ಟಿಪ್ಪು ಜಯಂತಿಗೆ ಆಕ್ರೋಶ


Team Udayavani, Nov 9, 2017, 10:51 AM IST

09-15.jpg

ಬೆಂಗಳೂರು: ರಾಜ್ಯದ ಹಲವೆಡೆ ಟಿಪ್ಪು ಜಯಂತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಹಲವೆಡೆ ಪ್ರತಿಭಟನೆಗಳು ಮುಂದುವರೆದಿದೆ. ಕೊಡಗಿನಲ್ಲಿ ಟಿಪ್ಪುಜಯಂತಿ ಆಚರಣಾ ವಿರೋಧಿ ಸಮಿತಿ ನ.10ರಂದು ಕೊಡಗು ಬಂದ್‌ಗೆ ಕರೆ ನೀಡಿದೆ.

ಸರಕಾರದ ಆದೇಶದಂತೆ ಜಿಲ್ಲಾಡಳಿತದ ವತಿಯಿಂದ ಉಡುಪಿ ಜಿಲ್ಲೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ನ.10ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ವಿರೋಧಿಸಿ ಬಿಜೆಪಿ ಮುತ್ತಿಗೆ ಹಾಕುವ ನಿರ್ಧಾರ ಮಾಡಿದೆ. ಬೆಳಗ್ಗೆ 10 ಗಂಟೆಗೆ ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರೆಲ್ಲ ಸೇರಿ ಮಣಿಪಾಲಕ್ಕೆ ತೆರಳಲಿದ್ದೇವೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ನಾಳೆ ಕೊಡಗು ಬಂದ್‌ಗೆ ಕರೆ: ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ನ.10ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಕೊಡಗು ಬಂದ್‌ಗೆ ಕರೆ ನೀಡಿದೆ. ಸಮಿತಿ ಅಧ್ಯಕ್ಷ ಅಭಿಮನ್ಯು ಕುಮಾರ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರ ಎಷ್ಟೇ ಬಿಗಿ ಬಂದೋ ಬಸ್ತ್ ಕೈಗೊಂಡರೂ ಟಿಪ್ಪು ಜಯಂತಿ
ಆಚರಣೆಗೆ ತೀವ್ರ ಪ್ರತಿರೋಧ ಒಡ್ಡುವುದಾಗಿ ಎಚ್ಚರಿಕೆ ನೀಡಿದರು. ಭಯದ ವಾತಾವರಣದಲ್ಲಿ ಬಲವಂತವಾಗಿ ಟಿಪ್ಪುಜಯಂತಿ ಆಚರಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದ್ದು, ಇದು ಮುಖ್ಯಮಂತ್ರಿಗಳ ವಿನಾಶದ ಆಚರಣೆ ಎಂದು ಟೀಕಿಸಿದರು. ಎಲ್ಲ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟು ಗಳನ್ನು ಮುಚ್ಚಿ ಬಂದ್‌ಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ ಅವರು, ಮಕ್ಕಳ
ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳನ್ನೂ ಬಂದ್‌ ಮಾಡುವುದು ಸೂಕ್ತ ಎಂದರು. ಸರಕಾರದ ಉದ್ಧಟತನದಿಂದಾಗಿ ಮುಂದೆ ಆಗಬಹುದಾದ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಎಚ್ಚರಿಸಿದರು.

ಆಮಂತ್ರಣ ಮರುಮುದ್ರಣ
ಬೆಳಗಾವಿ: ನಗರದಲ್ಲಿ ನ.10ರಂದು ಸರಕಾರದ ವತಿಯಿಂದ ನಡೆಯುವ ಟಿಪ್ಪು ಸುಲ್ತಾನ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸರಕಾರದ ನಿರ್ದೇಶನದ ಮೇರೆಗೆ ಇಬ್ಬರು ಸಂಸದರ ಹೆಸರನ್ನು ಆಮಂತ್ರಣ ಪತ್ರಿಕೆಯಿಂದ ಕೈಬಿಡಲಾಗಿದೆ. ಟಿಪ್ಪು ಸುಲ್ತಾನ
ಜಯಂತಿ ಕಾರ್ಯಕ್ರಮದಲ್ಲಿ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ನಮೂದಿಸ ಬಾರದು ಎಂದು ಕೇಂದ್ರ ಸಚಿವ ಆನಂತಕುಮಾರ ಹೆಗಡೆ ಹಾಗೂ ಬೆಳಗಾವಿ ಸಂಸದ ಸುರೇಶ ಅಂಗಡಿ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು. ಆದರೆ ಜಿಲ್ಲಾಡಳಿತ ಶಿಷ್ಟಾಚಾರದ ಪ್ರಕಾರ ಇಬ್ಬರ ಹೆಸರನ್ನೂ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿತ್ತು. ಆದರೆ, ಈಗ ಸರಕಾರದ ನಿರ್ದೇಶನ
ದಂತೆ ಜಿಲ್ಲಾಡಳಿತ ಆಮಂತ್ರಣ ಪತ್ರಿಕೆಯನ್ನು ಮರು ಮುದ್ರಣ ಮಾಡಿ ಇಬ್ಬರು ಸಂಸದರ ಹೆಸರನ್ನು ಅವರ ಮನವಿಯ ಮೇರೆಗೆ ಕೈಬಿಟ್ಟಿದೆ.

