ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ತಂದೆ
Team Udayavani, Oct 12, 2017, 7:10 AM IST
ರಾಮದುರ್ಗ: ವ್ಯಕ್ತಿಯೊಬ್ಬ ತನ್ನಿಬ್ಬರು ಹೆಣ್ಣು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿ, ನಂತರ ತಾನೂ ಕತ್ತು ಕೊಯ್ದುಕೊಂಡು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ತಾಲೂಕಿನ ಮುಳ್ಳೂರ ಗುಡ್ಡದಲ್ಲಿ ನಡೆದಿದೆ.
ಮುದೇನೂರ ಗ್ರಾಮದ ಪವಿತ್ರಾ (8) ಹಾಗೂ ಪ್ರಿಯಾಂಕಾ (6) ಮೃತ ಬಾಲಕಿಯರು. ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡ ಸಿದ್ದಪ್ಪ ಧೂಳಪ್ಪ ಕುಳ್ಳೂರ (33) ಪರಿಸ್ಥಿತಿ ಚಿಂತಾಜನಕವಾಗಿದೆ.
ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಗೆ ಹೃದಯದ ಸಮಸ್ಯೆ ಇದ್ದು, ಚಿಕಿತ್ಸೆಗಾಗಿ ಹಣ ಹೊಂದಿಸಲು ಆಗದ ಕಾರಣ ಮಕ್ಕಳೊಂದಿಗೆ ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟ ಡೆತ್ನೋಟ್ ಸ್ಥಳದಲ್ಲಿ ದೊರೆತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.