“ಬಿಗ್‌ ಬಾಸ್‌’ ಕಾರ್ಯಕ್ರಮದಲ್ಲಿ ಅನೈತಿಕ ಚಟುವಟಿಕೆ ನಡೆದಿಲ್ಲ


Team Udayavani, Oct 13, 2017, 6:20 AM IST

BIGG-BOSS-SUDEEP-2017.jpg

ಬೆಂಗಳೂರು: “ಬಿಗ್‌ ಬಾಸ್‌’ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅನೈತಿಕ ಚಟುವಟಿಕೆಗಳು ನಡೆದಿಲ್ಲ. ನಮಗೂ ಒಂದು ಸಾಮಾಜಿಕ ಜವಾಬ್ದಾರಿಯಿದೆ. ಇಂತಹ ಘಟನೆಗಳು “ಬಿಗ್‌ ಬಾಸ್‌’ ಮನೆಯಲ್ಲಿ ನಡೆದರೆ ನಾನು ಅಲ್ಲಿ ಇರುವುದಿಲ್ಲ. ಜನರ ಪ್ರೀತಿ, ವಿಶ್ವಾಸಕ್ಕಿಂತ ದೊಡ್ಡದು ಬೇರೆ ಏನೂ ಇಲ್ಲ’ ಎಂದು ಸುದೀಪ್‌ ಹೇಳಿದ್ದಾರೆ.

ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ “ಬಿಗ್‌ ಬಾಸ್‌’ನ ಐದನೇ ಅವತರಣಿಕೆ ಅಕ್ಟೋಬರ್‌ 15ರಿಂದ ಪ್ರಾರಂಭವಾಗಲಿದೆ. ಈ ಕಾರ್ಯಕ್ರಮ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ ವರ್ಷದ “ಬಿಗ್‌ ಬಾಸ್‌’ನ ನಾಲ್ಕನೆಯ ಸೀಸನ್‌ನಲ್ಲಿ ನಡೆದ ಒಂದು ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಯಾಗಿದೆ. ಸಿಕ್ರೇಟ್‌ ರೂಂಗೆ ಬಿಟ್ಟು ಬರುವ ಸಂದರ್ಭದಲ್ಲಿ ಚಾನಲ್‌ನ ಬಿಝಿನೆಸ್‌ ಹೆಡ್‌ ಹಾಗೂ ಕಾರ್ಯಕ್ರಮದ ನಿರ್ದೇಶಕ ಪರಮೇಶ್ವರ ಗುಂಡ್ಕಲ್‌ ನಡುವಿನ ದೃಶ್ಯವೊಂದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ಈ ಕುರಿತು ಮಾತನಾಡುವ ಸುದೀಪ್‌, “ನನಗೆ ಪರಮೇಶ್‌ ಮತ್ತು ಮಾಳವಿಕಾ ಇಬ್ಬರೂ ಚೆನ್ನಾಗಿ ಗೊತ್ತು. ಮಾಳವಿಕಾ ಅವರು ಕಾರ್ಯಕ್ರಮಕ್ಕೆ ಬಂದ ಸಂದರ್ಭದಲ್ಲಿ ಸಾಕಷ್ಟು ಅಳುಕಿತ್ತು. ಜನ ತಮ್ಮನ್ನು ಹೇಗೆ ಸ್ವೀಕರಿಸುತ್ತಾರೋ ಎಂಬ ಭಯವಿತ್ತು. ಆಗ ಅವರಿಗೆ ಪರಮೇಶ್‌ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಆ ಸಂದರ್ಭದಲ್ಲಿ ಮಾಳವಿಕಾ ಅವರು ಹಗ್‌ ಮಾಡಿ ಮುತ್ತು ಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಅಪಾರ್ಥ ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇಡೀ ಕಾರ್ಯಕ್ರಮ ಸ್ಕ್ರಿಪ್ಟೆಡ್‌ ಆಗಿದ್ದರೆ, ಮಾಳವಿಕಾ ಅವರು ಗೆಲ್ಲಬೇಕಿತ್ತು. ಆದರೆ, ಕಳೆದ ಬಾರಿ ಗೆದ್ದಿದ್ದು ಇನ್ನಾéರೋ ಬೇರೆ. ಹಾಗಾಗಿ ಇದೆಲ್ಲ ಸುಳ್ಳು. ಈ ಕುರಿತು ಪರಮೇಶ್‌ ಅವರಿಗೆ ಫೋನ್‌ ಬಂದಿದೆ. ಇಷ್ಟು ದುಡ್ಡು ಕೊಟ್ಟರೆ, ಈ ವಿಡಿಯೋ ಅಪ್‌ಲೋಡ್‌ ಮಾಡುವುದಿಲ್ಲವೆಂದು ಯಾರೋ ಹೆದರಿಸಿದ್ದಾರೆ. ಅವರು ಅದಕ್ಕೆ ಕೇರ್‌ ಮಾಡದ ಕಾರಣ, ವಿಡಿಯೋ ಹೊರಬಂದಿದೆ’ ಎಂದು ಅವರು ತಿಳಿಸಿದರು.

