಧರಿಸಿ ಶಿರಾ ಆಸ್ಪತ್ರೆಗೆ ಅಧಿಕಾರಿಗಳನ್ನು ಕಳುಹಿಸಲಾಗಿದ್ದು, ಸಮಗ್ರ ವರದಿ ನೀಡಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು.
ಡಾ.ಎಚ್‌.ವಿ.ರಂಗಸ್ವಾಮಿ, ಡಿಎಚ್‌ಒ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.