ಅನಿವಾಸಿ ಕನಡಿಗರಿಗೆ ಎನ್‌ಆರ್‌ಕೆ ಕಾರ್ಡ್‌


Team Udayavani, Nov 10, 2017, 9:55 AM IST

10-12.jpg

ಬೆಂಗಳೂರು: ವಿಶ್ವದಲ್ಲಿರುವ ಕನ್ನಡಿಗರಿಗೆ ತಾಯ್ನಾಡಿನ ಬಗ್ಗೆ ಹೆಮ್ಮೆ ಮೂಡಿಸಲು ಅನಿವಾಸಿ ಕನ್ನಡಿಗರಿಗೆ ವಿಶೇಷ ಗುರುತಿನ ಚೀಟಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 192 ರಾಷ್ಟ್ರಗಳಲ್ಲಿನ ಅನಿವಾಸಿ ಕನ್ನಡಿಗರನ್ನು ಗುರುತಿಸಿ ಡಿಸೆಂಬರ್‌ನಲ್ಲಿ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಘಟಕದ ಮೂಲಕ ಎನ್‌ಆರ್‌ಕೆ (ನಾನ್‌ ರೆಸಿಡೆಂಟ್‌ ಕನ್ನಡಿಗ) ಕಾರ್ಡ್‌ಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.

ಸುಮಾರು 13 ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ವಿಶ್ವದೆಲ್ಲೆಡೆ ವಾಸವಾಗಿದ್ದು, ಎಲ್ಲರೂ ಕರ್ನಾಟಕ ಸರ್ಕಾರದೊಂದಿಗೆ ಸಂಪರ್ಕ ಹೊಂದಿಲ್ಲ. ಅಲ್ಲದೇ ಹೊರ ದೇಶಗಳಲ್ಲಿರುವ ಎಲ್ಲ ಕನ್ನಡಿಗರ ಬಗ್ಗೆ ರಾಜ್ಯ ಸರ್ಕಾರದ ಬಳಿಯೂ ಸೂಕ್ತ ದಾಖಲೆಗಳಿಲ್ಲ. ಅನಿವಾಸಿ ಕನ್ನಡಿಗರಿಗೆ ಅಪಘಾತ, ವಂಚನೆ, ಸಾವು ಸಂಭವಿಸಿದಾಗ ಮಾತ್ರ ಅನಿವಾಸಿ ಕನ್ನಡಿಗರು ರಾಜ್ಯ ಸರ್ಕಾರವನ್ನು ಸಂಪರ್ಕಿಸಿ ಸಹಾಯ ಕೇಳುವ ಪರಿಪಾಠವಿದೆ. ಅಲ್ಲದೇ ಕನ್ನಡಿಗರು ತಮ್ಮ ತಾಯಿ ನಾಡು ಬಿಟ್ಟು ಹೊರಗಡೆ ಹೋದಾಗ ನಾಡಿನ ಸಂಪರ್ಕ ಕಡಿದುಕೊಂಡು ಅನಾಥ ಭಾವ ಮೂಡುವ ಸಂದರ್ಭ ಹೆಚ್ಚಿರುತ್ತದೆ. ಅಂತಹ ಭಾವನೆಯನ್ನು ಹೋಗಲಾಡಿಸಲು ಅನಿವಾಸಿ ಕನ್ನಡಿಗರ ಘಟಕ ವಿದೇಶದಲ್ಲಿರುವ ಕನ್ನಡಿಗರಿಗೆ ಎನ್‌ಆರ್‌ಕೆ ಕಾರ್ಡ್‌ ನೀಡುವ ಮೂಲಕ ಹೆಮ್ಮೆ ಮೂಡುವುದರ ಜತೆಗೆ ರಾಜ್ಯ ಸರ್ಕಾರ ತಮ್ಮನ್ನು ಗುರುತಿಸಿದೆ ಎಂಬ ಅಭಿಮಾನ ಮೂಡಿಸಲು ಮುಂದಾಗಿದೆ.

