ಖಾಸಗಿ ವೈದ್ಯರಿಗೆ ಜೈಲು ಭೀತಿ ದೂರ?


Team Udayavani, Oct 4, 2017, 7:40 AM IST

doctor.jpg

ಬೆಂಗಳೂರು: “ಜೈಲು ಶಿಕ್ಷೆ ಮೇಲಿನ ನಿಯಂತ್ರಣ’ ಕಳೆದುಕೊಂಡಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ತಿದ್ದುಪಡಿ) ವಿಧೇಯಕ ಸಿದಟಛಿವಾಗಿದೆ. ವಿಧೇಯಕದಲ್ಲಿನ ಕೆಲವು ಅಂಶಗಳ ಬಗ್ಗೆ ಜೆಡಿಎಸ್‌ ಮತ್ತು ಬಿಜೆಪಿ ಸದಸ್ಯರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಶಾಸಕ ಕೆ.ಎನ್‌. ರಾಜಣ್ಣ ನೇತೃತ್ವದ ಜಂಟಿ ಸದನ ಸಮಿತಿ ಮಂಗಳವಾರ ವಿಧಾನಸಭಾ ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರಿಗೆ ವರದಿ ನೀಡಿದೆ. ಈ ವಿಧೇಯಕದಲ್ಲಿದ್ದ ವಿವಾದಿತ ತಪ್ಪಿತಸ್ಥರನ್ನು ಜೈಲಿಗೆ ಹಾಕುವ ಅಂಶವನ್ನು ತೆಗೆದು ಹಾಕಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಮಿತಿಯಲ್ಲಿನ ಬಿಜೆಪಿ ಸದಸ್ಯರು, ಕೇಂದ್ರ ಸರ್ಕಾರದ 2010ರ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಆಧಾರದಲ್ಲಿ ವಿಧೇಯಕ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ. ಜತೆಗೆ, ಈ
ಕಾನೂನಿನ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನೂ ತರಬೇಕು ಎಂದು ಸಮಿತಿಯಲ್ಲಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಕೆ.ಎಸ್‌.ಈಶ್ವರಪ್ಪ, ಕ್ಯಾ.ಗಣೇಶ್‌ ಕಾರ್ಣಿಕ್‌, ಡಾ.ಅಶ್ವಥ್‌ ನಾರಾಯಣ್‌ ಒತ್ತಾಯಿಸಿದ್ದಾರೆ.

ಜಂಟಿ ಸದನ ಸಮಿತಿ ರಚಿಸಿದ್ದ ಸ್ಪೀಕರ್‌: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕ 2007 ಕ್ಕೆ ಸೂಕ್ತ ತಿದ್ದುಪಡಿ ತಂದು ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಸರ್ಕಾರ ಮುಂದಾಗಿತ್ತು. ಆದರೆ, ಅದಕ್ಕೆ ವಿಧಾನ ಸಭೆಯಲ್ಲಿ
ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಕೆ.ಎನ್‌ ರಾಜಣ್ಣ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದರು. ಅದರಂತೆ ಸಮಿತಿ ಹಲವಾರು ಬಾರಿ ಸಭೆ ಸೇರಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯೂ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಿದ್ದಾರೆ.

ಪ್ರಮುಖವಾಗಿ ಖಾಸಗಿ ವೈದ್ಯಕೀಯ ಸಂಸ್ಥೆಗಳು ತಪ್ಪು ಮಾಡಿದ್ದರೆ, ಆರು ತಿಂಗಳಿಂದ ಮೂರು ವರ್ಷ ಶಿಕ್ಷೆ ವಿಧಿಸುವ ಅಂಶವನ್ನು ವಿಧೇಯದಿಂದ ಕೈ ಬಿಡಲಾಗಿದೆ. ನಕಲಿ ವೈದ್ಯರ ಹಾವಳಿ ತಡೆಯಲು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳ ನೋಂದಣಿಗೆ ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಾರೆ ಎಂಬ ಖಾಸಗಿ ಆಸ್ಪತ್ರೆಗಳ ಆರೋಪಕ್ಕೆ ಸ್ಪಂದಿಸಿರುವ ಸಮಿತಿ, ಸರ್ಕಾರಿ ಅಧಿಕಾರಿಗಳು ಅರ್ಜಿ ಸಲ್ಲಿಸಿ 90 ದಿನ ಕಳೆದರೂ ನೋಂದಣಿ ಮಾಡದಿದ್ದರೆ, ಅಧಿಕೃತ ನೋಂದಣಿಯಾಗಿದೆ ಎಂದು ಪರಿಗಣಿಸಲು
ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪರಿಹಾರ ಸಮಿತಿ ರಚನೆ ಮಾಡಲು ಸೂಚಿಸಲಾಗಿದ್ದು, ಸಮಿತಿಯಲ್ಲಿ
ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ, ಖಾಸಗಿ ವೈದ್ಯಕೀಯ ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರೂ ಸದಸ್ಯರಾಗಿರುತ್ತಾರೆ. ಪ್ರತಿಯೊಂದು ಆಸ್ಪತ್ರೆಯಲ್ಲಿಯೂ ದೊರೆಯುವ ಸವಲತ್ತುಗಳು ಮತ್ತು ಪ್ರತಿ ಚಿಕಿತ್ಸೆ ಹಾಗೂ ಶಸOಉ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶನ ಮಾಡಬೇಕು. ಒಂದು ವೇಳೆ ರೋಗಿಯು ಮೃತ ಪಟ್ಟರೆ, ಬಾಕಿ ಹಣ ಪಡೆಯಲು ಪೀಡಿಸದೇ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಬೇಕು.

ಒಂದು ವೇಳೆ, ಆಸ್ಪತ್ರೆಯವರು ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚಿನ ಹಣ ಪಡೆದರೆ, ಬಾಕಿ ಪಾವತಿಸುವರೆಗೂ ಶವ ನೀಡಲು ನಿರಾಕರಿಸಿದರೆ, ಸಂಬಂಧ ಪಟ್ಟ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೆ ದೂರು ನೀಡಲು ಅವಕಾಶ
ಕಲ್ಪಿಸಲಾಗಿದೆ. ವೈದ್ಯರೂ ಕೂಡ ತಮ್ಮ ಮೇಲೆ ಅನಗತ್ಯ ಕಿರುಕುಳವಾಗುತ್ತಿದ್ದರೆ, ಅವರಿಗೂ ದೂರು ನೀಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜಣ್ಣ ನೇತೃತ್ವದ ಸಮಿತಿಯಲ್ಲಿ ವಿಧೇಯಕ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ತರುವಂತೆ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಆಗ್ರಹಿಸಿದ್ದರು.

ಆದರೆ, ಸರ್ಕಾರಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಹಲವಾರು ಕಾನೂನುಗಳಿರುವುದರಿಂದ ಈ ವಿಧೇಯಕದ ವ್ಯಾಪ್ತಿಯಲ್ಲಿ ತರಲು ಸಮಿತಿ ನಿರಾಕರಿಸಿದೆ ಎಂದು ತಿಳಿದು ಬಂದಿದೆ. ಈ ತಿದ್ದುಪಡಿ ವಿಧೇಯಕವನ್ನು ನವೆಂಬರ್‌ನಲ್ಲಿ ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.