ಚರ್ಚೆಗೆ ಗ್ರಾಸವಾದ ಟಿಪ್ಪು  ಕುರಿತ”ಮಂಗಳೂರು ದರ್ಶನ’ದ ಲೇಖನ 
ಮಂಗಳೂರು:
ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರಕಾರ ಮುಂದಾಗುತ್ತಿದ್ದಂತೆ, ಇತ್ತ ಟಿಪ್ಪು ಸುಲ್ತಾನ್‌ನಿಂದ ಕ್ರೈಸ್ತ ಸಮಾಜ ಅನ್ಯಾಯ ಎದುರಿಸಿದೆ ಎಂದು ಉಲ್ಲೇಖೀಸಿರುವ ಸರಕಾರದ ಪ್ರಾಯೋಜಿತ “ಮಂಗಳೂರು ದರ್ಶನ’ ಎಂಬ ಪ್ರತಿಷ್ಠಿತ ಪುಸ್ತಕದ ಲೇಖನವೊಂದು ಈಗ ಚರ್ಚೆಗೆ ವೇದಿಕೆ ಒದಗಿಸಿದೆ. ಮಂಗಳೂರು ನಗರದ ಕಲೆ, ಸಂಸ್ಕೃತಿ, ಸಾಹಿತ್ಯ, ಚರಿತ್ರೆಗಳ ಮಾಹಿತಿಯುಳ್ಳ ನಗರಕೋಶ ಕುರಿತಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿದ್ಧಪಡಿಸಲಾಗಿರುವ “ಮಂಗಳೂರು ದರ್ಶನ’ದ 3 ಸಂಪುಟಗಳು ಕಳೆದ ವರ್ಷ ಮಂಗಳೂರಿನಲ್ಲಿ ಬಿಡುಗಡೆ ಗೊಂಡಿದ್ದವು. ಸಾಹಿತ್ಯ ಕ್ಷೇತ್ರದ ದಿಗ್ಗಜರು ಸಿದ್ಧಪಡಿಸಿದ ಈ ಸಂಪುಟ ಮಂಗಳೂರಿನ ಸಮಗ್ರ ಇತಿಹಾಸವನ್ನು ದಾಖಲಿಸಿತ್ತು. ಈ ಪುಸ್ತಕದಲ್ಲಿನ ಟಿಪ್ಪು ಹಾಗೂ ಮಂಗಳೂರು ಕ್ರಿಶ್ಚಿಯನ್ನರು ಎಂಬ ಲೇಖನದಲ್ಲಿ ಟಿಪ್ಪುವಿನ ಕುರಿತಾದ ಮಂಗಳೂರು ಸಂಬಂಧಿತ ವಿವರಗಳನ್ನು ಉಲ್ಲೇಖೀಸಿ ರುವ ಅಂಶ  ವೊಂದು ಈಗ ವಿವಾದಕ್ಕೆ ಕಾರಣವಾಗಿದೆ.

ಇತಿಹಾಸದಲ್ಲಿರುವ ದಾಖಲೆಗಳನ್ನು ಪರಾಮರ್ಶಿಸಿ ಈ ಲೇಖನ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ. ಲೇಖನದಲ್ಲಿ ತಿಳಿಸಿದಂತೆ, ಮಂಗಳೂರಿನ ಕ್ರೈಸ್ತರಲ್ಲಿ, ಕೊಡಗಿನ ಕೊಡವರಲ್ಲಿ ಅಥವಾ ಮಲಬಾರಿನ ನಾಯರುಗಳಲ್ಲಿ ಟಿಪ್ಪುವಿನ ಬಗ್ಗೆ ಇರುವ ನೆನಪುಗಳಲ್ಲಿ ಆತನ ಕ್ರೌರ್ಯ ಅಸಹನೆಗಳಿಗೆ ಇದ್ದ ಸ್ಥಾನ ಆತನ ಉದಾರತೆಗೆ ಇಲ್ಲ. ಬ್ರಿಟಿಷ್‌ ಇತಿಹಾಸಕಾರರಲ್ಲಿ ಅನೇಕರು ಟಿಪ್ಪುವಿನ ಬಗ್ಗೆ ಒಳ್ಳೆಯ ಮಾತನ್ನು ಹೇಳಲಿಲ್ಲ ಎಂಬ ವಾಕ್ಯಗಳು ಚರ್ಚೆಗೆ ಈಗ ವೇದಿಕೆ ಒದಗಿಸಿವೆ. 

ಗೋಸುಂಬೆ ರಾಜಕೀಯ: ತಿಮ್ಮಾಪುರ
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒಬ್ಬ ಊಸರವಳ್ಳಿ ರಾಜಕೀಯ ವ್ಯಕ್ತಿ. ತಾವು ಕೆಜೆಪಿ ಕಟ್ಟಿದಾಗ ಟಿಪ್ಪು ವೇಷ ಹಾಕಿ, ಕೈಯಲ್ಲಿ ಖಡ್ಗ ಹಿಡಿದು ಫೋಸ್‌ ಕೊಟ್ಟವರು. ಈಗ ಬಿಜೆಪಿ ಸೇರಿ ಟಿಪ್ಪು ವಿರೋಧಿಸುತ್ತಿದ್ದಾರೆ. ಇಂತಹ ಊಸರವಳ್ಳಿ ರಾಜಕಾರಣಿಗಳನ್ನು ಜನ ನಂಬಲ್ಲ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಟೀಕಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗೋಸುಂಬೆ ರಾಜಕೀಯ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಣ್ಣ ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.