ಎನ್‌ಆರ್‌ಕೆ ಕಾರ್ಡ್‌ ವಿಶೇಷವೇನು?:
ಉದ್ಯೋಗ ಅರಸಿ ಹೊರ ದೇಶಗಳಿಗೆ ಹೋಗಿರುವ ಕನ್ನಡಿಗರು ತಾವು ದುಡಿದ ದುಡ್ಡನ್ನು ಊರಿಗೆ ಕೊಡುವಾಗ ಫ‌ಂಡ್‌ ಟ್ರಾನ್ಸ್‌ಫ‌ರ್‌ ಮಾಡಲು ಅವರು ವಿದೇಶಿ ಕರೆನ್ಸಿಯನ್ನು ಭಾರತೀಯ ರೂಪಾಯಿಗೆ ವಿನಿಮಯ ಮಾಡಿಕೊಳ್ಳಬೇಕು. ಅದಕ್ಕೆ ಬ್ಯಾಂಕ್‌ಗಳು ಹಣ ವಿನಿಮಯಕ್ಕೆ ಚಾರ್ಜ್‌ ಮಾಡುತ್ತವೆ. ಅಂತಹ ಹೆಚ್ಚಿನ ಸರ್ವಿಸ್‌ ಚಾರ್ಜ್‌ಗಳನ್ನು ಕಡಿಮೆ ಮಾಡಲು ಎನ್‌ಆರ್‌ಐ ಕರ್ನಾಟಕ
ಘಟಕ ಖಾಸಗಿ ಬ್ಯಾಂಕ್‌ ಜತೆ ಒಪ್ಪಂದ ಮಾಡಿಕೊಂಡು ಎನ್‌ಆರ್‌ಕೆ ಕಾರ್ಡ್‌ ಹೊಂದುವ ಕನ್ನಡಿಗರಿಗೆ ರಿಯಾಯ್ತಿ ನೀಡಲು ಅವಕಾಶ ಕಲ್ಪಿಸಿ ಕೊಡಲು ತೀರ್ಮಾನಿಸಿದೆ. ಅಲ್ಲದೇ ಅನಿವಾಸಿ ಕನ್ನಡಿಗರು ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಂಡರೆ, ಟ್ರಾವೆಲ್‌, ಹೋಟೆಲ್‌ ಹಾಗೂ ಆಸ್ಪತ್ರೆಗಳಲ್ಲಿಯೂ ಎನ್‌ಆರ್‌ಕೆ ಕಾರ್ಡ್‌ ಹೊಂದಿದವರಿಗೆ ಡಿಸ್ಕೌಂಟ್‌ ದರದಲ್ಲಿ ಸೌಲಭ್ಯ ದೊರೆಯು ವಂತೆ ನೋಡಿಕೊಳ್ಳಲು ಈ ಕಾರ್ಡ್‌ನಲ್ಲಿ ಅವಕಾಶ ದೊರೆಯುವಂತೆ ಮಾಡಲಾಗಿದೆ.

ವಿಶೇಷವಾಗಿ ಅನೇಕ ಅನಿವಾಸಿ ಕನ್ನಡಿಗರು ರಾಜ್ಯದಲ್ಲಿ ಉದ್ದಿಮೆ ಸ್ಥಾಪನೆ ಮಾಡುವುದು. ತಾವು ಹುಟ್ಟಿ ಬೆಳೆದ ಊರು, ಜಿಲ್ಲೆಗಳಲ್ಲಿ ಸಾಮಾಜಿಕ ಸೇವೆ ಮಾಡಲು ಮುಂದೆ ಬರುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಹಣ ವರ್ಗಾವಣೆ ಮಾಡುವಾಗ ಸಾಕಷ್ಟು ತೆರಿಗೆ ವಿಧಿಸಲಾಗುತ್ತದೆ. ಎನ್‌ಆರ್‌ಕೆ ಕಾರ್ಡ್‌ ಹೊಂದಿದ ಅನಿವಾಸಿ ಕನ್ನಡಿಗರು ರಾಜ್ಯದಲ್ಲಿ ಸಮಾಜ ಸೇವೆ ಮಾಡಲು ಮುಂದಾದರೆ, ಅವರಿಗೆ ತೆರಿಗೆ ರಿಯಾಯ್ತಿಯನ್ನೂ ನೀಡಲು ಸರ್ಕಾರ ನಿರ್ಧರಿಸಿದೆ.

ಕಾರ್ಡ್‌ ಪಡೆಯಲು ಅರ್ಹತೆ: ಭಾರತೀಯ ಪಾರ್ಸ್‌ ಪೋರ್ಟ್‌ ಹೊಂದಿರುವ ಹಾಗೂ ಕನಿಷ್ಠ 6 ತಿಂಗಳಿಂದ ವಿದೇಶಗಳಲ್ಲಿ ವಾಸವಾಗಿರುವ ಕನ್ನಡಿಗರು ಎನ್‌ಆರ್‌ಕೆ ಕಾರ್ಡ್‌ ಪಡೆಯಲು ಅರ್ಹರಾಗಿರುತ್ತಾರೆ. ಎನ್‌ಆರ್‌ಕೆ ಕಾರ್ಡ್‌ ಪಡೆಯಲು ಅನಿವಾಸಿ ಕನ್ನಡಿಗರು ಯಾವುದೇ ವೆಚ್ಚ ಭರಿಸಿದೇ, ಎನ್‌ ಆರ್‌ಐ ಫೋರಂ ಕರ್ನಾಟಕ ಡಾಟ್‌ ಆರ್ಗ್‌ನಲ್ಲಿ ತಮ್ಮ ಸಂಪೂರ್ಣ ವಿವರ ನೀಡಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ಮಾಹಿತಿ ಆಧಾರದಲ್ಲಿ ಎನ್‌ಆರ್‌ಐ ಕರ್ನಾಟಕ ಘಟಕದಿಂದ ಎನ್‌ಆರ್‌ಕೆ ಕಾರ್ಡ್‌ ಉಚಿತವಾಗಿ ನೀಡಲಾಗುತ್ತದೆ.

ಓಸಿಐ, ಪಿಐಒಗಳಿಗೆ ಅವಕಾಶವಿಲ್ಲ: ಕರ್ನಾಟಕ ಮೂಲದವರಾಗಿದ್ದರೂ ವಿದೇಶಗಳಲ್ಲಿಯೇ ನೆಲೆಸಿ ಆ ದೇಶದ ಪಾರ್ಸ್‌ ಪೊರ್ಟ್‌ ಹೊಂದಿರುವ ಓಸಿಐ (ಓವರ್‌ ಸೀ ಸಿಟಿಜನ್‌) ಹಾಗೂ ರಾಜ್ಯದ ಮೂಲದವರಾಗಿದ್ದು ವಿದೇಶಗಳಲ್ಲಿಯೇ ತಲೆಮಾರುಗಳಿಂದ ನೆಲೆಸಿ ಪಿಐಒ (ಪರಸನ್ಸ್‌ ಆಫ್ ಇಂಡಿಯನ್‌ ಓರಿಜನ್‌) ಗಳಾಗಿ ಅಲ್ಲಿನ ಪ್ರಜೆಗಳಾಗಿದ್ದರೆ ಅಂತವರಿಗೆ ಎನ್‌ಆರ್‌ಕೆ ಕಾರ್ಡ್‌ ಪಡೆಯಲು ಅವಕಾಶವಿಲ್ಲ. 

ಎನ್‌ಆರ್‌ಕೆಗಳಿಗೆ ರಾಜ್ಯ ಸರ್ಕಾರ ಅಧಿಕೃತ ಗುರುತಿನ ಚೀಟಿ ನೀಡುವುದರಿಂದ ಸರ್ಕಾರ ತಮ್ಮನ್ನು ಗುರುತಿಸಿದೆ ಎಂಬ ಅಭಿಮಾನ ಅವರಲ್ಲಿ ಮೂಡುತ್ತದೆ. ಅಲ್ಲದೇ ಅವರು ರಾಜ್ಯದೊಂದಿಗೆ ಸಂಪರ್ಕ ಇಟ್ಟುಕೊಳ್ಳಲು ಅನುಕೂಲವಾಗುತ್ತದೆ. ಇದರಿಂದ ವಿದೇಶಗಳಲ್ಲಿರುವ ಕನ್ನಡಿಗರ ಬಗ್ಗೆ ನಮಗೂ ಸ್ಪಷ್ಟ ಮಾಹಿತಿ ದೊರೆತಂತಾಗುತ್ತದೆ. 
 ●ಡಾ. ಆರತಿ ಕೃಷ್ಣ, ಅನಿವಾಸಿ ಭಾರತೀಯಕ್ಷೆ ಫೋರಂನ ಕರ್ನಾಟಕ ಉಪಾಧ್ಯಕ್ಷೆ

ರಾಜ್ಯ ಸರ್ಕಾರ ನಮಗೆ ಅಧಿಕೃತ ಗುರುತಿನ ಚೀಟಿ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಇದರಿಂದ ನಮಗೂ ನಮ್ಮ ನಾಡಿನ ಬಗ್ಗೆ ಹೆಮ್ಮೆ ಬೆಳೆಯುವುದರ ಜತೆಗೆ ರಾಜ್ಯದೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲು ಅನುಕೂಲವಾಗುತ್ತದೆ.
 ●ಈಶ್ವರ್‌ ಕೇದಾರಿ, ಅಮೆರಿಕದಲ್ಲಿರುವ ಅನಿವಾಸಿ ಕನ್ನಡಿಗ

 ●ಶಂಕರ ಪಾಗೋಜಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.