ಬಹಿರಂಗ ಚರ್ಚೆಗೆ ಡಿಕೆಶಿ ಸವಾಲು
Team Udayavani, Nov 24, 2017, 8:59 AM IST
ವಿಧಾನಸಭೆ: ವಿದ್ಯುತ್ ಖರೀದಿ ಅಕ್ರಮಗಳ ಕುರಿತ ಸದನ ಸಮಿತಿ ವರದಿ ಸೇರಿ ಇಂಧನ ಇಲಾಖೆಗೆ ಸಂಬಂಧಿಸಿ ಏನೇನೋ ಮಾಡಿಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಚರ್ಚೆಗೆ ಬನ್ನಿ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡುತ್ತಿದ್ದಾಗ ಮಧ್ಯಪ್ರವೇಶಿಸಿದ ಬಿಜೆಪಿಯ ಕೆ.ಜಿ.ಬೋಪಯ್ಯ, ಸೋಲಾರ್ ಯೋಜನೆಗೆ ಕೇಂದ್ರದಿಂದ ಎಷ್ಟು ನೆರವು ಬಂದಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಡಿ.ಕೆ.
ಶಿವಕುಮಾರ್, ಏನೂ ಬಂದಿಲ್ಲ. ಬಿಚ್ಚಿಡಬಾರದು ಎಂದು ಸುಮ್ಮನಿದ್ದೇನೆ ಎಂದರು. ಅದಕ್ಕೆ, ಬೋಪಯ್ಯ ಹಾಗೂ ಬಿಜೆಪಿ ಸದಸ್ಯರು, ಏನೇನಿದೆಯೋ ಬಿಚ್ಚಿಡಿ ಎಂದು ಸವಾಲು ಹಾಕಿದಾಗ, ಆಯ್ತು ಬಹಿರಂಗ ಚರ್ಚೆಗೆ ಬನ್ನಿ. ಯಡಿಯೂರಪ್ಪ ಏನೇನೋ ಹೇಳಿದ್ದಾರಲ್ಲಾ? ಎಲ್ಲದರ ಬಗ್ಗೆ ದಾಖಲೆ ಸಮೇತ ಮಾತನಾಡೋಣ ಬನ್ನಿ ಎಂದು ಪ್ರತಿಸವಾಲು ಹಾಕಿದರು.
ಅಷ್ಟರಲ್ಲಿ ಜೆಡಿಎಸ್ನ ಎಚ್.ಡಿ.ರೇವಣ್ಣ ಎದ್ದು ನಿಂತು, “ಆಯ್ತು ನಾನು ಬಹಿರಂಗ ಚರ್ಚೆಗೆ ಸಿದ್ಧ. ನೀವು ಮಂಡಿಸಿರೋ ವರದಿಯಲ್ಲಿ ನನ್ನ ಕಾಲದಲ್ಲಿ ದುಡ್ಡು ತಿಂದಿದ್ದೇನೆ ಎಂದು ಹೇಳಿದ್ದೀರಿ.ಸಾಬೀತು ಮಾಡಿದರೆ ಸದನದಲ್ಲೇ ನೇಣು ಹಾಕಿಕೊಳ್ಳುತ್ತೇನೆ’ ಎಂದರು. ಅದಕ್ಕೆ ಶಿವಕುಮಾರ್, “ಯೇ ರೇವಣ್ಣ, ನೀವು ನಮ್ಮ ಜತೆ ಇರ್ಬೇಕು ಸುಮ್ನಿರಪ್ಪ. ಯಾಕೆ ನೇಣು ಹಾಕಿಕೊಳ್ಳೋ ಮಾತಾಡ್ತಿಯ’ ಎಂದು ಹೇಳಿದರು. ಮಧ್ಯಪ್ರವೇಶಿಸಿದ ಸ್ಪೀಕರ್ ಸ್ಥಾನದಲ್ಲಿದ್ದ ಎನ್.ಎಚ್. ಶಿವಶಂಕರ ರೆಡ್ಡಿ, ಈ ಚರ್ಚೆಗೆ ತೆರೆ ಎಳೆದು
ಮುಖ್ಯಮಂತ್ರಿಗಳಿಗೆ ಮಾತು ಮುಂದುವರಿಸಲು ಅವಕಾಶ ಮಾಡಿಕೊಟ್ಟರು. ಪವರ್ ಮಿನಿಸ್ಟರ್ ಅಲ್ಲವಾ, ಅದಕ್ಕೆ ