ರಾಸಲೀಲೆ CDಯಲ್ಲಿರುವುದು ನಿತ್ಯಾನಂದ; 7 ವರ್ಷದ ಬಳಿಕ ಬಂತು FSL ವರದಿ
Team Udayavani, Nov 22, 2017, 11:28 AM IST
ಬೆಂಗಳೂರು: ಸುಮಾರು 7 ವರ್ಷಗಳ ಹಿಂದೆ ಸ್ಫೋಟಗೊಂಡಿದ್ದ ಬಿಡದಿಯ ನಿತ್ಯಾನಂದ ಸ್ವಾಮಿಯ ಸೆಕ್ಸ್ ಸಿಡಿ ಪ್ರಕರಣ ತಿರುವು ಪಡೆದುಕೊಂಡಿದ್ದು, ರಾಸಲೀಲೆ ಸಿಡಿಯಲ್ಲಿರುವುದು ನಿತ್ಯಾನಂದನೇ ಎಂದು ದೆಹಲಿಯ ಎಫ್ ಎಸ್ ಎಲ್(ವಿಧಿ ವಿಜ್ಞಾನ ಪ್ರಯೋಗಾಲಯ) ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಸಿಡಿಯಲ್ಲಿರುವುದು ನಾನಲ್ಲ, ಅದು ತಿರುಚಿದ ಸಿಡಿ ಎಂದು ನಿತ್ಯಾನಂದ ಆರೋಪಿಸಿದ್ದ, ತದನಂತರ ಮಾಧ್ಯಮಗಳ ವಿರುದ್ಧವೂ ತಿರುಗಿಬಿದ್ದಿದ್ದ. ಪ್ರಕರಣದಲ್ಲಿ ಹೈಡ್ರಾಮಾವೇ ನಡೆದಿತ್ತು. ಇದೀಗ ಕೊನೆಗೂ ಎಫ್ಎಸ್ ಎಲ್ ವರದಿ ರಾಸಲೀಲೆ ಸಿಡಿಯಲ್ಲಿದ್ದ ನಿತ್ಯಾನಂದನ ಬಂಡವಾಳ ಬಯಲು ಮಾಡಿದೆ.
2010ರಲ್ಲಿ ನಿತ್ಯಾನಂದ ಚಿತ್ರನಟಿಯೊಬ್ಬಳ ಜತೆ ರಾಸಲೀಲೆಯಲ್ಲಿ ತೊಡಗಿದ್ದ ಸಿಡಿ ಲೆನಿನ್ ಮೂಲಕ ಮಾಧ್ಯಮಗಳಿಗೆ ತಲುಪುವ ಮೂಲಕ ದೇಶಾದ್ಯಂತ ವಿವಾದವನ್ನೇ ಸೃಷ್ಟಿಸಿತ್ತು. ಸ್ವಾಮಿ ಕೂಡ ಸುದ್ದಿ ಪ್ರಸಾರವಾದ ನಂತರ ನಾಪತ್ತೆಯಾಗಿದ್ದ. ನಿತ್ಯಾನಂದ ವಿರುದ್ಧ ಆರತಿ ರಾವ್ ಎಂಬವರು ಕೂಡಾ ದೂರು ದಾಖಲಿಸಿದ್ದರು.
ನಿತ್ಯಾನಂದನ ರಾಸಲೀಲೆ ವಿರುದ್ಧ ನಿತ್ಯ ಧರ್ಮಾನಂದಾ ಅಲಿಯಾಸ್ ಲೆನಿನ್ ಕರುಪ್ಪನ್ ತಮಿಳುನಾಡಿನಲ್ಲಿ ದೂರು ದಾಖಲಿಸಿದ್ದರು. ಬಳಿಕ ಪ್ರಕರಣದ ವಿಚಾರಣೆಯನ್ನು ತಮಿಳುನಾಡು ಪೊಲೀಸರು ರಾಮನಗರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ಬಿಡದಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು. 2010ರಲ್ಲಿ ಸಿಐಡಿ ಸಿಡಿಯನ್ನು ದೆಹಲಿಯಲ್ಲಿ ಎಫ್ಎಸ್ ಎಲ್ ಪ್ರಯೋಗಾಲಯಕ್ಕೆ ಕಳುಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!