ಶತ್ರು ಒಳಗೇ ಇದ್ದಾರೆ:
ಇದು ಯಾರ ಷಡ್ಯಂತ್ರವೆಂಬ ಸತ್ಯ ಒಂದಲ್ಲ ಒಂದು ದಿನ ಬಂದೇ ಬರುತ್ತದೆ ಎನ್ನುವ ಸುದೀಪ್‌, “ಶತ್ರು ಎಲ್ಲೋ ಇಲ್ಲ. ಒಳಗೇ ಇದ್ದಾರೆ. ಎಷ್ಟು ಜಾಣ್ಮೆಯಿಂದ ಕೆಲಸ ಮಾಡಿದ್ದಾರೆಂದರೆ, ಎಷ್ಟು ಬೇಕೋ ಅಷ್ಟೇ ಬಿಟ್ಟಿದ್ದಾರೆ. ಆ ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರ ಜನ ಕೆಲಸ ಮಾಡುತ್ತಾರೆ. ಕೆಲವರಿಗೆ ಮಾತ್ರ ಒಳಗೆ ಹೋಗುವ ಅವಕಾಶವಿದೆ. ಹಾಗಾಗಿ ಒಳಗಿರುವವರು ಮಾತ್ರ ಈ ಕೆಲಸ ಮಾಡುವುದಕ್ಕೆ ಸಾಧ್ಯ. ಒಂದಲ್ಲ ಒಂದು ದಿನ ಆ ಕೆಲಸ ವಿಡಿಯೋ ಅಪ್‌ಲೋಡ್‌ ಮಾಡಿ, ಸುಳ್ಳು ಸುದ್ದಿ ಹಬ್ಬಿಸಿದ್ದು ಯಾರು ಎಂದು ಗೊತ್ತಾಗುತ್ತದೆ’ ಎಂದರು.

ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಮನುಷ್ಯರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಕುರಿತು ಮಾತನಾಡಿದ ಅವರು, “ಬಹಳಷ್ಟು ಜನರಿಗೆ ಒಂದೊಳ್ಳೆಯ ವೇದಿಕೆ ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಜನ ಸಾಮಾನ್ಯರಿಗೆ ಇದೊಂದು ಒಳ್ಳೆಯ ವೇದಿಕೆಯಾಗಲಿದೆ’ ಎಂದರು. ಶುಕ್ರವಾರ ಆದರೆ ಬಹಳ ಹಿಂಸೆ. ಏಕೆಂದರೆ, ತಮ್ಮ ನೋವನ್ನು ಹೇಳಿಕೊಳ್ಳುವುದಕ್ಕೆ ಸ್ಪರ್ಧಿಗಳು ಕಾಯುತ್ತಿರುತ್ತಾರೆ. ಅವರನ್ನೆಲ್ಲ ಸಮಾಧಾನ ಮಾಡೋದೇ ದೊಡ್ಡ ಕೆಲಸ. ನಿಜ ಹೇಳಬೇಕೆಂದರೆ, ನನ್ನ ಕಪ್ಪು ಕೂದಲು ಬಿಳಿಯಾಗೋಕೆ ಕಾರಣ “ಬಿಗ್‌ ಬಾಸ್‌’, ಸಿಸಿಎಲ್‌ ಮತ್ತು ನಿರ್ದೇಶಕ ಪ್ರೇಮ್‌’ ಎಂದು ನಗೆ ಚಟಾಕಿ ಹಾರಿಸಿದರು ಸುದೀಪ್‌.

ಜಗತ್ತು ನೋಡುವ ರೀತಿ ಬದಲಾಗಿದೆ
“ಬಿಗ್‌ ಬಾಸ್‌’ ಕಾರ್ಯಕ್ರಮದಿಂದ ಏನು ಕಲಿತಿರಿ ಎಂಬ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಯಾರಿಗೂ ಹೊಡೆಯಬಾರದು, ಸೀಕ್ರೆಟ್‌ ರೂಂ ಹತ್ತಿರ ಹೋಗಬಾರದು’ ಎಂದು ನಗೆಚಟಾಕಿ ಹಾರಿಸಿದರು. “ನಿಜ ಹೇಳಬೇಕೆಂದರೆ, ಈ ಕಾರ್ಯಕ್ರಮ ನಡೆಸಿಕೊಡುವುದಕ್ಕೆ ಪ್ರಾರಂಭಿಸಿದ ಮೇಲೆ ಸಾಕಷ್ಟು ತಾಳ್ಮೆ ಬಂದಿದೆ. ಅಷ್ಟೇ ಅಲ್ಲ, ನಾನು ಜಗತ್ತನ್ನು ನೋಡುವ ರೀತಿ ಬದಲಾಗಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ನಾನೊಬ್ಬ ಒಳ್ಳೆಯ ಕೇಳುಗನಾಗುವುದರ ಜೊತೆಗೆ, ಏನೇನು ಮಾಡಬಾರದು ಎಂದು ಅರಿತುಕೊಂಡಿದ್ದೇನೆ. ಒಟ್ಟಾರೆ ನನ್ನ ದೃಷ್ಟಿಕೋನವೇ ಬದಲಾಗಿದೆ’ ಎಂದು ಹೇಳಿದರು.

ಕಲರ್ಸ್‌ ಕನ್ನಡ ಹಾಗೂ ಕಲರ್ಸ್‌ ಸೂಪರ್‌ನ ಬಿಝಿನೆಸ್‌ ಹೆಡ್‌ ಹಾಗೂ “ಬಿಗ್‌ ಬಾಸ್‌’ ನಿರ್ದೇಶಕ ಪರಮೇಶ್ವರ ಗುಂಡ್ಕಲ್‌, ಚಾನಲ್‌ನ ನಾನ್‌-ಫಿಕ್ಷನ್‌ ಹೆಡ್‌ ವೈಷ್ಣವಿ, ಎಂಡೆಮಾಲ್‌ ಶೈನ್‌ ಇಂಡಿಯಾದ ಸಿಒಒ ಅಭಿಷೇಕ್‌ ರೇ ಹಾಜರಿದ್ದರು.

ಪ್ರತಿ ಭಾನುವಾರ ಸುದೀಪ್‌ ಅಡುಗೆ
ಇನ್ನು “ಬಿಗ್‌ ಬಾಸ್‌’ನ ಐದನೆಯ ಅವತರಣಿಕೆ ಅಕ್ಟೋಬರ್‌ 15ರಿಂದ ಕಲರ್ಸ್‌ ಸೂಪರ್‌ ಚಾನಲ್‌ನಲ್ಲಿ ಪ್ರಾರಂಭವಾಗಲಿದೆ. 16ರಿಂದ ಪ್ರತಿ ರಾತ್ರಿ 8ರಿಂದ 9ರವರೆಗೂ ಪ್ರಸಾರವಾಗಲಿದೆ. ಈ ಬಾರಿ ಒಟ್ಟು 17 ಸ್ಪರ್ಧಿಗಳಿದ್ದು, ಆ ಪೈಕಿ 11 ಜನ ಸೆಲೆಬ್ರಿಟಿಗಳಿದ್ದರೆ, ಆರು ಸಾಮಾನ್ಯ ಜನರಿರುತ್ತಾರೆ. ಈ ಆರು ಜನಸಾಮಾನ್ಯರನ್ನು ಸುಮಾರು 40 ಸಾವಿರ ಜನರ ಪೈಕಿ ಆಯ್ಕೆ ಮಾಡಲಾಗಿದೆ. ಈ ಬಾರಿಯ ಕಾರ್ಯಕ್ರಮದ ವಿಶೇಷತೆಯೆಂದರೆ, ಸುದೀಪ್‌ ಪ್ರತಿ ಭಾನುವಾರ ರಾತ್ರಿ ಅಡುಗೆ ಮಾಡಿ ಬಡಿಸುತ್ತಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.