ಕೈ ಬಿಟ್ಟ ಸಿ.ಪಿ.ಯೋಗೀಶ್ವರ್; ಡಿಕೆಶಿ ವಿರುದ್ಧ ಕಿಡಿ
Team Udayavani, Oct 14, 2017, 12:26 PM IST
ಚನ್ನಪಟ್ಟಣ: ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ಗುಡ್ಬೈ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್ ನಾನು ಕಾಂಗ್ರೆಸ್ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ ಎಂದರು.
‘ಕಳೆದ ನಾಲ್ಕು ವರ್ಷಗಳಿಂದ ನಾನು ಕಾಂಗ್ರೆಸ್ನಲ್ಲಿದ್ದೆ, ಆದರೆ ನಾಯಕರು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ನನಗೆ ಕಾಂಗ್ರೆಸ್ ಟಿಕೇಟ್ ಕೈ ತಪ್ಪಲು ಸಚಿವ ಡಿ.ಕೆ.ಶಿವಕುಮಾರ್ ಅವರೇ ಕಾರಣ’ ಎಂದು ಕಿಡಿ ಕಾರಿದರು.
‘ಡಿಕೆಶಿ ನನ್ನ ಮುಂದೆಯೆ ಟಿಕೇಟ್ ಹರಿದು ಹಾಕಿದರು. ಏ ಯಾಕಯ್ಯ ನಿನಗೆ ಟಿಕೇಟ್ ಎಂದು. ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದರು’ ಎಂದು ವ್ಯಂಗ್ಯವಾಡಿದವರು. ಇದೇ ವೇಳೆ ‘ಡಿಕೆಶಿ ಅವರಿಗೆ ಹಣ ಬಲವಿದೆ, ನನಗೆ ಜನಬಲವಿದೆ’ ಎಂದರು.
ರಾಜಕೀಯ ಜೀವನದ ಮುಂದಿನ ತೀರ್ಮಾನವನ್ನು ಅಕ್ಟೋಬರ್ 22 ಕ್ಕೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
2008 ರಲ್ಲಿ ಆಪರೇಷನ್ ಕಮಲಕ್ಕೆ ಗುರಿಯಾಗಿ ಕಾಂಗ್ರೆಸ್ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಚಿವರಾಗಿದ್ದರು, ಉಪಚುನವಾಣೆಯಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾಗಿದ್ದರು.
2013 ರ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಜಯಗಳಿಸಿದ್ದ ಯೋಗೀಶ್ವರ್ ಆಡಳಿತೂರೂಢ ಕಾಂಗ್ರೆಸ್ಗೆ ಪುನರ್ ಸೇರ್ಪಡೆಯಾಗಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು.
ಇದೀಗ ಜೆಡಿಎಸ್ ಸೇರ್ಪಡೆ ಕುರಿತಾಗಿ ಮಾತುಕತೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು