ಬಾಹುಬಲಿ ದರ್ಶನಕ್ಕೆ ದೈಹಿಕ ಅಶಕ್ತರಿಗಾಗಿ ಡೋಲಿ ಸೇವೆ 


Team Udayavani, Feb 16, 2018, 6:20 AM IST

Bahubali-Mahamasthakabhishe.jpg

ಹಾಸನ: ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ ನೆಲೆ ನಿಂತಿರುವ ಭಗವಾನ್‌ ಶ್ರೀ ಬಾಹುಬಲಿ ಮೂರ್ತಿಯ ದರ್ಶನ ಮಾಡುವ ಬಯಕೆ ಎಲ್ಲರಿಗೂ ಸಾಮಾನ್ಯ. ಆದರೆ ರೋಗಿಗಳು, ಅಂಗವಿಕಲರು ಹಾಗೂ ವಯೋವೃದ್ಧರಿಗೆ 3,347 ಅಡಿ ಎತ್ತರದ ವಿಂಧ್ಯಗಿರಿಯನ್ನು 618 ಮೆಟ್ಟಿಲು ಹತ್ತಿ ಬಾಹುಬಲಿ ದರ್ಶನ ಮಾಡುವುದು ಕಷ್ಟ. ಹಾಗೆಂದು ಅವರು ನಿರಾಶರಾಗಬೇಕಾಗಿಲ್ಲ. ಅಂತಹ ಅಸಹಾಯಕರಿಗೆ ಡೋಲಿ ವ್ಯವಸ್ಥೆಯಿದೆ.

ಬೆತ್ತದ ಕುರ್ಚಿಗೆ ಎರಡು ಗಳಗಳನ್ನು ಜೋಡಿಸಿಕೊಂಡು (ದೇವರ ಅಡ್ಡೆ ಮಾದರಿ) ಒಬ್ಬರನ್ನು ಕೂರಿಸಿಕೊಂಡು ನಾಲ್ವರು ಹೊತ್ತೂಕೊಂಡು ಬಾಹುಬಲಿಯ ಸನ್ನಿಧಿಗೆ ಬಿಟ್ಟು ದರ್ಶನ ಪಡೆದ ನಂತರ ಮತ್ತೆ ಬೆಟ್ಟದಿಂದ ಹೊತ್ತುಕೊಂಡು ಕೆಳಗಿಳಿಸುವುದು ಡೋಲಿ ವ್ಯವಸ್ಥೆ. ಆದರೆ ಡೋಲಿಯಲ್ಲಿ ಹೋಗಿ ಬರುವವರು ನಿಗದಿತ ಶುಲ್ಕ ಪಾವತಿ ಮಾಡಬೇಕು. ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಡೋಲಿ ಸೇವೆಯ ಶುಲ್ಕ ತುಸು ದುಬಾರಿ. ಸಾಮಾನ್ಯ ದಿನಗಳಲ್ಲಿ ಒಬ್ಬರನ್ನು ಬೆಟ್ಟಕ್ಕೆ ಕರೆದೊಯ್ದು ವಾಪಸ್‌ ಕರೆ ತರಲು 700ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಈಗ ಮಹಾಮಸ್ತಕಾಭಿಷೇಕದ ಸಂದರ್ಭವಾಗಿರುವುದರಿಂದ 1,250 ರೂ. ನಿಗದಿಪಡಿಸಲಾಗಿದೆ. ಶ್ರವಣಬೆಳಗೊಳದ ವಿಂಧ್ಯಗಿರಿ ಏರುವವರಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರಗೆ ಡೋಲಿ ವ್ಯವಸ್ಥೆ ಮಾಡಲಾಗಿದೆ.

ಸಾಮಾನ್ಯ ದಿನಗಳಲ್ಲಿ  ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ 20 ಡೋಲಿವಾಲಾಗಳು ಕಾರ್ಯ ನಿರ್ವಹಿಸುತ್ತಾರೆ. ಆದರೆ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಹೆಚ್ಚು ಡೋಲಿಗಳು ಹಾಗೂ ಡೋಲಿವಾಲಾಗಳು ಅಗತ್ಯ. ಹಾಗಾಗಿ ಈ ಮೊದಲು ಸೇವೆ ಸಲ್ಲಿಸುತ್ತಿದ್ದ ಸ್ಥಳೀಯ ಡೋಲಿವಾಲಾಗಳೊಂದಿಗೆ ಜಾರ್ಖಂಡ್‌ನ‌ ಗಿರಿದ್‌ ಜಿಲ್ಲೆಯ ಮಧುವನದಿಂದ 80 ಡೋಲಿವಾಲಾಗಾಳು ಆಗಮಿಸಿ ಡೋಲಿ ಸೇವೆ ಸಲ್ಲಿಸುತ್ತಿದ್ದಾರೆ. ಫೆ.16 ರಿಂದ ಹೆಚ್ಚುವರಿಯಾಗಿ 300 ಡೋಲಿವಾಲಾಗಳು ಜಾರ್ಖಂಡ್‌ನಿಂದ ಆಗಮಿಸುತ್ತಿದ್ದಾರೆ. ಜಾರ್ಖಂಡ್‌ನ‌ವರು ತಾವೇ ಡೋಲಿ ಸಿದ್ಧಪಡಿಸಿಕೊಂಡು ಬಂದಿದ್ದರೆ, ಸ್ಥಳೀಯ ಡೋಲಿವಾಲಾಗಳು ತಮ್ಮ ಗ್ರಾಮದಲ್ಲಿಯೇ ಡೋಲಿ ಸಿದ್ಧಪಡಿಸಿಕೊಂಡು ಬರುತ್ತಾರೆ.

