ಕೃಷ್ಣ ಮಠಕ್ಕೆ ಕರೆದೂ ಇಲ್ಲ, ಹೋಗ್ತಾನೂ ಇಲ್ಲ:ಸಿದ್ದರಾಮಯ್ಯ
Team Udayavani, Nov 19, 2017, 3:32 PM IST
ಉಡುಪಿ: ”ನಾನು ಕೃಷ್ಣ ಮಠಕ್ಕೆ ಈಗ ಹೋಗ್ತಾ ಇಲ್ಲ, ಹಿಂದೆ ಹೋಗಿದ್ದೆ, ನನಗೆ ಪೇಜಾವರ ಶ್ರೀಗಳೊಂದಿಗೆ ಯಾವ ಸಂಘರ್ಷವೂ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರು ಮಠಕ್ಕೆ ತೆರಳುತ್ತೀರಾ ಎಂದು ಪ್ರಶ್ನಿಸಿದಾಗ ಉತ್ತರ ನೀಡಿದ ಸಿಎಂ ” ಮಠಕ್ಕೆ ನನ್ನನ್ನು ಯಾರೂ ಕರೆದೂ ಇಲ್ಲ, ಈಗ ಹೋಗ್ತಾನೂ ಇಲ್ಲ” ಎಂದರು.
” ಹಿಂದೆ ಕೃಷ್ಣನ ದರ್ಶನ ಮಾಡಿದ್ದೆ. ದೇವಸ್ಥಾನಕ್ಕೆ ಹೋಗುವುದು ಅವರವರ ನಂಬಿಕೆಗೆ ಬಿಟ್ಟದ್ದು, ನಾನು ಹೋಗದೆ ಇರುವುದು ಉದ್ದೇಶಪೂರ್ವಕವಾಗಿ ಅಲ್ಲವೇ ಅಲ್ಲ” ಎಂದರು.
”ಪೇಜಾವರ ಶ್ರೀಗಳೊಂದಿಗೆ ಸಂಘರ್ಷ ಇಲ್ಲ, ರಾಜ್ಯದ ಆರೂವರೆ ಕೋಟಿ ಜನರೊಂದಿಗೆ ನನಗೆ ಉತ್ತಮ ಬಾಂಧವ್ಯ ಇದೆ” ಎಂದರು.
ಉಡುಪಿಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಬಿಆರ್ಎಸ್ ಸ್ವಾಸ್ಥ್ಯ ಮತ್ತು ಸಂಶೋಧನ ಸಂಸ್ಥೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಕರ್ನಾಟಕ ಸರಕಾರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್