ಆರೆಸ್ಸೆಸ್‌ನವರಿಗೂ ವಿವರಣೆ ನೀಡಲು ಸಿದ್ಧ


Team Udayavani, Nov 15, 2017, 7:40 AM IST

15-5.jpg

ವಿಧಾನಪರಿಷತ್ತು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸುತ್ತಾ ತಮ್ಮ ಬಗ್ಗೆ ಕೆಲವರು ಕೇವಲವಾಗಿ ಮಾತನಾಡುತ್ತಿರುವುದರಿಂದ ಭಾವೋದ್ವೇಗಕ್ಕೊಳಗಾದ ಆರೋಗ್ಯ ಸಚಿವ ಕೆ. ಆರ್‌.ರಮೇಶ್‌ಕುಮಾರ್‌, “ವಿಧೇಯಕದ ಕುರಿತು ಆರ್‌ಎಸ್‌ಎಸ್‌ ಪ್ರಮುಖರು, ಕಾರ್ಯಕರ್ತರ ಸಭೆ ಆಯೋಜಿಸಿ ತಮ್ಮ ಆಶಯ ತಪ್ಪು ಎಂದು ಹೇಳಿದರೆ ಸಾರ್ವಜನಿಕ ಜೀವನದಿಂದಲೇ ನಿವೃತ್ತಿಯಾಗುವುದಾಗಿ’ ಸವಾಲು ಹಾಕಿದರು.

ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಮಹಾಂತೇಶ ಕವಟಗಿ ಮಠ ಅವರು ಖಾಸಗಿ ವೈದ್ಯರ ಮುಷ್ಕರ ವಿಚಾರ ಪ್ರಸ್ತಾಪಿಸಿದಾಗ ಉತ್ತರಿಸಿದ ಸಚಿವರು, “ವಿಪಕ್ಷ ನಾಯಕರು ನನ್ನನ್ನುಕೊಲೆ ಗಡುಕ, ಮಕ್ಕಳಿಲ್ಲದವನು ಎಂದೆಲ್ಲಾ ಟೀಕಿಸಿದ್ದಾರೆ. ನನಗಿಬ್ಬರು ಮಕ್ಕಳಿದ್ದಾರೆ ‘ ಎನ್ನುತ್ತಾ ಭಾವುಕರಾದರು. ಸೈದ್ಧಾಂತಿಕವಾಗಿ ನಾನು ಬಿಜೆಪಿ, ಆರ್‌ಎಸ್‌ಎಸ್‌ಗಳನ್ನು ಒಪ್ಪುವುದಿಲ್ಲ. ಆದರೆ, ಜನಹಿತ ದೃಷ್ಟಿಯಿಂದ ಮಂಡನೆ ಮಾಡಿದ ಈ ವಿಧೇಯಕ ಕುರಿತು ಆರ್‌ಎಸ್‌ಎಸ್‌ ಸಭೆ ನಡೆಸಿ ನನ್ನನ್ನು ಆಹ್ವಾನಿಸಿದರೆ ಹೋಗಿ ವಿವರಣೆ ನೀಡುವೆ. ನನ್ನ ಕಡೆಯಿಂದ ತಪ್ಪಾಗಿದೆಯೇ ಎಂಬುದನ್ನು ಅವರೇ ನಿರ್ಣಯಿಸಲಿ. ಅದನ್ನು ಬಿಟ್ಟು ನೀವು (ಬಿಜೆಪಿ) ಏಕಾಏಕಿ ನನ್ನನ್ನು ಕೊಲೆಗಡುಕ ಎಂದು ಕರೆದಿದ್ದೀರಿ. ಯಾವ ಠಾಣೆ, ಕೋರ್ಟ್‌ನಲ್ಲಿ ಕೇಸ್‌ ಇದೆ ಎಂಬುದನ್ನಾದರೂ ಹೇಳಿ. ನಿಮ್ಮ ಹೇಳಿಕೆಯಿಂದ ಮಗನೇ ನನ್ನನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಮತ್ತೆ ಭಾವೋದ್ವೇಗಕ್ಕೆ ಒಳಗಾದರು.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ)ವಿಧೇಯಕ ನನ್ನ ಪ್ರತಿಷ್ಠೆ ಅಥವಾ ಹಠ ಅಲ್ಲ. ಎಲ್ಲ ಪಕ್ಷಗಳ ಸಹಮತ ಪಡೆದಿದ್ದೇನೆ. ನನ್ನ ಪಕ್ಷದವರು ಸೇರಿ ಎಲ್ಲ ಪಕ್ಷಗಳ ಕೆಲವರ ಭಿನ್ನಾಭಿಪ್ರಾಯವೂ ಇತ್ತು. ಕರಡು ರಚನೆ ವೇಳೆ ಖಾಸಗಿ ಆಸ್ಪತ್ರೆಗಳ ವೈದ್ಯರ ಪ್ರತಿನಿಧಿಗಳಿಗೆ ಕರಡು ಪ್ರತಿ ನೀಡಲಾಗಿತ್ತು. ನಂತರ ಅವರು ಮುಖ್ಯಮಂತ್ರಿ, ರಾಜ್ಯಪಾಲರನ್ನು ಭೇಟಿ ಮಾಡಿದರೇ ವಿನಃ ಕರಡಿಗೆ ಆಕ್ಷೇಪ ವ್ಯಕ್ತಪಡಿಸಲಿಲ್ಲ. ತಿದ್ದುಪಡಿ ಪರಿಶೀಲನೆಗೆ ಜಂಟಿ ಪರಿಶೀಲನಾ ಸಮಿತಿಯೂ ಈಗ ವರದಿ ನೀಡಿದೆ. ಇದೀಗ ತೀವ್ರ ವಿರೋಧ ತೋರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಪಕ್ಷ ನಾಯಕರಿಂದ ನಾನು ಕೊಲೆಗಡುಕ ಪಟ್ಟ ಹೊತ್ತುಕೊಳ್ಳಬೇಕಾಗಿದೆ. ಅಂತಹ ತಪ್ಪು ಏನು ಮಾಡಿದ್ದೀರಿ ಎಂದು ನನ್ನ ಮಗನೇ ಕೇಳುತ್ತಿದ್ದಾನೆ. ಇದಕ್ಕೆ ವಿಪಕ್ಷ ನಾಯಕರೇ ಪರಿಹಾರ ಸೂಚಿಸಬೇಕು ಎಂದರು. ಕೆ.ಎಸ್‌.ಈಶ್ವರಪ್ಪ ಮಧ್ಯಪ್ರವೇಶಿಸಿ, ವೈದ್ಯರು ಉಪವಾಸಕ್ಕೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಹಾಗೂ ನೀವು ಸೇರಿ ವೈದ್ಯರ ಸಂಘದ ಪದಾಧಿಕಾರಿಗಳು, ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.