ಡಿಕೆಶಿ ಬ್ರದರ್ ದಬ್ಟಾಳಿಕೆಗೆ ಚುನಾವಣೆಯಲ್ಲಿ ಉತ್ತರ
Team Udayavani, Oct 23, 2017, 7:10 AM IST
ಚನ್ನಪಟ್ಟಣ: “ಡಿಕೆಶಿ ಸಹೋದರರ ದಬ್ಟಾಳಿಕೆಗೆ ತಾಲೂಕಿನ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ’ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಲೂಕಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ಸ್ವಾಭಿಮಾನಿ, ಪ್ರಗತಿಪರ ಚಿಂತಕರ ಸಭೆಯಲ್ಲಿ ಅವರು ಮಾತನಾಡಿದರು. “ನನಗೆ ಡಿಕೆಶಿ ಸಹೋದರರ ಮೇಲೆ ಯಾವ ಹಗೆತನವೂ ಇಲ್ಲ. ಆದರೂ ಅವರು ನನ್ನನ್ನು ರಾಜಕೀಯವಾಗಿ ಪ್ರತಿ ಹಂತದಲ್ಲೂ ತುಳಿಯುತ್ತಾ ಬಂದಿದ್ದಾರೆ. ನನ್ನ ಸಂಯಮವನ್ನು ಪರೀಕ್ಷೆ ಮಾಡುತ್ತಲೇ ಬಂದಿದ್ದಾರೆ’ ಎಂದು ದೂರಿದರು.
ಸಚಿವ ಸ್ಥಾನಕ್ಕೆ ಕತ್ತರಿ: 20-20 ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಘೋಷಣೆಯಾಗಿ ನನ್ನನ್ನು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದರು. ಆದರೆ ಡಿಕೆಶಿ ಬೆಳಗಿನ ವೇಳೆಗೆ ನನ್ನ ಸಚಿವ ಸ್ಥಾನಕ್ಕೆ ಕತ್ತರಿ ಹಾಕಿದ್ದರು. ಜೊತೆಗೆ 2013ರ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಿ, ಟಿಕೆಟ್ ಬೇಡ ಎಂದ ಮಾಜಿ ಶಾಸಕ ಸಾದತ್ ಆಲಿಖಾನ್ಗೆ ನೀಡಿದ್ದರು. ಆದರೂ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಿದಾಗ ಮತದಾರರು ನನ್ನ ಕೈಹಿಡಿದರು ಎಂದು ಯೋಗೇಶ್ವರ್ ಹೇಳಿದರು.
ಇದೇ ವೇಳೆ, ಆಗಾಗ ಬಿಜೆಪಿ ಮಂತ್ರ ಪಠಿಸುತ್ತಾ ಬಿಜೆಪಿ ಸೇರುವ ಮುನ್ಸೂಚನೆಯನ್ನೂ ಯೋಗೇಶ್ವರ್ ನೀಡಿದರು. ಶೀಘ್ರದಲ್ಲೇ ಇದೇ ಸ್ಥಳದಲ್ಲಿ ಮತ್ತೂಂದು ಸಭೆ ಕರೆದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!