25 ಸಾವಿರ ಮಂದಿಗೆ ಊಟ, ಉಪಾಹಾರ
Team Udayavani, Nov 14, 2017, 7:50 AM IST
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ವೇಳೆ ಪ್ರತಿನಿತ್ಯ 25 ಸಾವಿರ ಮಂದಿಗೆ ಊಟ, ಉಪಾಹಾರ. ಅದಕ್ಕ ಗಿ ಮಾಡುತ್ತಿರುವ ವೆಚ್ಚ 91.5 ಲಕ್ಷ ರೂ.
ಹೌದು, ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರತಿ ದಿನ ಬೆಳಗ್ಗೆ 10 ಸಾವಿರ ಮಂದಿಗೆ ಉಪಾಹಾರ, ಮಧ್ಯಾಹ್ನ 10 ಸಾವಿರ ಮಂದಿಗೆ ಊಟ ಮತ್ತು ರಾತ್ರಿ 5 ಸಾವಿರ ಮಂದಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ಊಟಕ್ಕೆ 410 ರೂ. ಮತ್ತು ಬೆಳಗ್ಗಿನ ಉಪಾಹಾರಕ್ಕೆ 300ರೂ. ವೆಚ್ಚ ಮಾಡಲಾಗುತ್ತಿದೆ.
ಆದರೆ, ಬೆಳಗ್ಗೆ ಮತ್ತು ಮಧ್ಯಾಹ್ನಕ್ಕೆ ತಿಂಡಿ, ಊಟಕ್ಕೆ ಬರುವ ಹತ್ತು ಸಾವಿರ ಮಂದಿ ಯಾರು ಎಂಬ ಪ್ರಶ್ನೆಯೂ ಎದುರಾಗಿದ್ದು, ಇದಕ್ಕೆ ಸಚಿವಾಲಯದ ಅಧಿಕಾರಿಗಳು ನೀಡುವ ಉತ್ತರ ಸಚಿವರು, ಶಾಸಕರು, ಅವರ ಆಪ್ತ ಸಹಾಯಕರು, ಜತೆಗೆ ಬರುವವರು, ಅಧಿಕಾರಿಗಳು, ಸಿಬ್ಬಂದಿ, ಪೊಲೀಸರು, ಪತ್ರಕರ್ತರು ಎಂದು. ಆದರೆ, ಅವರ ಸಂಖ್ಯೆ 10 ಸಾವಿರವಾಗುತ್ತದೆಯೇ ಎಂಬುದಕ್ಕೆ ಹೌದು ಎಂಬ ಉತ್ತರ ಬರುತ್ತದೆಯೇ ಹೊರತು ಆ ಬಗ್ಗೆ ನಿಖರವಾದ ಅಂಕಿ ಸಂಖ್ಯೆಗಳು ಲಭ್ಯವಾಗುತ್ತಿಲ್ಲ.
ಇತ್ತೀಚೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ವಜ್ರಮಹೋತ್ಸವ ಆಚರಣೆ ಸಂದರ್ಭದಲ್ಲೂ ಹತ್ತು ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅದೇ ಲೆಕ್ಕವನ್ನು ಇಲ್ಲೂ ತೋರಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ಸಿದಟಛಿತೆ, ಮಧ್ಯೆ ಬರುವ ಎರಡು ದಿನ ರಜೆ, ಅಧಿವೇಶನ ಮುಗಿದ ಬಳಿಕ ಅಲ್ಲಿಂದ ಖಾಲಿ ಮಾಡಲು ಎರಡು ದಿನ ಸೇರಿ ಒಟ್ಟು 16 ದಿನ ಅಧಿಕಾರಿಗಳು, ನೌಕರರು ಮತ್ತು ಪೊಲೀಸರಿಗೆ ಊಟ ಒದಗಿಸಬೇಕಾಗುತ್ತದೆ. ಹೀಗಾಗಿ ಭೋಜನಕ್ಕಾಗಿಯೇ 11 ಕೋಟಿ ರೂ.ಗೂ ಹೆಚ್ಚು ವೆಚ್ಚ
ಅಂದಾಜು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್