ಗಡಿನಾಡು ಬೆಳಗಾವೀಲಿ ಕರಾಳ ದಿನ


Team Udayavani, Nov 2, 2017, 7:15 AM IST

Ban021.jpg

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸಿದ ಕರಾಳ ದಿನಾಚರಣೆ ರ್ಯಾಲಿಯಲ್ಲಿ ಶಾಸಕ ಸಂಭಾಜಿ ಪಾಟೀಲ,ಮೇಯರ್‌ ಸಂಜೋತಾ ಬಾಂದೇಕರ ಹಾಗೂ ಇದಕ್ಕಾಗಿಯೇ ಮಹಾರಾಷ್ಟ್ರದಿಂದ ಆಗಮಿಸಿದ್ದ ಕಣಕವಲಿ ಶಾಸಕ ನಿತೇಶ ರಾಣೆ ಕಪ್ಪುಪಟ್ಟಿ ಧರಿಸಿ ಪಾಲ್ಗೊಂಡರು.

ಸಭೆಯಲ್ಲಿ ಮಾತನಾಡಿದ ಶಾಸಕ ಸಂಭಾಜಿ ಪಾಟೀಲ,”ಉಪವಾಸ ಇದ್ದರೂ ಅಡ್ಡಿ ಇಲ್ಲ. ಆದರೆ ನಾವು ಮಹಾರಾಷ್ಟ್ರಕ್ಕೆ ಸೇರುತ್ತೇವೆ. ಮಹಾರಾಷ್ಟ್ರ ಪ್ರದೇಶ ಮೊದಲು ಹುಬ್ಬಳ್ಳಿವರೆಗೆ ಇತ್ತು ಎನ್ನುವ ಶಾಸನವಿದೆ. ಹೀಗಾಗಿ ಅಲ್ಲಿಯವರೆಗಿನ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕು. ಕರ್ನಾಟಕದಲ್ಲಿ ಪ್ರಜಾಪ್ರಭುತ್ವವಿಲ್ಲ. ಹೀಗಾಗಿ ಶಾಸಕನಾಗ  ನಾನು ನೋವು ಸಹಿಸಬೇಕಾಗಿದೆ’ ಎಂದರು. 

ಬೆಳಗ್ಗೆ ನಗರದ ಸಂಭಾಜಿ ಉದ್ಯಾನದಿಂದ ಆರಂಭವಾದ ಕರಾಳ ದಿನಾಚರಣೆ ಸೈಕಲ್‌ ಹಾಗೂ ಬೈಕ್‌ ರ್ಯಾಲಿಯಲ್ಲಿ ಮೇಯರ್‌, ಮಾಜಿ ಮೇಯರ್‌, ಮಾಜಿ ಶಾಸಕ ಮನೋಹರ ಕಿಣೇಕರ ಹಾಗೂ ಪಾಲಿಕೆ ಸದಸ್ಯರು ಪಾಲ್ಗೊಂಡು “ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗುತ್ತ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.

“ಹಲವಾರು ವರ್ಷಗಳಿಂದ ಅನ್ಯಾಯ ಸಹಿಸುತ್ತಿರುವ ಮರಾಠಿ ಭಾಷಿಕರಿಗೆ ನ್ಯಾಯ ಸಿಗಬೇಕಾಗಿದೆ. ನಮ್ಮ ಹೋರಾಟ ರಾಜ್ಯ ಸರ್ಕಾರದ ವಿರುದಟಛಿವಲ್ಲ, ಕೇಂದ್ರ ಸರ್ಕಾರದ ವಿರುದಟಛಿ ನಮ್ಮ ಆಕ್ರೋಶವಿದೆ’ ಎಂದರು. 

ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಚಿಕ್ಕ ಮಕ್ಕಳು ಪಾಲ್ಗೊಂಡು, ಮಹಾರಾಷ್ಟ್ರಕ್ಕೆ ಸೇರಿಸಿ
ಎನ್ನುವ ಫಲಕ ಹಿಡಿದು ಘೋಷಣೆ ಕೂಗಿದರು.

ಆದರೆ ಸಭೆಯಲ್ಲಿ ಮೇಯರ್‌ ಸಂಜೋತಾ ಬಾಂದೇಕರ ಅವರನ್ನು ವೇದಿಕೆಗೆ ಆಹ್ವಾನಿಸಿದಾಗ ವೇದಿಕೆಗೆ ಬಾರದೆ ಜಾಣತನ ಮೆರೆದರು. ಕರ್ನಾಟಕದ ಸರ್ಕಾರ ಕ್ರಮ ಕೈಗೊಳ್ಳಬಹುದೆಂಬ ಭಯದಿಂದ ಅವರು ಈ ರೀತಿ ಮಾಡಿರಬಹುದೆಂಬ ಮಾತು ಕೇಳಿಬಂತು.ಜತೆಗೆ ರ್ಯಾಲಿಯಲ್ಲೂ ಅವರು ಕಪ್ಪು ಸೀರೆ ಧರಿಸಿರಲಿಲ್ಲ.

ನಾಡ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಎಂಇಎಸ್‌ ಬಗ್ಗೆ ಹೆಚ್ಚಿನ ಮಹತ್ವ ಕೊಡುವುದು ಬೇಡ. ಚುನಾವಣೆ ದೃಷ್ಟಿಯಿಂದ ಇಂಥ ಪುಂಡಾಟಿಕೆ ಮಾಡುವ ಎಂಇಎಸ್‌ಗೆ ಪ್ರಚಾರ ಕೊಡಬಾರದು. ಮೇಯರ್‌ ಇನ್ನಿತರ ಸದಸ್ಯರ ವಿರುದ್ಧ  ಕ್ರಮ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಕನ್ನಡದ ವಿರುದ್ಧ 
ಘೋಷಣೆ ಕೂಗಿದ್ದರೆ ಕ್ರಮ ಕೈಗೊಳ್ಳಲಾಗುವುದು.

 ರಮೇಶ ಜಾರಕಿಹೊಳಿ,
ಜಿಲ್ಲಾ ಉಸ್ತುವಾರಿ ಸಚಿವ

ಮೆರವಣಿಗೆಯಲ್ಲಿ ಕಲ್ಲು ತೂರಾಟ-ಚಾಕು ಇರಿತ
ಪೇದೆ ಸೇರಿ 5ಕ್ಕೂ ಹೆಚ್ಚು ಜನರಿಗೆ ಗಾಯ; ದಾಂಧಲೆಯಲ್ಲಿ 10 ವಾಹನ ಜಖಂ
ಬೆಳಗಾವಿ
: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ಮಧ್ಯೆ ಉಂಟಾದ ಘರ್ಷಣೆ ಕಲ್ಲು ತೂರಾಟಕ್ಕೆ ಕಾರಣವಾಗಿ ಪೊಲೀಸ್‌ ಪೇದೆಗೆ ಚೂರಿ ಇರಿತ ಹಾಗೂ ವಾಹನಗಳು ಜಖಂಗೊಂಡ ಘಟನೆ ರಾಜ್ಯೋತ್ಸವ ಮೆರವಣಿಗೆ ವೇಳೆ ಬುಧವಾರ ಸಂಜೆ ನಡೆದಿದೆ.

ಚೂರಿ ಇರಿತದಲ್ಲಿ ಪೇದೆ ಸೇರಿ ಐದಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಲ್ಲು ತೂರಾಟದಲ್ಲೂ ಹಲವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಸಂಸ್ಥೆ ಬಸ್‌ ಸೇರಿ 10ಕ್ಕೂ ಹೆಚ್ಚು ವಾಹನಗಳು ಹಾಗೂ, ಅಂಜುಮನ್‌ ಕಾಲೇಜು ಆವರಣದಲ್ಲಿರುವ ಕಟ್ಟಡಗಳು, ಹೊಟೇಲ್‌, ಗೃಹ ಫೈನಾನ್ಸ್‌ ಕಚೇರಿ ಹಾಗೂ ಎಸ್‌ಬಿಐ ಎಟಿಎಂಗಳು ಹಾನಿಗೀಡಾಗಿವೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಪೊಲೀಸರು
ಬಂಧಿಸಿದ್ದಾರೆ. ಸಾಹಿಲ್‌ ಕೋಜಾ, ಅಲ್ತಾಫ್ ಮಕಾಂದಾರ್‌, ಅμÅàದಿ ಕೋತ್ವಾಲ್‌, ಅಮಿತ್‌ ಹಾಗೂ ಕರ್ನಿಂಗ್‌ ಬಂಧಿತರು.

ಚಾಕು ಇರಿತದಲ್ಲಿ ಉತ್ತರ ಸಂಚಾರಿ ಠಾಣೆ ಹೆಡ್‌ ಕಾನ್ಸ್‌ಟೆಬಲ್‌ ಮಹಮ್ಮದ್‌ ಪಟೇಲ, ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಲಕ್ಕಪ್ಪ ಶೆಟ್ಟೆಪ್ಪ ಪೂಜೇರಿ, ಕೆ.ಕೆ. ಕೊಪ್ಪ ಗ್ರಾಮದ ಪರುಶರಾಮ ಬಸ್ಸಪ್ಪ ವಾಲೇಕರ, ಅಶೋಕ ಬಸವಣ್ಣಿ ವಂಟಮೂರಿ ಹಾಗೂ ವಂಡಗಾಂವಿಯ ಪ್ರವೀಣ ಮಹಾದೇವ ಶಿಂಧೆ ಗಾಯಗೊಂಡಿದ್ದಾರೆ.

ಕಲ್ಲು ತೂರಾಟದಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಾಗ ಪೊಲೀಸರು ತಕ್ಷಣ ಮಧ್ಯೆ ಪ್ರವೇಶಿಸಿ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಘಟನೆ ಹಿನ್ನೆಲೆ: ನಗರದ ಕೋರ್ಟ್‌ ಆವರಣದ ಅಂಜುಮನ್‌ ಹಾಲ್‌ ಎದುರು ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಾಲ್ಬಿ
ಹಾಡಿಗೆ ಕುಣಿಯುತ್ತ ಯುವಕರ ಗುಂಪು ಬಂದಿದ್ದು, ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಇದೇ ವೇಳೆ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಆಗ ಪರಸ್ಪರ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ಆರಂಭವಾಯಿತು. ಕೆಲ ಕಿಡಿಗೇಡಿಗಳು ಅಂಜುಮನ್‌ ಹಾಲ್‌ ಒಳಗೆ ಓಡಿ ಹೋಗುತ್ತಿದ್ದಂತೆ ಅಲ್ಲಿಯೂ ಕಲ್ಲು ತೂರಾಟ ಮುಂದುವರಿಯಿತು.

ಸಮೀಪದಲ್ಲೇ ಇದ್ದ ತುಮಕೂರು ತಟ್ಟೆ ಇಡ್ಲಿ ಹೋಟೇಲ್‌ ಮೇಲೂ ಕಲ್ಲು ತೂರಲಾಯಿತು. ಎಸ್‌ಬಿಐ ಎಟಿಎಂನಲ್ಲೂ ನೂರಾರು ಯುವಕರು ದಾಂಧಲೆ ಮಾಡಿ ಹಾನಿ ಮಾಡಿದರು. ಆಗ ಕೆಲ ದುಷ್ಕರ್ಮಿಗಳು ಚಾಕುವಿನಿಂದ ಕೆಲ ಯುವಕರಿಗೆ ಇರಿದು ಪರಾರಿಯಾಗಿದ್ದಾರೆ. 

ಬಿಗಿ ಬಂದೋಬಸ್ತ್
ಸದ್ಯ ನಗರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಜುಮನ್‌ ಹಾಲ್‌ ಎದುರು ಸೇರಿ ನಗರದ ಬಹುತೇಕ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ.

ಕಿಡಿಗೇಡಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೆಲವರು ದಾಂಧಲೆ ನಡೆಸಿದ್ದಾರೆ ಎಂಬ ಅಂಶ ಮೇಲ್ನೋಟಕ್ಕೆ ತಿಳಿದು ಬಂದಿದೆ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು.
– ಟಿ.ಜಿ. ಕೃಷ್ಣಭಟ್‌, ನಗರ
ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.