ಎಟಿಎಂಗೆ ಹಣ ತುಂಬಿಸುತ್ತಿದ್ದ ವೇಳೆ 18 ಲಕ್ಷ ರೂ. ದರೋಡೆ!
Team Udayavani, Oct 30, 2017, 9:57 AM IST
ಬೆಂಗಳೂರು: ಎಟಿಎಂಗೆ ಹಣ ತುಂಬಿಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ದರೋಡೆ ಮಾಡಿರು ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಜಾಲಹಳ್ಳಿ ಕ್ರಾಸ್ ಬಳಿಯ ಐಸಿಐಸಿಐ ಎಟಿಎಂಗೆ ಸೆಕ್ಯೂರ್ವೆಲ್ ಏಜೆನ್ಸಿಯ ಸಿಬಂದಿ ಹಣ ತುಂಬಿಸುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ದರೋಡೆಕೋರರು ಸಿಬಂದಿ ಮೇಲೆ ದಾಳಿ ನಡೆಸಿದ್ದು, ಪ್ರತಿರೋಧ ಒಡ್ಡಿದ ಕಸ್ಟೋಡಿಯನ್ ಮೇಲೆಯೇ ಚಾಕುವಿನಿಂದ ಇರಿದು ಹಣವನ್ನು ದೋಚಿದ್ದಾರೆಂದು ತಿಳಿದು ಬಂದಿದೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಸಾಗರ್ ಹಾಗೂ ಮೋಹನ್ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
18.5 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ವಾಹನದಲ್ಲಿ ಇನ್ನೂ 1,26,50,000 ರೂಪಾಯಿ ಹಣ ಇತ್ತು ಎನ್ನಲಾಗಿದೆ.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