ಇಂದು ಕೆಪಿಎಂಇ ವಿಧೇಯಕ ಮಂಡನೆ?


Team Udayavani, Nov 20, 2017, 10:27 AM IST

20-6.jpg

ಬೆಳಗಾವಿ: ವೈದ್ಯರ ಮುಷ್ಕರಕ್ಕೆ ಕಾರಣ ವಾಗಿ ನಂತರ ಅವರ ಒತ್ತಾಯದ ಮೇರೆಗೆ ಕೆಲವು ತಿದ್ದುಪಡಿಗಳಿಗೆ ಒಳಗಾಗಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ಸರ್ಕಾರದ ನಿಯಂತ್ರ ಣ ಕ್ಕೊಳಪಡಿಸುವ ಕೆಪಿಎಂಇ ವಿಧೇಯಕ ಸೋಮವಾರ ಸದನದಲ್ಲಿ
ಮಂಡನೆಯಾಗಲಿದೆಯೇ? ಆರೋಗ್ಯ ಸಚಿವ ರಮೇಶ್‌ಕುಮಾರ್‌ ಅವರ ಸೂಚನೆಯಂತೆ ಇಲಾಖೆ ಅಧಿಕಾರಿಗಳು ಕೆಲವು ಮಾರ್ಪಾಡುಗಳೊಂದಿಗೆ ವಿಧೇಯಕ ಸಿದ್ಧಪಡಿಸಿದ್ದಾರೆ. ಇದನ್ನು ಸೋಮವಾರ ಸದನದಲ್ಲಿ ಮಂಡಿಸಲು ಸಚಿವರೂ ಮುಂದಾಗಿದ್ದಾರೆ. 

ಒಂದು ವೇಳೆ ವಿಧೇಯಕದಲ್ಲಿ ಮಾರ್ಪಾಡು ಮಾಡಿರು ವುದರಿಂದ ಅದನ್ನು ಮತ್ತೆ ಸಚಿವ ಸಂಪುಟ ಸಭೆ ಮುಂದಿಡ ಬೇಕು ಎಂದು ಸರ್ಕಾರ ಬಯಸಿದರೆ ಸೋಮವಾರ ಸಂಜೆ ನಡೆಯುವ ಸಂಪುಟ ಸಭೆಯಲ್ಲಿಟ್ಟು ಮಂಗಳವಾರ ಮಂಡಿ ಸಲಾಗುತ್ತದೆ. ಇಲ್ಲ  ದಿದ್ದರೆ ಸೋಮವಾರವೇ ವಿಧೇಯಕ ಮಂಡನೆಯಾಗಲಿದೆ. ಈ ಹಿಂದೆಯೇ ಕೆಪಿಎಂಇ ವಿಧೇಯಕ ಸಿದ್ಧಪಡಿಸಿದ್ದ ಆರೋಗ್ಯ ಸಚಿವ ರಮೇಶ್‌ಕುಮಾರ್‌ ಕಳೆದ ವಾರವೇ ಅದನ್ನು ಸದನದಲ್ಲಿ ಮಂಡಿಸಲು ಮುಂದಾಗಿದ್ದರು. ಆದರೆ, ವಿಧೇಯಕ ಮಂಡನೆ ವಿರೋಧಿಸಿ ವೈದ್ಯರು ಮುಷ್ಕರ ನಡೆಸಿದ ಪರಿಣಾಮ ಅದು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಶುಕ್ರವಾರ ವೈದ್ಯರ ಸಂಘಟನೆಗಳ ಪ್ರಮುಖರೊಂದಿಗೆ  ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ರಮೇಶ್‌ಕುಮಾರ್‌ ವಿಧೇಯಕದಲ್ಲಿ ಕೆಲವು ಮಾರ್ಪಾಟು ಗಳನ್ನು ಮಾಡಲು ಒಪ್ಪಿಕೊಂಡಿದ್ದರು. 

ಅದರಂತೆ ವಿಧೇಯಕದಲ್ಲಿ ಮಾರ್ಪಾಟು ಮಾಡಲಾಗಿದ್ದು, 2007ರಲ್ಲಿ ರೂಪಿಸಿದ್ದ ಮೂಲ ಕಾಯ್ದೆಯಲ್ಲೇ ಇದ್ದ ಜೈಲು ಶಿಕ್ಷೆ ರದ್ದುಗೊಳಿಸಿ, ದಂಡ ಮಾತ್ರ ಉಳಿಸಿಕೊಳ್ಳಲಾಗಿದೆ. ಜಿಪಂ ಸಿಇಒ ಅಧ್ಯ ಕ್ಷತೆಯ ದೂರು ನಿವಾರಣೆ ಸಮಿತಿ ಜವಾ ಬ್ದಾರಿಯನ್ನು ನೋಂದಣಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಸಾಮೂಹಿಕ ದರ ನಿಗದಿ ಕೈಬಿಟ್ಟು ಸರ್ಕಾರಿ ಯೋಜನೆಗಳಿಗೆ ಮಾತ್ರ ಸರ್ಕಾರ ದರ ನಿಗದಿ ಮಾಡುತ್ತದೆ. ವೈದ್ಯರ ವಿರುದ್ಧ ನಿರ್ಲಕ್ಷ್ಯದ ದೂರು ಬಂದರೆ ವಕೀಲರಿಲ್ಲದೆ ವೈದ್ಯರೇ ಖುದ್ದಾಗಿ ಹಾಜರಾಗಬೇಕು ಎಂಬ ಅಂಶ ಸಹ ಸಡಿಲಿಸಿ ವಕೀಲರ ಮೂಲಕ ವಾದ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸಚಿವ ಸಂಪುಟ ಸಭೆ ಇಂದು
ವಸತಿ ಶಾಲಾ ಸಂಕೀರ್ಣ, ಆರೋಗ್ಯ ಸಂಸ್ಥೆಗಳಿಗೆ ಔಷಧ, ರಾಸಾಯನಿಕ ಖರೀದಿಗೆ ಒಪ್ಪಿಗೆ ಸಾಧ್ಯತೆ ಬೆಳಗಾವಿ: ರಾಜ್ಯದಲ್ಲಿರುವ ವಿವಿಧ ಸರ್ಕಾರಿ ವಸತಿ ಶಾಲೆಗಳ 53 ಶಾಲಾ ಸಂಕೀರ್ಣಗಳನ್ನು ಸುಮಾರು 888.78 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು
ಸಚಿವ ಸಂಪುಟ ಸಭೆ ಸೋಮವಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಇದರೊಂದಿಗೆ, 2017-18ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ ಔಷಧ, ರಾಸಾಯನಿಕ ಮತ್ತಿತರೆ ವಸ್ತುಗಳನ್ನು 340.47 ಕೋಟಿ ರೂ. ವೆಚ್ಚದಲ್ಲಿ ಖರೀದಿಸುವ
ಬಗ್ಗೆಯೂ ತೀರ್ಮಾನ ಕೈಗೊಳ್ಳುವ ಸಂಭವವಿದೆ. ಇಲ್ಲಿನ ಸುವರ್ಣಸೌಧದಲ್ಲಿ ಸೋಮವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯ ಪ್ರಮುಖ ವಿಷಯ ಪಟ್ಟಿಯಲ್ಲಿ ಈ ಅಂಶಗಳಿವೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್‌.ಅಂಬೇಡ್ಕರ್‌, ಇಂದಿರಾ ಗಾಂಧಿ, ಅಟಲ್‌ಬಿಹಾರಿ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿದ್ದು, ಆ ಪೈಕಿ 53 ಶಾಲಾ ಸಂಕೀರ್ಣ ಗಳನ್ನು ಸುಮಾರು 888.78 ಕೋಟಿ ರೂ. ವೆಚ್ಚದಲ್ಲಿ
ನಿರ್ಮಾಣ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅದೇ ರೀತಿ ಹಾವೇರಿ ಜಿಲ್ಲೆಯ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠಕ್ಕೆ ಚಿತ್ರದುರ್ಗ ನಗರಾ  ಭಿವೃದ್ಧಿ ಪ್ರಾಧಿಕಾರದಿಂದ ಚಿತ್ರದುರ್ಗ ಜಿಲ್ಲೆ ಕೆಂಚನ ಕಟ್ಟೆ ಗ್ರಾಮದಲ್ಲಿ 21,531 ಚದರ
ಅಡಿಯ ಸಿಎ ನಿವೇ ಶನವನ್ನು ಗುತ್ತಿಗೆ ಆಧಾರದಲ್ಲಿ ಮಂಜೂರು ಮಾಡುವುದು, ಕಾವೇರಿ ನೀರಾವರಿ ನಿಗಮಕ್ಕೆ ಅವಧಿ ಸಾಲ ಮೂಲಕ 500 ಕೋಟಿ ರೂ. ಸಂಗ್ರಹಿಸಲು ಸರ್ಕಾರದ ಖಾತರಿ ನೀಡುವುದು, ವಿದ್ಯಾಸಂಸ್ಥೆ ಮತ್ತು ಸೇವಾ ಸಂಸ್ಥೆಗಳಿಗೆ ಭೂಮಿ
ಮಂಜೂರು ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು 1963ರ ಕರ್ನಾಟಕ ಪೊಲೀಸ್‌ ಕಾಯ್ದೆಗೆ ತಿದ್ದುಪಡಿ ತರುವುದು ಮತ್ತು ಕರ್ನಾಟಕ ವಿದ್ಯುನ್ಮಾನ ವ್ಯವಸ್ಥೆಯ ವಿನ್ಯಾಸ ಮತ್ತು ಉತ್ಪಾದನಾ ನೀತಿ- 2017
ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕೆಪಿಎಂಇ ಮಸೂದೆಗೆ ತಿದ್ದುಪಡಿ ಮಾಡಿರುವುದು ಖಾಸಗಿ ವೈದ್ಯರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಅಲ್ಲ. ಬಡರೋಗಿಗಳ ಅನುಕೂಲಕ್ಕಾಗಿ ಮಾಡಿದ್ದು. ವೈದ್ಯರಿಗೆ ಕಾಯ್ದೆ ಕುರಿತು ಮನವರಿಕೆ ಮಾಡಲಾಗಿದೆ. ಆ ಮಸೂದೆ ಮಂಡನೆಯಾಗಲಿದೆ. ಇಲ್ಲಿ
ಗೆದ್ದಿರುವುದು ಬಡರೋಗಿಗಳು.

 ●ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.