“ಮುಕ್ತ ಮನಸ್ಸು ತೋರದ ಕೇಂದ್ರ’
Team Udayavani, Nov 15, 2017, 7:51 AM IST
.ವಿಧಾನ ಪರಿಷತ್ತು: ರಾಜ್ಯದ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು 52 ಸಾವಿರ ಕೋಟಿ ರೂ. ಅಗತ್ಯವಿದೆ. ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಮುಕ್ತ ಮನಸ್ಸು ಇಟ್ಟುಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್. ಕೆ.ಪಾಟೀಲ್ ಹೇಳಿದ್ದಾರೆ.
ನಿಯಮ 72ರಡಿ ಬಿಜೆಪಿ ಸದಸ್ಯ ಮಹಂತೇಶ ಪಾಟೀಲ್ ಕವಟಗಿಮಠ ಪ್ರಸ್ತಾಪಿಸಿದ ವಿಷಯಕ್ಕೆ ಪೂರಕವಾಗಿ ಮಾತನಾಡಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು ಎಂದು ಇಲಾಖೆಯಿಂದ ನಿರ್ದೇಶನ ನೀಡಿದ್ದು ಸರಿಯಲ್ಲ ಎಂದಾಗ ಸಚಿವರು ಈ ಉತ್ತರ ನೀಡಿದರು.
ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ನಾವು ನಿರ್ದೇಶನ ನೀಡಿಲ್ಲ. ರಾಷ್ಟ್ರೀಯ ಕುಡಿಯುವ ನೀರು ಯೋಜನೆಯಡಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನವಾಗಿದೆ. ಕೆಂದ್ರ ಸರ್ಕಾರ ಈ ರೀತಿಯ ನಿರ್ಬಂಧ ಹಾಕುವುದು ಒಳ್ಳೆಯದಲ್ಲ. ಉದ್ಯೋಗ ಖಾತ್ರಿ ಯೋಜನೆಗೆ ಅನುದಾನ ನೀಡಲು ಕೇಂದ್ರ ಸರ್ಕಾರ ಮುಕ್ತವಾಗಿರುವಂತೆ ಕುಡಿಯುವ ನೀರಿನ ಯೋಜನೆಗೂ ಮುಕ್ತ ಸಹಾಯ ಹಸ್ತ ನೀಡಬೇಕು ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ರಾಜ್ಯದ 27 ಜಿಲ್ಲೆಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಲಭ್ಯವಿರುವ ಭೂಮೇಲ್ಮೆ„ ಜಲಮೂಲಗಳಾದ ನದಿ, ಜಲಾಶಯ, ನೀರಾವರಿ ಇಲಾಖೆ ಕೆರೆಗಳು ಸೇರಿ ಲಭ್ಯವಿರುವ ಇತರೆ ಜಲಮೂಲಗಳನ್ನು ಆಧರಿಸಿ ರೂಪಿಸಲಾಗಿದೆ. ಈವರೆಗೆ 10,500 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಇದುವರೆಗೆ 544 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. 409 ಯೋಜನೆಗಳನ್ನು ಪೂರ್ಣಗೊಳಿಸ ಲಾಗಿದೆ. ಪ್ರಸ್ತುತ ಸರ್ಕಾರದಲ್ಲಿ 236 ಯೋಜನೆಗಳನ್ನು ಪೂರ್ಣಗೊಳಿಸಿ 3,426 ಜನಸವತಿಗಳ 49.58 ಲಕ್ಷ ಜನಸಂಖ್ಯೆಗೆ ಕುಡಿಯುವ ನೀರು
ಒದಗಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 65 ಯೋಜನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಇದರಿಂದ 1,909 ಜನವಸತಿಗಳ 29.67 ಲಕ್ಷ ಜನಸಂಖ್ಯೆಗೆ ಕುಡಿಯುವ ನೀರು ಒದಗಿಸಲು ಯೋಜಿಸಲಾಗಿದೆ. 98 ಯೋಜನೆಗಳು ಪ್ರಗತಿಯಲ್ಲಿವೆ. 19 ಯೋಜನೆಗಳು ಟೆಂಡರ್ ಪ್ರಕ್ರಿಯೆಲ್ಲಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು