BJP ಪರಿವರ್ತನಾ ಯಾತ್ರೆಗೆ ಚಾಲನೆ; ಸಿದ್ದು ಸರ್ಕಾರ ಕಿತ್ತೊಗೆಯಿರಿ: ಶಾ


Team Udayavani, Nov 2, 2017, 3:26 PM IST

Amit-new.jpg

ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ರಾಲಿ ಸರ್ಕಾರ, ಸಚಿವರನ್ನು ಬದಲಿಸಲು ಮಾತ್ರ ಅಲ್ಲ. ಕರ್ನಾಟಕದ ಸಮಗ್ರ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್ ಯಡಿಯೂರಪ್ಪ ಸಾರಥ್ಯದಲ್ಲಿ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.

ಗುರುವಾರ ತುಮಕೂರು ರಸ್ತೆಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಿದ್ದರಾಮಯ್ಯ ಸರ್ಕಾರ ಅತೀ ಭ್ರಷ್ಟ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಲೂಟಿ ಮಾಡಿದೆ. ಕೆರೆಗಳನ್ನು ಬಿಲ್ಡರ್ ಗಳಿಗೆ ಮಾರುವ ಮೂಲಕವೂ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ನೀಡಿದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಗೊತ್ತಿಲ್ಲ ಎಂದು ದೂರಿದರು.

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೆರವು ನೀಡುತ್ತಿದೆ. ಅನುದಾನ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ. 1 ಲಕ್ಷ 30 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ ಹೋಯ್ತು ಸಿದ್ದರಾಮಯ್ಯಜೀ ಎಂದು ಪ್ರಶ್ನಿಸಿದರು.

960 ಕೋಟಿ ರೂಪಾಯಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ಕೊಟ್ಟಿದ್ದೇವೆ. 4563 ಕೋಟಿ ರೂಪಾಯಿ ಅಮೃತ ಯೋಜನೆಗೆ ಕೊಟ್ಟಿದ್ದೇವೆ, ರೈಲ್ವೆ ಯೋಜನೆಗೆ 2197 ಕೋಟಿ ರೂಪಾಯಿ, 39000 ಕೋಟಿ ಮುದ್ರಾ ಯೋಜನೆಗೆ ಕೊಟ್ಟಿದ್ದೇವೆ.

ಸಿದ್ದರಾಮಯ್ಯನವರಿಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವ ಮಾಡುವ ಬಗ್ಗೆ ಉತ್ಸಾಹವಿಲ್ಲ, ಆದರೆ ನವೆಂಬರ್ 10ರಂದು ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ನೆರವೇರಿಸಲು ಅತ್ಯುತ್ಸಾಹ ತೋರುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ 19 ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಗಿದೆ. ದೇಶದ ರಕ್ಷಣೆ, ರಾಜ್ಯದ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯನವರಿಗೆ ಕಾಳಜಿ ಇಲ್ಲ ಎಂದರು.

ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಮೋದಿಜೀವರ ಜತೆ ಕೈ ಜೋಡಿಸಿ ಕರ್ನಾಟಕದ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಶಾ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಅಮಿತ್ ಶಾ ಅವರು ಆಗಮಿಸಿದ್ದಾಗ ಮೈಸೂರು ಪೇಟಾ ತೊಡಿಸಿ ಬರಮಾಡಿಕೊಳ್ಳಲಾಯಿತು. ಭಾಷಣದ ಆರಂಭದಲ್ಲೇ ಭಾವಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಂದು ಉಲ್ಲೇಖಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಹಸಿರು ಶಾಲು ಹೊದಿಸಿ ಶಾ ಅವರು ಸನ್ಮಾನಿಸಿ ಎತ್ತಿನಬಂಡಿಯ ಸ್ಮರಣಿಕೆಯನ್ನು ನೀಡಿದರು.

ಬಿಜೆಪಿ ಬಾವುಟ ಹಾರಿಸುವ ಮೂಲಕ ಯಾತ್ರೆಗೆ ಚಾಲನೆ:

ಬಿಜೆಪಿ ಬಾವುಟವನ್ನು ಹಾರಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ರಥಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. 224 ಕ್ಷೇತ್ರಕ್ಕೆ 74 ದಿನಗಳ ಕಾಲ ಪರಿವರ್ತನಾ ಯಾತ್ರೆ ನಡೆಯಲಿದೆ.

ಕಾರ್ಯಕ್ರಮ ವಿಳಂಬ:

ಜನರ ಕೊರತೆಯಿಂದಾಗಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ 2ಗಂಟೆಗಳ ಕಾಲ ವಿಳಂಬವಾಯಿತು.

ಶಾ ಭಾಷಣದ ನಡುವೆಯೇ ಎದ್ದು ಹೋದ ಕಾರ್ಯಕರ್ತರು:

ಅಮಿತ್ ಶಾ ಅವರ ಭಾಷಣದ ನಡುವೆಯೇ ಕಾರ್ಯಕರ್ತರು ತಂಡೋಪ ತಂಡವಾಗಿ ಎದ್ದು ಹೋದ ಘಟನೆ ನಡೆಯಿತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.