ಆಸ್ಪತ್ರೆ ಎಡವಟ್ಟು: ಇಲ್ಲದ ಎಚ್‌ಐವಿಗೆ 2 ವರ್ಷ ಔಷಧಿ ತಿಂದ ಮಹಿಳೆ!


Team Udayavani, Sep 27, 2017, 9:55 AM IST

27-STATE-13.jpg

ಶಿರಾ: 2 ವರ್ಷದ ಹಿಂದೆ ಎಚ್‌ಐವಿ ಸೋಂಕಿನಿಂದ ಪೀಡಿತವಾಗಿದ್ದ ಮಹಿಳೆ ಎರಡು ವರ್ಷಗಳ ಸತತ ಔಷಧೋಪಚಾರದಿಂದ ಗುಣ ಮುಖವಾಗಿರುವ ಅತ್ಯಾಶ್ಚರ್ಯ ಘಟನೆಗೆ ತುಮಕೂರು ಜಿಲ್ಲೆ ಶಿರಾ ಸರ್ಕಾರಿ ಆಸ್ಪತ್ರೆ ಸಾಕ್ಷಿಯಾಗಿದೆ!

ಎಚ್‌ಐವಿ ಸೋಂಕಿಗೆ ಔಷಧಿ ಸಂಶೋಧನೆ ಯಾಯಿತಾ ಎಂದು ಆಶ್ಚರ್ಯಪಡಬೇಡಿ. ಇದು ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಆಗಿರುವ ಎಡವಟ್ಟು. 2 ವರ್ಷದ ಹಿಂದೆ ತಪಾಸಣೆಗೆಂದು ಶಿರಾದ ಸರ್ಕಾರಿ ಆಸ್ಪತ್ರೆಗೆ ಬಂದ ಗರ್ಭಿಣಿಯ ರಕ್ತಪರೀಕ್ಷೆ ಮಾಡಿದಾಗ ಆಕೆಗೆ ಎಚ್‌ಐವಿ ಸೋಂಕು ತಗುಲಿದೆ ಎಂದು ವರದಿ ನೀಡಲಾಗಿತ್ತು. ವೈದ್ಯರ ವರದಿ ಯಿಂದ ಬೆಚ್ಚಿ ಬಿದ್ದ ಮಹಿಳೆ ತುಮಕೂರು ಜಿಲ್ಲಾ
ಆಸ್ಪತ್ರೆಯ ಐಸಿಟಿಸಿಗೆ ಈ ವರದಿ ತೋರಿಸಿದ್ದಾರೆ.

ಐಸಿಟಿಸಿಯಲ್ಲಿ ಮತ್ತೂಮ್ಮೆ ರಕ್ತಪರೀಕ್ಷೆ ಮಾಡದೆ ಸದರಿ ವರದಿ ಆಧಾರದಲ್ಲೇ ಔಷಧಿ ನೀಡಿದ್ದಾರೆ. ಎಚ್‌ಐವಿ ಪೀಡಿತ ವರದಿ ಹಿನ್ನೆಲೆಯಲ್ಲಿ ಗರ್ಭ ವನ್ನು ತೆಗೆಸಿಹಾಕಿದ್ದಾರೆ. ನಂತರ 2 ವರ್ಷಗಳಿಂದ ಔಷಧೋಪಚಾರ ಪಡೆದುಕೊಂಡಿದ್ದಾರೆ. ನಂತರ ಎರಡನೇ ಮಗುವಿನ ಗರ್ಭ ಧರಿಸಿದ ಮಹಿಳೆ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹೋದಾಗ ಅಲ್ಲಿ ರಕ್ತ ಪರೀಕ್ಷೆ ಮಾಡಿಸಿದ್ದು, ಎಚ್‌ಐವಿ ಇಲ್ಲ ಎಂಬ ವರದಿ ಬಂದಿದೆ. ಇದರಿಂದ ವಿಚಲಿತ ಳಾದ ಮಹಿಳೆ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ರಕ್ತಪರೀಕ್ಷೆ ಮಾಡಿಸಿದಾಗ ಮತ್ತೆ ನೆಗಟಿವ್‌
ವರದಿ ಬಂದಿದೆ. ವರದಿ ಬಗ್ಗೆ ಇನ್ನೂ ಸಂಶಯ ಹೊಂದಿದ್ದ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗಲೂ ಎಚ್‌ಐವಿ ನೆಗಟಿವ್‌ ವರದಿ ಬಂದಿದೆ.

ಶಿರಾ ಸರ್ಕಾರಿ ಆಸ್ಪತ್ರೆಯಲ್ಲಾದ ಎಡವಟ್ಟು 2 ವರ್ಷಗಳ ಕಾಲ ಈ ಮಹಿಳೆ ತನ್ನ ಜೀವನದ ಖುಷಿಯ ಕ್ಷಣಗಳನ್ನು ಬಲಿ ತೆಗೆದುಕೊಂಡಿದೆ. ಜೊತೆಗೆ ಚೊಚ್ಚಲ ಮಗುವನ್ನೂ ಕಳೆದುಕೊಂಡಿ ದ್ದಾರೆ. ಆಕೆಯ ಸಂಬಂಧಿಕರೂ ದೂರ ಇರಿಸಿದ್ದರು. ಸಮಾಜದಲ್ಲಿ ಆಕೆಯನ್ನು ನೋಡುವ ದೃಷ್ಟಿಯೇ ಬದಲಾಗಿದ್ದರಿಂದ ಆಕೆ ಬದುಕಿದ್ದಾಗಲೇ ನರಕಯಾತನೆ ಅನುಭವಿಸಿದ್ದಾರೆ.  ಈ ಬಗ್ಗೆ ತಾಲೂಕು ವೈದ್ಯಾಧಿಕಾರಿ ಡಾ. ತಿಮ್ಮರಾಜು ಅವರನ್ನು ಸಂಪರ್ಕಿಸಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸದ್ಯ ನಾನು ಮೀಟಿಂಗ್‌ನಲ್ಲಿದ್ದು, ಆಸ್ಪತ್ರೆಗೆ ಬಂದ ನಂತರ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.

ಶಿರಾ ಸರ್ಕಾರಿ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ನನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಿದ್ದೇನೆ. ಈ ರೀತಿ ಮತ್ತಾರಿಗೂ ಸಮಸ್ಯೆ ಆಗಬಾರದು.
ಸಂತ್ರಸ್ತ ಮಹಿಳೆ

ಸರ್ಕಾರಿ ಆಸ್ಪತ್ರೆಗಳಲ್ಲಿ 3 ಹಂತದಲ್ಲಿ ಎಚ್‌ಐವಿ ಪರೀಕ್ಷೆ ಮಾಡಲಾಗುತ್ತದೆ. ಆದರೆ, ಎಚ್‌ಐವಿ ಕಂಡುಬಂದು ಚಿಕಿತ್ಸೆ ಪಡೆದು ನಂತರ ಎಚ್‌ಐವಿ ಇಲ್ಲ ಎನ್ನುವುದು ಅಪರೂಪದಲ್ಲಿ ಅಪರೂಪದ ಘಟನೆ. ಸಂತ್ರಸ್ತ ಮಹಿಳೆ ಈವರೆಗೂ ನಮಗೆ ದೂರು ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಆಧರಿಸಿ ಶಿರಾ ಆಸ್ಪತ್ರೆಗೆ ಅಧಿಕಾರಿಗಳನ್ನು ಕಳುಹಿಸಲಾಗಿದ್ದು, ಸಮಗ್ರ ವರದಿ ನೀಡಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು.
ಡಾ.ಎಚ್‌.ವಿ.ರಂಗಸ್ವಾಮಿ, ಡಿಎಚ್‌ಒ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.