ಆರೆಸ್ಸೆಸ್‌ನವರಿಗೂ ವಿವರಣೆ ನೀಡಲು ಸಿದ್ಧ


Team Udayavani, Nov 15, 2017, 7:40 AM IST

15-5.jpg

ವಿಧಾನಪರಿಷತ್ತು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸುತ್ತಾ ತಮ್ಮ ಬಗ್ಗೆ ಕೆಲವರು ಕೇವಲವಾಗಿ ಮಾತನಾಡುತ್ತಿರುವುದರಿಂದ ಭಾವೋದ್ವೇಗಕ್ಕೊಳಗಾದ ಆರೋಗ್ಯ ಸಚಿವ ಕೆ. ಆರ್‌.ರಮೇಶ್‌ಕುಮಾರ್‌, “ವಿಧೇಯಕದ ಕುರಿತು ಆರ್‌ಎಸ್‌ಎಸ್‌ ಪ್ರಮುಖರು, ಕಾರ್ಯಕರ್ತರ ಸಭೆ ಆಯೋಜಿಸಿ ತಮ್ಮ ಆಶಯ ತಪ್ಪು ಎಂದು ಹೇಳಿದರೆ ಸಾರ್ವಜನಿಕ ಜೀವನದಿಂದಲೇ ನಿವೃತ್ತಿಯಾಗುವುದಾಗಿ’ ಸವಾಲು ಹಾಕಿದರು.

ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಮಹಾಂತೇಶ ಕವಟಗಿ ಮಠ ಅವರು ಖಾಸಗಿ ವೈದ್ಯರ ಮುಷ್ಕರ ವಿಚಾರ ಪ್ರಸ್ತಾಪಿಸಿದಾಗ ಉತ್ತರಿಸಿದ ಸಚಿವರು, “ವಿಪಕ್ಷ ನಾಯಕರು ನನ್ನನ್ನುಕೊಲೆ ಗಡುಕ, ಮಕ್ಕಳಿಲ್ಲದವನು ಎಂದೆಲ್ಲಾ ಟೀಕಿಸಿದ್ದಾರೆ. ನನಗಿಬ್ಬರು ಮಕ್ಕಳಿದ್ದಾರೆ ‘ ಎನ್ನುತ್ತಾ ಭಾವುಕರಾದರು. ಸೈದ್ಧಾಂತಿಕವಾಗಿ ನಾನು ಬಿಜೆಪಿ, ಆರ್‌ಎಸ್‌ಎಸ್‌ಗಳನ್ನು ಒಪ್ಪುವುದಿಲ್ಲ. ಆದರೆ, ಜನಹಿತ ದೃಷ್ಟಿಯಿಂದ ಮಂಡನೆ ಮಾಡಿದ ಈ ವಿಧೇಯಕ ಕುರಿತು ಆರ್‌ಎಸ್‌ಎಸ್‌ ಸಭೆ ನಡೆಸಿ ನನ್ನನ್ನು ಆಹ್ವಾನಿಸಿದರೆ ಹೋಗಿ ವಿವರಣೆ ನೀಡುವೆ. ನನ್ನ ಕಡೆಯಿಂದ ತಪ್ಪಾಗಿದೆಯೇ ಎಂಬುದನ್ನು ಅವರೇ ನಿರ್ಣಯಿಸಲಿ. ಅದನ್ನು ಬಿಟ್ಟು ನೀವು (ಬಿಜೆಪಿ) ಏಕಾಏಕಿ ನನ್ನನ್ನು ಕೊಲೆಗಡುಕ ಎಂದು ಕರೆದಿದ್ದೀರಿ. ಯಾವ ಠಾಣೆ, ಕೋರ್ಟ್‌ನಲ್ಲಿ ಕೇಸ್‌ ಇದೆ ಎಂಬುದನ್ನಾದರೂ ಹೇಳಿ. ನಿಮ್ಮ ಹೇಳಿಕೆಯಿಂದ ಮಗನೇ ನನ್ನನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಮತ್ತೆ ಭಾವೋದ್ವೇಗಕ್ಕೆ ಒಳಗಾದರು.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ)ವಿಧೇಯಕ ನನ್ನ ಪ್ರತಿಷ್ಠೆ ಅಥವಾ ಹಠ ಅಲ್ಲ. ಎಲ್ಲ ಪಕ್ಷಗಳ ಸಹಮತ ಪಡೆದಿದ್ದೇನೆ. ನನ್ನ ಪಕ್ಷದವರು ಸೇರಿ ಎಲ್ಲ ಪಕ್ಷಗಳ ಕೆಲವರ ಭಿನ್ನಾಭಿಪ್ರಾಯವೂ ಇತ್ತು. ಕರಡು ರಚನೆ ವೇಳೆ ಖಾಸಗಿ ಆಸ್ಪತ್ರೆಗಳ ವೈದ್ಯರ ಪ್ರತಿನಿಧಿಗಳಿಗೆ ಕರಡು ಪ್ರತಿ ನೀಡಲಾಗಿತ್ತು. ನಂತರ ಅವರು ಮುಖ್ಯಮಂತ್ರಿ, ರಾಜ್ಯಪಾಲರನ್ನು ಭೇಟಿ ಮಾಡಿದರೇ ವಿನಃ ಕರಡಿಗೆ ಆಕ್ಷೇಪ ವ್ಯಕ್ತಪಡಿಸಲಿಲ್ಲ. ತಿದ್ದುಪಡಿ ಪರಿಶೀಲನೆಗೆ ಜಂಟಿ ಪರಿಶೀಲನಾ ಸಮಿತಿಯೂ ಈಗ ವರದಿ ನೀಡಿದೆ. ಇದೀಗ ತೀವ್ರ ವಿರೋಧ ತೋರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಪಕ್ಷ ನಾಯಕರಿಂದ ನಾನು ಕೊಲೆಗಡುಕ ಪಟ್ಟ ಹೊತ್ತುಕೊಳ್ಳಬೇಕಾಗಿದೆ. ಅಂತಹ ತಪ್ಪು ಏನು ಮಾಡಿದ್ದೀರಿ ಎಂದು ನನ್ನ ಮಗನೇ ಕೇಳುತ್ತಿದ್ದಾನೆ. ಇದಕ್ಕೆ ವಿಪಕ್ಷ ನಾಯಕರೇ ಪರಿಹಾರ ಸೂಚಿಸಬೇಕು ಎಂದರು. ಕೆ.ಎಸ್‌.ಈಶ್ವರಪ್ಪ ಮಧ್ಯಪ್ರವೇಶಿಸಿ, ವೈದ್ಯರು ಉಪವಾಸಕ್ಕೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಹಾಗೂ ನೀವು ಸೇರಿ ವೈದ್ಯರ ಸಂಘದ ಪದಾಧಿಕಾರಿಗಳು, ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದರು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.