ವಿಧಾನಸೌಧದ ಮಾದರಿ ಲೈಬ್ರರಿ ಬಳಕೆಯೇ ಇಲ್ಲ!


Team Udayavani, Oct 24, 2017, 7:42 AM IST

24-7.jpg

ಬೆಂಗಳೂರು: ದೇಶದ ಇತರೆ ವಿಧಾನ ಮಂಡಲಗಳಿಗೆ ಹೋಲಿಸಿದರೆ ಮಾದರಿ ಎನ್ನಬಹುದಾದ ಗ್ರಂಥಾಲಯ ಅವಕಾಶ ರಾಜ್ಯದ ವಿಧಾನ ಮಂಡಲ ಸದಸ್ಯರಿಗೆ ಇದೆ. ಆದರೆ, ಅದನ್ನು ಉಪಯೋಗಿಸು ವವರು ಬೆರಳೆಣಿಕೆಯಷ್ಟು ಮಂದಿ ಮಾತ್ರ! ಶಾಸಕರ ಜ್ಞಾನಾರ್ಜನೆ, ಸದನದ ಹಿಂದಿನ ನಡಾವಳಿಗಳನ್ನು ಅಧ್ಯಯನ ಮಾಡಲು ವಿಧಾನಸೌಧ ಉತ್ತರ ಭಾಗದ ನೆಲಮಹಡಿಯಲ್ಲಿ ಸುಸಜ್ಜಿತ ಕರ್ನಾಟಕ ವಿಧಾನಮಂಡಲ ಗ್ರಂಥಾಲಯ ಸ್ಥಾಪಿಸಲಾಗಿದೆ.

ಲೋಕಸಭೆ ಹೊರತುಪಡಿಸಿ ದೇಶದ ಯಾವುದೇ ವಿಧಾನಸಭೆಗಳ ಗ್ರಂಥಾಲಯಗಳಲ್ಲಿ ಇಲ್ಲದ ಮಹತ್ವದ ನಡವಾಳಿಗಳು ಅಲ್ಲಿ ಲಭ್ಯವಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಈ ಗ್ರಂಥಾಲಯ ಬಳಸುವ ಶಾಸಕರ ಸಂಖ್ಯೆ ತೀರಾ ವಿರಳ. ಬಳಸುವುದಿದ್ದರೂ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಮಾತ್ರ. ಆದರೂ ಅವರ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ ಎನ್ನುತ್ತಾರೆ ಗ್ರಂಥಾಲಯದ
ಸಿಬ್ಬಂದಿ.

ಏನೇನು ಪುಸ್ತಕಗಳಿವೆ: ರಾಜಕೀಯ ಶಾಸ್ತ್ರ, ಇತಿ ಹಾಸ, ಪೌರನೀತಿ ಶಾಸ್ತ್ರ, ಶಾಸಕಾಂಗ ಹಾಗೂ ನ್ಯಾಯಾಂಗದ ಕಾಯ್ದೆ ಮತ್ತು ನಿಯಮಗಳು, ಶಾಸಕಾಂಗದ ಇತಿಹಾಸ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾನೂನು ಪುಸ್ತಕಗಳು, ಭೌಗೋಳಿಕ ಶಾಸ್ತ್ರ, ದೇಶ-ವಿದೇಶ ಹಾಗೂ ರಾಜ್ಯಗಳ ಪ್ರಸಿದ್ಧ ವ್ಯಕ್ತಿಗಳ ಜೀವನ ಚರಿತ್ರೆ, ಆತ್ಮಚರಿತ್ರೆ, ಧರ್ಮಶಾಸ್ತ್ರ, ಮನಃಶಾಸ್ತ್ರ, ವಿಶ್ವಕೋಶ, ವಿವಿಧ
ಸಮಿತಿಯ ವರದಿಗಳು, ನಿಘಂಟುಗಳು, ಗೆಜೆಟಿಯರ್‌, ಸಾಮಾ ಜಿಕ ವಿಜ್ಞಾನ, ಸಾಮಾಜಿಕ ಶಾಸ್ತ್ರ, ಅರ್ಥಶಾಸ್ತ್ರ, ಭಾಷಾ ಶಾಸ್ತ್ರ, ಇತರೆ ರಾಷ್ಟ್ರಗಳ ಇತಿಹಾಸ, ಭಾರತ ಸೇರಿದಂತೆ ವಿವಿಧ ರಾಜ್ಯಗಳ ಸಂವಿಧಾನ, ಕೇಂದ್ರ ಹಾಗೂ ರಾಜ್ಯದ ಪ್ರತಿಭಾವಂತ ಸಂಸದೀಯ ಪಟುಗಳ ಪುಸ್ತಕಗಳು, ಜಿಲ್ಲಾ ಮಾಹಿತಿ ಒಳಗೊಂಡ ಗೆಜೆಟಿಯರ್ ಸೇರಿದಂತೆ ಇತರೆ ಪುಸ್ತಕಗಳು ಲಭ್ಯವಿದೆ. ಇವೆಲ್ಲಕ್ಕಿಂತ ಮುಖ್ಯವಾಗಿ ಇತರೆ ಯಾವುದೇ ರಾಜ್ಯಗಳ ವಿಧಾನಮಂಡಲ ಗ್ರಂಥಾಲಯಗಳಲ್ಲಿ ಲಭ್ಯವಿಲ್ಲದ ಭಾರತ ಸಂವಿಧಾನ ರಚನಾ ಸಮಿತಿಯ ನಡವಳಿಕೆಗಳು, ಹೌಸ್‌ ಆಫ್ ಕಾಮನ್ಸ್‌ ಮತ್ತು ಹೌಸ್‌ ಆಫ್ ಲಾರ್ಡ್ಸ್‌ ಸದನದ ನಡವಳಿಕೆಗಳು ವಿಧಾನಸೌಧದ ಗ್ರಂಥಾಲಯದಲ್ಲಿ ಸಿಗುತ್ತವೆ.

ಓದುವವರೇ ಇಲ್ಲ: ಗ್ರಂಥಾಲಯವನ್ನು ಇ-ಗ್ರಂಥಾಲವಾಗಿ ರೂಪಿಸಲಾಗಿದೆ. ಇತ್ತೀಚೆಗೆ ಸುಮಾರು 3.5 ಕೋಟಿ ರೂ.ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಆದರೆ, ಇದನ್ನು ಓದಲು ಶಾಸಕರೇ ಬರುತ್ತಿಲ್ಲ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿವರೆಗೆ ವಿಧಾನಮಂಡಲ ಅಧಿವೇಶನ ನಡೆಯುವಾಗ ಹಲವು ಪ್ರಮುಖ ಪುಸ್ತಕಗಳು ಮತ್ತು ನಡವಳಿಕೆಗಳನ್ನು ಸದನಕ್ಕೆ ಕೊಂಡೊಯ್ದು ಇಡಲಾಗುತ್ತಿತ್ತು. ಸದಸ್ಯರು ತಮಗೆ ಯಾವುದಾದರೂ ಮಾಹಿತಿ ಬೇಕಾದಾಗ ಈ ಪುಸ್ತಕಗಳ ನೆರವು ಪಡೆದುಕೊಳ್ಳುತ್ತಿದ್ದರು. ನಂತರ ಕ್ರಮೇಣ ಸದನಕ್ಕೆ ಕೊಂಡೊಯ್ಯುವ ಪುಸ್ತಕಗಳ ಸಂಖ್ಯೆ ಕಡಿಮೆಯಾಗಿ ಈಗ ಸಂಪೂರ್ಣ ಸ್ಥಗಿತಗೊಂಡಿದೆ. ಹಿಂದೆಲ್ಲಾ ಸಚಿವರು, ಶಾಸಕರು ಸಾಕಷ್ಟು ಸಂಖ್ಯೆಯಲ್ಲಿ ಗ್ರಂಥಾಲಯಕ್ಕೆ ಬರುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ
ಅವರ ಸಂಖ್ಯೆ ಕಡಿಮೆಯಾಗಿದೆ. ಪ್ರಸಕ್ತ ವಿಧಾನಸಭೆಯಲ್ಲಿ ರಮೇಶ್‌ಕುಮಾರ್‌, ಪ್ರಮೋದ್‌ ಮಧ್ವರಾಜ್‌, ಮತ್ತು ಪ್ರಿಯಾಂಕ್‌ ಖರ್ಗೆ ಅವರು ಸಚಿವರಾಗುವ ಮುನ್ನ ಗ್ರಂಥಾಲಯಕ್ಕೆ ಬಂದು ಅಧ್ಯಯನ ನಡೆಸುತ್ತಿದ್ದರು. ಈಗ ಅವರು ಸಹ ಬರುತ್ತಿಲ್ಲ. ಶಾಸಕರಾದ ಕಿಮ್ಮನೆ ರತ್ನಾಕರ ಮತ್ತು ಕುಡಚಿ ರಾಜೀವ ಅವರು ಹೆಚ್ಚಾಗಿ ಗ್ರಂಥಾಲಯ ಬಳಸಿಕೊಳ್ಳುತ್ತಿದ್ದಾರೆ. ಉಳಿದಂತೆ ಬೆರಳೆಣಿಕೆಯ
ಶಾಸಕರು ಯಾವಾಗಾದರೂ ಒಮ್ಮೆ ಬಂದು ಹೋಗುತ್ತಾರೆ ಎನ್ನುತ್ತಾರೆ ಗ್ರಂಥಾಲಯ ಸಿಬ್ಬಂದಿ.

ವಿಶೇಷ ವರದಿ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.