ಶ್ರವಣಬೆಳಗೊಳದ ಜೈನ ಮಠದಿಂದ ಡೋಲಿ ಸೇವೆ ನೀಡಲಾಗುತ್ತಿದ್ದು ಅವುಗಳನ್ನು ಬೆತ್ತದಿಂದ ನಿರ್ಮಿಸಲಾಗಿದೆ. ಈಗ ಹೆಚ್ಚುವರಿಯಾಗಿ 5 ಬೆತ್ತದ ಡೋಲಿಗಳನ್ನು ಶ್ರೀಮಠದ ಆಡಳಿತ ಮಂಡಳಿ ಒದಗಿಸುತ್ತಿದೆ. ಫೆ.25ಕ್ಕೆ ಮಹಾ ಮಸ್ತಕಾಭಿಷೇಕ ಮಹೋತ್ಸವ ಮುಗಿದರೂ ಯಾತ್ರಾರ್ಥಿಗಳು ಮಾರ್ಚ್‌ ಅಂತ್ಯದವರೆಗೂ ಬರುವ ಸಾಧ್ಯತೆಯಿದೆ. ಹಾಗಾಗಿ ಜಾರ್ಖಂಡ್‌ನ‌ ಡೋಲಿವಾಲಾಗಳು ಹೆಚ್ಚಿನ ವಹಿವಾಟು ನಡೆಸುವ ನಿರೀಕ್ಷೆಯಲ್ಲಿದ್ದಾರೆ.

ಜಾರ್ಖಂಡ್‌ನ‌ ಶಿಖರ್ಜಿ ಎಂಬಲ್ಲಿ ಜೈನಧರ್ಮದ 24 ತೀರ್ಥಂಕರರು ಮೋಕ್ಷ ಹೊಂದಿದ ಪವಿತ್ರ ಕ್ಷೇತ್ರವಿದೆ. ಅದೂ  ಭಾರಿ ಎತ್ತರದ ಬೆಟ್ಟ. ಅಲ್ಲಿನ ಯಾತ್ರಾರ್ಥಿಗಳು ಸುಮಾರು 29ಕಿ.ಮೀ. ವರೆಗೆ ಕ್ರಮಿಸಬೇಕಿರುವುದರಿಂದ ಸಾವಿರಾರು ಮಂದಿ ಡೋಲಿ ಕೆಲಸ ಮಾಡಿಕೊಂಡು ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ. ಪರಿಣಿತ ಡೋಲಿವಾಲಾರು ಇರುವ ದೇಶದ ಏಕೈಕ ರಾಜ್ಯ ಜಾರ್ಖಂಡ್‌, ಹಾಗಾಗಿ ಅಲ್ಲಿಂದ ಡೋಲಿ ಸೇವಾಗಾರರನ್ನು ಕರೆಸಲಾಗಿದೆ.ಡೋಲಿ ಹೊರುವುದು ನಮಗೇನೂ ಕಷ್ಟವಲ್ಲ. ಜಾರ್ಖಂಡ್‌ನ‌ ತೀರ್ಥಂಕರ ಬೆಟ್ಟಕ್ಕೆ ಹೋಲಿಸಿದರೆ ಶ್ರವಣಬೆಳಗೊಳದ ವಿಂಧ್ಯಗಿರಿ ಅಷ್ಟೇನೂ ಕಷ್ಟವಲ್ಲ. ಈಗ ನಿತ್ಯ ಸರಾಸರಿ 200ಕ್ಕೂ ಹೆಚ್ಚು ಮಂದಿ ಡೋಲಿಯಲ್ಲಿ ಬೆಟ್ಟ ಏರುತ್ತಿದ್ದಾರೆ. ರಜಾ ದಿನಗಳಲ್ಲಿ ಇನ್ನೂ ಹೆಚ್ಚು ಜನರಿಗೆ ಡೋಲಿ ಅಗತ್ಯವಾಗಬಹುದು. ಫೆ.17ರಿಂದ ಡೋಲಿ ಬಳಸುವವರ ಸಂಖ್ಯೆ 500 ದಾಟಬಹುದು. ಅಮಯ್‌ಕುಮಾರ್‌, ಡೋಲಿವಾಲಾ, ಜಾರ್ಖಂಡ್‌ನಿಂದ ಆಗಮಿಸಿದವರು

– ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.