ಒಗ್ಗಟ್ಟಿನ ಕೊರತೆಯಿಂದ ಉದ್ಘಾಟನಾ ಕಾರ್ಯಕ್ರಮ ಫ್ಲಾಪ್‌


Team Udayavani, Nov 3, 2017, 7:33 AM IST

03-4.jpg

ಬೆಂಗಳೂರು: ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ ಲಕ್ಷಾಂತರ ಜನರನ್ನು ಸೇರಿಸಿ ರಾಜ್ಯ ಸರ್ಕಾರದ ವಿರುದ್ಧ ಭಾರೀ ಹೋರಾಟಕ್ಕೆ ಚಾಲನೆ ನೀಡಬೇಕೆಂಬ ರಾಜ್ಯ ಬಿಜೆಪಿಯ ಕಾರ್ಯಕ್ರಮ ಗುರುವಾರ ಉದ್ಘಾಟನೆ ಕಾರ್ಯಕ್ರಮದ ಮಟ್ಟಿಗೆ ಫ್ಲಾಪ್‌ ಶೋ ಆಗಿಹೋಯಿತು. ಇದರಿಂದಾಗಿ ನಾಯಕರಲ್ಲಿ ಒಗ್ಗಟ್ಟಿಲ್ಲದಿದ್ದರೆ ಕಾರ್ಯಕರ್ತರು ಸ್ಪಂದಿಸುವುದಿಲ್ಲ ಎಂಬ ಸತ್ಯ ಮತ್ತೂಮ್ಮೆ ಬಹಿರಂಗವಾಯಿತು.

ಅಷ್ಟೇ ಅಲ್ಲ, ಈ ಯಾತ್ರೆ ಮೂಲಕ ರಾಜ್ಯ ಬಿಜೆಪಿ ಮತ್ತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಕೆಂಗಣ್ಣಿಗೆ ಗುರಿಯಾಯಿತು. ಕಾರ್ಯಕ್ರಮಕ್ಕೆ ಮೂರು ಲಕ್ಷ ಜನ ಸೇರಿಸುವ ಭರವಸೆ ನೀಡಲಾಗಿತ್ತು. ಆದರೆ, ಅದರ ಅರ್ಧದಷ್ಟೂ ಜನ ಇಲ್ಲದ ಬಗ್ಗೆ ವೇದಿಕೆಯಲ್ಲೇ ಆಕ್ಷೇಪ ಎತ್ತಿದ ಅಮಿತ್‌ ಶಾ, ರಾಜ್ಯ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಪರಿವರ್ತನಾ ಯಾತ್ರೆಗೆ ರಾಜ್ಯದ (ಉತ್ತರ ಕರ್ನಾಟಕ ಹೊರತುಪಡಿಸಿ )17 ಜಿಲ್ಲೆಗಳ 114 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು ಒಂದು ಲಕ್ಷ ಬೈಕ್‌ಗಳಲ್ಲಿ ಎರಡು ಲಕ್ಷ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸುಮಾರು 3 ಲಕ್ಷ ಮಂದಿ ಸೇರಲಿದ್ದಾರೆಂದು ನಾಯಕರು ಘೋಷಿಸಿದ್ದರು. ಆದರೆ, ಗುರುವಾರ 25 ಸಾವಿರದಷ್ಟು ದ್ವಿಚಕ್ರ ವಾಹನಗಳಲ್ಲೂ ಕಾರ್ಯಕರ್ತರು ಬಂದಿರಲಿಲ್ಲ. ಅಲ್ಲದೆ, ನೆರೆದಿದ್ದ ಕಾರ್ಯಕರ್ತರ ಸಂಖ್ಯೆ ಒಂದು ಲಕ್ಷವನ್ನೂ ತಲುಪಲಿಲ್ಲ.

ಜನರನ್ನು ಕರೆತರಲು ಹೊರಟ ಗೋಯೆಲ್‌:
ಕಾರ್ಯಕರ್ತರಿಲ್ಲದೆ ಕುರ್ಚಿಗಳು ಖಾಲಿಯಾಗಿದ್ದರಿಂದ ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಶುರುವಾಗಿದ್ದು 12.30ಕ್ಕೆ. ಎಲ್ಲಾ ಕಾರ್ಯಕರ್ತರು ವೇದಿಕೆ ಮುಂದಿನ ಆಸನಗಳಲ್ಲಿ ಕುಳಿತುಕೊಳ್ಳಬೇಕೆಂದು ಮುಖಂಡರು ಮನವಿ ಮಾಡಿಕೊಳ್ಳುತ್ತಿದ್ದರೂ ಬಿಸಿಲಿನ ಝಳಕ್ಕೆ ಯಾರೂ ಕುರ್ಚಿಗಳತ್ತ ಮುಖ ಮಾಡಲಿಲ್ಲ. ರಾಜ್ಯ ನಾಯಕರು ಮಾತು ಆರಂಭಿಸಿದರೂ ಕುರ್ಚಿಗಳು ಖಾಲಿ ಯಾಗಿಯೇ ಇದ್ದವು. ಅಮಿತ್‌ ಶಾ ವೇದಿಕೆ ಏರಿದಾಗಲೂ ಅದೇ ಪರಿಸ್ಥಿತಿ. ಇದನ್ನು ಗಮನಿಸಿದ ಶಾ ಜತೆ ವೇದಿಕೆಗೆ ಬಂದಿದ್ದ ರಾಜ್ಯ ಚುನಾವಣಾ  ಸಹ ಉಸ್ತುವಾರಿ ಪಿಯೂಷ್‌ ಗೋಯೆಲ್‌ ಅವರು ವೇದಿಕೆ ಮೇಲಿದ್ದ ಅಶೋಕ್‌, ಅರವಿಂದ ಲಿಂಬಾವಳಿ, ಸಿ.ಟಿ.ರವಿ ಮತ್ತಿತರ ಕೆಲವು ಪ್ರಮುಖರನ್ನು ಕರೆದುಕೊಂಡು ವೇದಿಕೆ ಇಳಿದು ಜನ ನಿಂತಿದ್ದ ಮರದ ನೆರಳಿನ ಕಡೆ ನಡೆದು ಅವರನ್ನು ವೇದಿಕೆಯ ಮುಂಭಾಗ ಕಳುಹಿಸುವ ಪ್ರಯತ್ನ ಮಾಡಿದರು.

ಈ ಮಧ್ಯೆ ವೇದಿಕೆಯಲ್ಲಿ ಕುಳಿತೇ ಅಮಿತ್‌ ಶಾ ಅವರು ಯಡಿಯೂರಪ್ಪ, ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಕೇಂದ್ರ ಸಚಿವ ಅನಂತಕುಮಾರ್‌ ಅವರೊಂದಿಗೆ ಜನ ಕಡಿಮೆ ಸಂಖ್ಯೆಯಲ್ಲಿರುವ ಬಗ್ಗೆ  ಚರ್ಚಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಅಮಿತ್‌ ಶಾ ಅವರ ನೀರಸ ಭಾಷಣವೂ ಅವರಲ್ಲಿದ್ದ ಬೇಸರವನ್ನು ತೋರಿಸಿಕೊಟ್ಟಿತು. 

ಆಂತರಿಕ ಅಸಮಾಧಾನವೇ ಕಾರಣ: ತಮ್ಮ ಘೋಷಣೆ 
ಹುಸಿಯಾದ ಬಗ್ಗೆ ನಾಯಕರು, ಕಾಂಗ್ರೆಸ್‌ ಸರ್ಕಾರ ಬೈಕ್‌ ರ್ಯಾಲಿಯಲ್ಲಿ ಬರುವವರನ್ನು ದಾರಿ ಮಧ್ಯೆ ಅಡ್ಡಗಟ್ಟಿದೆ ಎನ್ನುವ ಮೂಲಕ ಆರಂಭದಲ್ಲೇ ನೀರೀಕ್ಷಣಾ ಜಾಮೀನು ಪಡೆಯಲು ಯತ್ನಿಸಿದರಾದರೂ ನಿರೀಕ್ಷೆ ಹುಸಿಯಾಗಲು ಪಕ್ಷದ ಆಂತರಿಕ ಅಸಮಾಧಾನವೇ ಕಾರಣ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಬೆಂಗಳೂರಿನ ಉದ್ಘಾಟನಾ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಮಾಜಿ ಡಿಸಿಎಂ ಆರ್‌.ಅಶೋಕ್‌ ವಹಿಸಿಕೊಂಡಿದ್ದರೂ ಕಾರ್ಯಕ್ರಮದ ವೇದಿಕೆಯನ್ನು ಯಾತ್ರೆಯ ಸಂಚಾಲಕಿ ಶೋಭಾ ಕರಂದ್ಲಾಜೆ
ಆವರಿಸಿಕೊಂಡರು. ಅಶೋಕ್‌ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಅವರಿಗೂ ವೇದಿಕೆಯಲ್ಲಿ ಮಾತನಾಡಲು ಅವಕಾಶ ಸಿಗಲಿಲ್ಲ. 

ಸಿದ್ಧತಾ ಕಾರ್ಯಕ್ರಮದಿಂದ ದೂರ: ಶೋಭಾ ಕರಂದ್ಲಾಜೆ ಅವರನ್ನು ಯಾತ್ರೆಯ ಸಂಚಾಲಕಿ ಎಂದು ಘೋಷಿಸಿದಾಗಲೇ ಕೆಲವರು ಅತೃಪ್ತಿ ವ್ಯಕ್ತಪಡಿಸಿದ್ದರು. ಈ ಅತೃಪ್ತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅಶೋಕ್‌ ಅವರಿಗೆ ಬೆಂಗಳೂರು ಸಮಾರಂಭದ ಜವಾಬ್ದಾರಿ ವಹಿಸಲಾಗಿತ್ತಾದರೂ ಅದು ಶಮನವಾಗಿರಲಿಲ್ಲ. ಆದರೂ ಯಡಿಯೂರಪ್ಪ ಈ ಬಗ್ಗೆ ಗಮನಹರಿಸದ ಕಾರಣ ಸಂಘಟನಾ ಚತುರ ಬಿ.ಎಲ್‌.ಸಂತೋಷ್‌ ಸೇರಿ ಅನೇಕ ಮುಖಂಡರು ಸಿದ್ಧತಾ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.