ವೀರಶೈವ ಮಹಾಸಭಾ ಪದಾಧಿಕಾರಿಗಳ ಸಭೆ ಇಂದು


Team Udayavani, Nov 8, 2017, 8:03 AM IST

08-10.jpg

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಗಾರರು ವೀರಶೈವ ಮಹಾಸಭಾ ಹಾಗೂ ಅದಕ್ಕೆ ಸಂಬಂಧಿಸಿದ ನಾಯಕರ ಮೇಲೆ ವೈಯಕ್ತಿಕವಾಗಿ ಆರೋಪ ನಡೆಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವೀರಶೈವ ಮಹಾಸಭಾ, ಆರೋಪ ಮಾಡುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಚರ್ಚಿಸಲು ಬುಧವಾರ ಮಹಾಸಭೆಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಸಂಸದ ಪ್ರಭಾಕರ ಕೋರೆ ವಿರುದ್ಧ ಬಹಿರಂಗವಾಗಿ ಆರೋಪ ಮಾಡಿರುವ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ನಾಯಕತ್ವ ವಹಿಸಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಹಾಗೂ ಕೂಡಲ ಸಂಗಮ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ತಿರುಗಿ ಬೀಳುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೊರಟ್ಟಿಗೆ ಜೀವ ಬೆದರಿಕೆ ಪತ್ರ
ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯ, ಲಿಂಗಾಯತ ಸ್ವತಂತ್ರ ಧರ್ಮ ವೇದಿಕೆ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರಿಗೆ
ಜೀವ ಬೆದರಿಕೆ ಪತ್ರ ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬರು “ಹತ್ಯೆ ಯತ್ನ ನಡೆದಿದೆ, ಮುನ್ನೆಚ್ಚರಿಕೆ ವಹಿಸುವಂತೆ’ ಪತ್ರ ಕಳುಹಿಸಿ ಎಚ್ಚರಿಸಿದ್ದಾರೆ. ಪತ್ರದಲ್ಲಿ “ಮುಂಬೈನಿಂದ ಐವರು ಶಾರ್ಪ್‌ ಶೂಟರ್‌ಗಳು ನಿಮ್ಮನ್ನು ಹತ್ಯೆ ಮಾಡಲೆಂದೇ ಬಂದಿದ್ದಾರೆ. ಜಾಗೃತರಾಗಿರಿ’ ಎಂದು ಹೇಳಲಾಗಿದೆ. ಪತ್ರ ಕನ್ನಡದಲ್ಲಿ ಬರೆಯಲಾಗಿದೆ. “ನಿಮ್ಮ ಹಿತ ದೃಷ್ಟಿಯಿಂದ ಈ ಮಾಹಿತಿ ನೀಡುತ್ತಿದ್ದೇನೆ, ನಿಮ್ಮ ವಿಧೇಯ’ ಎಂದು ಪತ್ರದಲ್ಲಿ ನಮೂದಿಸಲಾಗಿದೆ. ಪತ್ರ ಹುಬ್ಬಳ್ಳಿಯ ಉಣಕಲ್ಲನಿಂದ ಪೋಸ್ಟ್‌ ಮಾಡಲಾಗಿದೆ ಎನ್ನಲಾಗಿದೆ. ಸೋಮವಾರ 11 ಗಂಟೆ ಸುಮಾರಿಗೆ ಹೊರಟ್ಟಿ ನಿವಾಸಕ್ಕೆ ಪತ್ರ ಬಂದಿದ್ದು, ಅವರ ಕಚೇರಿ ಸಿಬ್ಬಂದಿ ಅದನ್ನು ಹೊರಟ್ಟಿ ಗಮನಕ್ಕೆ ತಂದಿದ್ದಾರೆ. ಹೊರಟ್ಟಿ ಅವರು ಇತ್ತೀಚೆಗೆ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಯಾವ ಕಾರಣಕ್ಕೆ ಅವರಿಗೆ ಜೀವ ಬೆದರಿಕೆ ಬಂದಿದೆ ಎಂಬುದು ತನಿಖೆಯಿಂದ ತಿಳಿಯ ಬೇಕಿದೆ. “ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಅವರು, ಹು.ಧಾ. ಮಹಾನಗರ ಡಿಸಿಪಿ ಬಾಬಾಸಾಬ್‌ ನೇಮಗೌಡ ಅವರಿಗೆ ಪತ್ರ ಒಪ್ಪಿಸಲಾಗಿದೆ ಎಂದರು.

“ಹೊರಟ್ಟಿ ಸಾಕ್ಷ್ಯ ನೀಡಲಿ’
ಹುಬ್ಬಳ್ಳಿ: “ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರು ಆರೋಪವನ್ನು ಆತ್ಮಸಾಕ್ಷಿಯಾಗಿ ಮಾಡಿದ್ದಾರೆಂಬು  ದನ್ನು ತಮ್ಮ ಸುಪುತ್ರನ ತಲೆ ಮೇಲೆ ಕೈಯಿಟ್ಟು ಹೇಳಲಿ. ಅಲ್ಲದೆ, ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನೀಡಲಿ’ ಎಂದು ಬಾಳೆಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಸವಾಲು ಹಾಕಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತ ನಾಡಿ, “ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಹೊರಟ್ಟಿಯವರು ನನ್ನ ಮೇಲೆ ಆರೋಪಗಳನ್ನು ಮಾಡಿದ್ದಾರೆ. ಆರೋಪ ಮಾಡಿದ್ದನ್ನು ತಮ್ಮ ಪುತ್ರನ ತಲೆ ಮೇಲೆ ಕೈಯಿಟ್ಟು, ಇಲ್ಲವೇ ಬಸವಣ್ಣನ ಫೋಟೊ ಮುಟ್ಟಿ ಹೇಳಲಿ. ಹಿಂದೆ ಹೊರಟ್ಟಿ ಯವರೇ ತಮ್ಮ ತೋಟದ ಮನೆಯಲ್ಲಿ ನನ್ನನ್ನು ಹಾಗೂ ಮೂರುಸಾವಿರ ಮಠದ ಸ್ವಾಮೀಜಿಗಳನ್ನು ಕರೆಸಿ, ಮೂರುಸಾವಿರ ಮಠದ ಪೀಠಾಧಿಪತಿಯಾಗಲು ನೀವೇ ಸೂಕ್ತ ಎಂದು ಹೇಳಿದ್ದರಿಂದ ನಾನು ಪೀಠಾಧಿಪತಿಯಾಗಲು ಒಪ್ಪಿಕೊಂಡಿದ್ದೆ. ಅವರು ಮಾಡಿದ ಆರೋಪದಿಂದ ನನಗೆ ಆಘಾತವಾಗಿದೆ’ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, “ನನ್ನ ಹೇಳಿಕೆಯಿಂದ ದಿಂಗಾಲೇಶ್ವರ
ಸ್ವಾಮೀಜಿಗೆ ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ’ ಎಂದು ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.