ಗಾಂಧೀಜಿ ಮರೆತರೆ ದೇಶಕ್ಕೆ ಭವಿಷ್ಯವಿಲ್ಲ


Team Udayavani, Oct 3, 2017, 11:23 AM IST

1.jpg

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ಮರೆತರೆ ದೇಶಕ್ಕೆ ಒಳ್ಳೆಯ ಭವಿಷ್ಯವಿಲ್ಲ. ಹಾಗೆಯೇ ಲಾಲ್ ಬಹದ್ದೂರ್ ಶಾಸ್ತ್ರೀ ಅವರು ಇನ್ನೂ ಹೆಚ್ಚು ದಿನ ಬದುಕಿದ್ದರೆ ದೇಶದಲ್ಲಿ ಒಳ್ಳೆಯ ಮೌಲ್ಯ ಸ್ಥಾಪನೆಯಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೋಮವಾರ ವಿಧಾನ ಸೌಧದ ಆವರಣ ದಲ್ಲಿರುವ ಅವರಿಬ್ಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಗಾಂಧೀಜಿ ಅವರ ತ್ಯಾಗ, ಬಲಿದಾನ ಶ್ಲಾಘನೀಯ ಹಾಗೂ ಯುದ್ಧ ಮಾಡದೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಜಗತ್ತಿನ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು. 

ಗಾಂಧಿ ಸ್ಮರಣೆ ಅವಶ್ಯ: ಗಾಂಧೀಜಿ ನಾಯಕತ್ವದಲ್ಲಿ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ, ಚಳವಳಿಯಲ್ಲಿ ಸಕ್ರಿಯವಾಗಿ ಭಾಗ ವಹಿಸಿದ್ದರು. ಅಹಿಂಸಾ ತತ್ವದ ಮೂಲಕ ಗಾಂಧೀಜಿ ತಂದು ಕೊಟ್ಟಿರುವ ಸ್ವಾತಂತ್ರ್ಯದ ಫಲವನ್ನು ನಾವೆಲ್ಲರೂ ಇಂದು ಸವಿಯುತ್ತಿದ್ದೇವೆ. ಗಾಂಧೀಜಿ ಅವರನ್ನು ತಿಳಿದುಕೊಳ್ಳುವುದರ ಜತೆಗೆ ಸ್ಮರಣೆಯನ್ನೂ ಮಾಡಬೇಕು ಎಂದು ಹೇಳಿದರು. ಗಾಂಧೀಜಿಯವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ನಾಯಕರು. ಗಾಂಧೀಜಿಯವರಲ್ಲಿ ವಿಶ್ವ ನಾಯಕನ ಎಲ್ಲ ಗುಣ, ತತ್ವ ಹಾಗೂ ಆದರ್ಶ ಅಡಗಿತ್ತು. ಈ ಬಗ್ಗೆ ಅನೇಕರು ತಮ್ಮ ಪುಸ್ತಕ, ಲೇಖನದಲ್ಲಿ ವರ್ಣಿಸಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ನಾವೆಲ್ಲರೂ ಗೌರವ ಸಲ್ಲಿಸಲೇಬೇಕು ಎಂದರು.

ಭಾರತಕ್ಕೆ ಸ್ವಾತಂತ್ರ್ಯ ಬಂದ ಕೆಲವೇ ತಿಂಗಳಲ್ಲಿ ಮತಾಂಧನ ಗುಂಡಿಗೆ ಗಾಂಧೀಜಿ ಬಲಿಯಾಗಿದ್ದರು. ಭಾರತ ವಿಭಜನೆ ಆಗಬಾರದು, ಎಲ್ಲರೂ ಒಂದೇ ದೇಶದಲ್ಲಿರಬೇಕು. ಭಾರತ ಮತ್ತು ಪಾಕಿಸ್ತಾನ ಎರಡು ಭಾಗ ಆಗಬಾರದು ಎಂದು ಗಾಂಧೀಜಿ ಹೋರಾಟ ಮಾಡಿದ್ದರು. ದೇಶದ ಇಂದಿನ
ರಾಜಕಾರಣಕ್ಕೆ ಗಾಂಧೀಜಿಯವರ ಮಾರ್ಗದರ್ಶನ ಅವಶ್ಯಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತತ್ವಕ್ಕೆ ಬದ್ಧರಾಗಿದ್ದ ಶಾಸ್ತ್ರೀ: ಗಾಂಧೀಜಿಯವರು ಹುಟ್ಟಿದ ದಿನವೇ ಲಾಲ್ ಬಹದ್ದೂರ್ ಶಾಸ್ತ್ರೀ ಹುಟ್ಟಿದ್ದರು. ಅತ್ಯಂತ ಕಡಿಮೆ ಅವಧಿಗೆ ದೇಶದ ಪ್ರಧಾನಿಯಾದರೂ, ಪ್ರಾಮಾಣಿಕ ವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದರು. ಅವರು ಇನ್ನೂ ಹೆಚ್ಚು ದಿನ ಬದುಕಿದ್ದರೆ ಒಳ್ಳೆಯ ಮೌಲ್ಯಗಳು ದೇಶದಲ್ಲಿ ಸ್ಥಾಪನೆಯಾಗು
ತ್ತಿದ್ದವು. ಅವರು ನಂಬಿರುವ ಮೌಲ್ಯಕ್ಕೆ, ತತ್ವಕ್ಕೆ ಬದ್ಧರಾಗಿ ಜೀವನ ನಡೆಸಿದ್ದರು ಎಂಬುದನ್ನು ನೆನಪಿಸಿದರು.

ಶಾಸ್ತ್ರೀಯವರು ದೇಶಕ್ಕೆ ನೀಡಿದ್ದ ಜೈ ಜವಾನ್, ಜೈ ಕಿಸಾನ್ ಘೋಷಣೆಯು ಜನರಲ್ಲಿ ರಾಷ್ಟ್ರಾಭಿಮಾನ ಮೂಡಿಸುವು ದರ ಜತೆಗೆ ರೈತರ ಮತ್ತು ಸೈನಿಕರ ಬಗ್ಗೆ ಸಾಮಾನ್ಯ ಜನರಲ್ಲೂ ಗೌರವ ಮೂಡುವಂತೆ ಮಾಡಿದೆ. ದೇಶಕ್ಕೆ ರೈತರು ಹಾಗೂ ಸೈನಿಕರು ಎಷ್ಟು ಅವಶ್ಯಕ ಎಂಬುದನ್ನು ಅಂದೇ ಅರಿತಿದ್ದರು ಎಂಬುದನ್ನು ವಿವರಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.