“ಜನತಾರಂಗ’ ಶೀಘ್ರ ಪ್ರವೇಶಕ್ಕೆ ತಯಾರಿ


Team Udayavani, Oct 21, 2017, 6:00 AM IST

Sharad-Yadav.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಹೊಸ ಪ್ರಯೋಗಗಳ ಪ್ರಯತ್ನ ನಡೆಯುತ್ತಿದ್ದು, ಜೆಡಿಯು ಶರದ್‌ಯಾದವ್‌ ಬಣ “ಜನತಾರಂಗ’ ಸ್ಥಾಪನೆಗೆ ಮುಂದಾಗಿದೆ.

ಸಮಾಜವಾದಿ ಪಕ್ಷ, ಎಡಪಕ್ಷ, ಬಿಎಸ್‌ಪಿ, ಆಮ್‌ಆದ್ಮಿ ಪಕ್ಷ, ಸ್ವರಾಜ್‌ ಅಭಿಯಾನ, ರೈತ ಸಂಘ, ಕನ್ನಡಪರ, ದಲಿತ ಹಾಗೂ ಕಾರ್ಮಿಕ ಸಂಘಟನೆಗಳನ್ನು ಒಂದೇ ಸೂರಿನಡಿ ತಂದು, “ಜನತಾರಂಗ’ ಅಸ್ತಿತ್ವಕ್ಕೆ ವೇದಿಕೆ ಸಿದ್ಧಗೊಂಡಿದೆ. ರಾಜ್ಯದಲ್ಲಿ ಸದ್ಯ ಚದುರಿ ಹೋಗಿ ರುವ ಜನತಾ ಪರಿವಾರದ ನಾಯಕರನ್ನು ಜತೆ ಗೂಡಿಸುವ ಪ್ರಯತ್ನವೂ ಇದರ ಹಿಂದೆ ಇದೆ ಎನ್ನುವುದು ಗಮನಾರ್ಹ ಅಂಶ. ಇತ್ತೀಚೆಗಷ್ಟೇ ಜೆಡಿಯು ಶರದ್‌ಯಾದವ್‌ ಬಣ ಸೇರ್ಪಡೆಯಾಗಿರುವ ಮಾಜಿ ಸಂಸದ ಪಿ. ಕೋದಂಡರಾಮಯ್ಯ, ಜೆಡಿಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಜಿಕೆಸಿ ರೆಡ್ಡಿ ಇಂಥದ್ದೊಂದು ಪ್ರಯೋಗಕ್ಕೆ ಚಾಲನೆ ನೀಡಿದ್ದಾರೆ. ಸಮಾಜವಾದಿ ಪಕ್ಷ, ರೈತ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಜತೆ ಸಮಾಲೋಚನೆಯನ್ನೂ ನಡೆಸುತ್ತಿದ್ದಾರೆ.

ಬಿಹಾರದಲ್ಲಿನ ವಿದ್ಯಮಾನಗಳ ನಂತರ ನಿತೀಶ್‌ಕುಮಾರ್‌ ಅವರಿಂದ ದೂರವಾಗಿರುವ ಶರದ್‌ಯಾದವ್‌ ತಮ್ಮದೇ ಆದ ಪ್ರತ್ಯೇಕ ಬಣ ಮಾಡಿಕೊಂಡು ಕಾಂಗ್ರೆಸ್‌, ಎಸ್‌ಪಿ, ಆರ್‌ಜೆಡಿ, ಎಡಪಕ್ಷ, ಡಿಎಂಕೆ, ಟಿಎಂಸಿ ಪಕ್ಷಗಳ ಜತೆ ಪರ್ಯಾಯ ರಂಗ ಸ್ಥಾಪನೆ ಪ್ರಯತ್ನ ನಡೆಸುತ್ತಿದ್ದು, ಕರ್ನಾಟಕದಲ್ಲೂ “ಜನತಾರಂಗ’ ವೇದಿಕೆ ಸ್ಥಾಪಿಸಿ ಸಮಾನ ಮನಸ್ಕ, ಪ್ರಗತಿಪರ ಸಂಘಟನೆಗಳ ಜತೆಗೂಡಿ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳ ಪಡೆ ರಚಿಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ, ಜನತಾರಂಗ ಸ್ಥಾಪನೆ ಪ್ರಯತ್ನಕ್ಕೆ ಚಾಲನೆ ನೀಡಲಾಗಿದೆ.

ಸಕ್ರಿಯ ರಾಜಕಾರಣದಿಂದ ದೂರ ಇರುವ ಪಿ.ಜಿ.ಆರ್‌.ಸಿಂಧ್ಯಾ, ಮಾಜಿ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಪುತ್ರ ಮಹಿಮಾ ಪಟೇಲ್‌ ಸೇರಿದಂತೆ ಜನತಾಪರಿವಾರದ ನಾಯಕರನ್ನು ಜನತಾರಂಗದತ್ತ ಸೆಳೆಯಲು ಈಗಾಗಲೇ ಎರಡು-ಮೂರು ಸುತ್ತು ಮಾತುಕತೆ ಸಹ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕನಿಷ್ಠ 50 ಕ್ಷೇತ್ರಗಳಲ್ಲಿ ಪ್ರಬಲ ಹಾಗೂ ಸ್ಥಳೀಯವಾಗಿ ವರ್ಚಸ್ಸು ಇರುವ ಜನಪರ ಹೋರಾಟ ಮಾಡುವ ನಾಯಕರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸುವುದು “ಜನತಾರಂಗ’ ಸ್ಥಾಪನೆಯ ಉದ್ದೇಶವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಶರದ್‌ಯಾದವ್‌ ಜತೆ ಎಚ್‌.ಡಿ.ದೇವೇಗೌಡರು ಗುರುತಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಜೆಡಿಎಸ್‌ ಜತೆಗೂ ಮೈತ್ರಿ ಮಾಡಿಕೊಳ್ಳುವ ಅವಕಾಶ ಮುಕ್ತವಾಗಿರಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಜೆಡಿಎಸ್‌ಗೆ ಇಷ್ಟವಿಲ್ಲ: ಆದರೆ, ಜೆಡಿಎಸ್‌ಗೆ ರಾಜ್ಯದಲ್ಲಿ ಜೆಡಿಯು ಶರದ್‌ಬಣದ ಜತೆ ಗುರುತಿಸಿಕೊಳ್ಳಲು  ಇಷ್ಟವಿಲ್ಲ. ರಾಜ್ಯದಲ್ಲಿ ಜೆಡಿಯು ಶಕ್ತಿಯುತವಾಗಿ ಇಲ್ಲ, ಹೀಗಿರುವಾಗ ಜತೆಗೂಡಿದರೆ ಏನು ಲಾಭ ? ಎಂಬ ಪ್ರಶ್ನೆ ಜೆಡಿಎಸ್‌ನದು.ಈಗಾಗಲೇ ಪ್ರತ್ಯೇಕವಾಗಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಾಗಿ ಜೆಡಿಎಸ್‌ ಹೇಳಿದೆಯಾದರೂ ಅನಿವಾರ್ಯತೆ ಎದುರಾದರೆ ಎಡಪಕ್ಷಗಳು, ಬಿಎಸ್‌ಪಿ ಹಾಗೂ ಪ್ರಮುಖ ಕನ್ನಡಪರ ಸಂಘಟನೆಯೊಂದರ ಜತೆ ಸೀಮಿತ ಕ್ಷೇತ್ರಗಳ ಮಟ್ಟಿಗೆ ಮೈತ್ರಿ ಮಾಡಿಕೊಳ್ಳಬಹುದಾ ಎಂಬ ಚಿಂತನೆಯಲ್ಲಿದೆ ಎಂದು ಹೇಳಲಾಗಿದೆ.

ಹೊಸ ಪಕ್ಷಗಳ ಪರ್ವ
ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಜತೆಗೆ ಒಂದೆಡೆ ನಟ ಉಪೇಂದ್ರ ಹಾಗೂ ಮತ್ತೂಂದೆಡೆ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಹೊಸ ಪಕ್ಷ ಸ್ಥಾಪನೆ ಘೋಷಣೆ ಮಾಡಿದ್ದಾರೆ. ಅತ್ತ ಎಸ್‌ಡಿಪಿಐ ಸಹ 50 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಸಜ್ಜಾಗುತ್ತಿದೆ. ಇದರ ನಡುವೆ ಇದೀಗ ಜೆಡಿಯು ಶರದ್‌ಯಾದವ್‌ ಬಣ “ಜನತಾರಂಗ’ ಸ್ಥಾಪನೆಗೆ ಮುಂದಾಗಿದೆ. ಒಟ್ಟಾರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಮತ್ತೂಮ್ಮೆ ಹೊಸ ಪ್ರಯೋಗಗಳಿಗೆ ವೇದಿಕೆಯಾಗುವುದಾ ಎನ್ನುವುದನ್ನು ಕಾದು ನೋಡಬೇಕಿದೆ.

ಸಮಾನ ಮನಸ್ಕ ಪಕ್ಷ, ಸಂಘಟನೆಗಳನ್ನು ಜತೆಗೂಡಿಸಿಕೊಂಡು “ಜನತಾರಂಗ’ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ರೈತಸಂಘ, ಸಮಾಜವಾದಿ ಪಕ್ಷ ಸೇರಿ ಹಲವಾರು ನಾಯಕರ ಜತೆ ಈಗಾಗಲೇ ಹಲವು ಪೂರ್ವಭಾವಿ ಸಭೆಗಳೂ ನಡೆದಿವೆ. ಕೆಲವು ಹಾಲಿ ಹಾಗೂ ಮಾಜಿ ಶಾಸಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ಜನವರಿ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳು ನಡೆಯಲಿವೆ.
– ಜಿ.ಕೆ.ಸಿ.ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಜೆಡಿಯು ಶರದ್‌ಯಾದವ್‌ ಬಣ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.