ಮಂಗಳೂರು, ಕಾಸರಗೋಡು ಉಗ್ರರ ತಾಣ: ರಾಘವೇಶ್ವರ ಶ್ರೀ
Team Udayavani, Oct 5, 2017, 8:29 AM IST
ಬಾಗಲಕೋಟೆ: ದೇಶದಲ್ಲಿ ಐಸಿಸ್ ಉಗ್ರರ ಹತ್ತಿಕ್ಕುವ ಕೆಲಸ ನಡೆಯಬೇಕಿದೆ. ಮಂಗಳೂರು ಮತ್ತು ಕೇರಳದ ಕಾಸರಗೋಡು ಉಗ್ರರ ಆಶ್ರಯ ತಾಣವಾಗುತ್ತಿವೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಂಗಳೂರು, ಕಾಸರ ಗೋಡು ಐಸಿಸ್ ಉಗ್ರರ ತಾಣವಾಗಿ ಪರಿಣಮಿಸುತ್ತಿವೆ. ಇದರ ವಿರುದ್ಧ ಕಠಿಣ ಕ್ರಮ ಅಗತ್ಯ. ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಲಪಂಥೀಯರ ಕೈವಾಡವಿದೆ ಎಂದು ಆರೋಪಿಸುವುದು ಸರಿಯಲ್ಲ. ಇದಕ್ಕೆ ಸೂಕ್ತ ಪುರಾವೆ ಇದ್ದರೆ ಮಾತ್ರ ಈ ರೀತಿ ಆರೋಪ ಮಾಡಬೇಕು. ಎಡಪಂಥೀಯರ ಹತ್ಯೆ ನಡೆದಾಕ್ಷಣ, ಬಲಪಂಥೀಯರ ಮೇಲೆ ಸಾರ್ವಜನಿಕವಾಗಿ ಆರೋಪಿಸುವುದು ಎಷ್ಟು ಸೂಕ್ತ? ಗೌರಿ ಮತ್ತು ಕಲಬುರ್ಗಿ ಅವರ ಹತ್ಯೆಯಲ್ಲಿ ಬಲ ಪಂಥೀಯರ ಕೈವಾಡ ಕುರಿತು ಆರೋಪ ಮಾಡುವವರ ಬಳಿ ಯಾವ ಸಾಕ್ಷಿ ಇವೆ ಎಂದು ಪಶ್ನಿಸಿದರು. ವೀರಶೈವ ಲಿಂಗಾಯತ, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ರಾಜಕೀಯ ಇರುವುದು ನಿಜ. ಆದರೆ, ಈ ಬಗ್ಗೆ ನಾನು ಈಗಲೇ ಏನೂ ಹೇಳುವುದಿಲ್ಲ. ಧರ್ಮ ರಕ್ಷಕರಿಗೆ ಆಪತ್ತು ಖಚಿತ ಎಂಬಂತಾಗಿದೆ. ಗೋವಿನ ರಕ್ಷಣೆಗೆ ನಿಂತವರ ಮೇಲೆ ಆಕ್ರಮಣ ನಡೆಯುತ್ತಿದೆ. ಆಕ್ರಮಣ ಮಾಡುವವರಿಗೆ ಸರ್ಕಾರಿ ಯಂತ್ರ ಪೋಷಕವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು