ಬೆಳಗಾವಿಯಲ್ಲಿ ಮತ್ತೆ ಗಲಭೆ: ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ
Team Udayavani, Nov 16, 2017, 8:00 AM IST
ಬೆಳಗಾವಿ: ಕನ್ನಡ ರಾಜ್ಯೋತ್ಸವ, ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ನಡೆದ ಗಲಾಟೆ ತಣ್ಣಗಾಯಿತು ಎನ್ನುವಷ್ಟರಲ್ಲಿ ನಗರದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವಾಗಲೇ ಮತ್ತೆ ಗಲಭೆ ಭುಗಿಲೆದ್ದಿದೆ. ಕಿಡಿಗೇಡಿಗಳು ಬುಧವಾರ ರಾತ್ರಿ ಏಕಾಏಕಿ ಕಲ್ಲು ತೂರಾಟ ನಡೆಸಿ 5ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದ ರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಅಧಿಕಾರಿಗಳ ಮೇಲೂ ಕಲ್ಲು ತೂರಲಾಗಿದೆ.
ನಗರದ ಖಡಕ ಗಲ್ಲಿ, ಖಂಜರ ಗಲ್ಲಿ, ಭಡಕಲ್ ಗಲ್ಲಿ, ಟೋಪಿ ಗಲ್ಲಿ ಸೇರಿದಂತೆ ಹಲವೆಡೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಗುಂಪು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ. ಮೊದಲು ಖಡಕ ಗಲ್ಲಿಯಲ್ಲಿ ಶುರುವಾದ ಗಲಭೆ ನಂತರ ಎಲ್ಲ ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ. ಶೆಟ್ಟಿ ಗಲ್ಲಿ ಕಾರ್ನರ್ನಲ್ಲಿ ಭಾರೀ ಪ್ರಮಾಣದ ಕಲ್ಲುಗಳು ಬಿದ್ದಿವೆ. ಸುಮಾರು 30ರಿಂದ 40 ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆ ಉದ್ದೇಶದಿಂದ ಕಿಡಿಗೇಡಿಗಳು ಮೊದಲೇ ಕಲ್ಲು
ಸಂಗ್ರಹಿಸಿ ಇಟ್ಟುಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಸುಮಾರು 10ಕ್ಕೂ ಹೆಚ್ಚು ಮಂದಿ ಗಲಾಟೆಯಲ್ಲಿ ಗಾಯಗೊಂಡಿದ್ದಾರೆ. ಕೆಎಸ್ಆರ್ಪಿ ತುಕಡಿ ಸೇರಿದಂತೆ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.
ಪೊಲೀಸ್ ಆಯುಕ್ತರಿಗೆ ಕಲ್ಲೇಟು
ಗಲಭೆ ಪೀಡಿತ ಸ್ಥಳಕ್ಕೆ ಬಂದ ಮಹಾನಗರ ಪೊಲೀಸ್ ಆಯುಕ್ತ ಟಿ.ಜಿ. ಕೃಷ್ಣಭಟ್, ಮಾರ್ಕೆಟ್ ಎಸಿಪಿ ಶಂಕರ ಮಾರೀಹಾಳ ಅವರ ಮುಖಕ್ಕೆ ಕಲ್ಲು ಬಿದ್ದಿದೆ ಎನ್ನಲಾಗಿದೆ. ಆಯುಕ್ತರು ಹೆಲ್ಮೆಟ್ ಧರಿಸಿದ್ದರಿಂದ ಯಾವುದೇ ಅನಾಹುತ ಆಗಿಲ್ಲ. ಎಸಿಪಿ ಶಂಕರ ಮಾರೀಹಾಳ ಅವರ ಮುಖಕ್ಕೆ ಕಲ್ಲು ಬಿದ್ದಿದ್ದರಿಂದ ತುಟಿಯ ಭಾಗದಲ್ಲಿ ರಕ್ತ ಬಂದಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ಕೆಲ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…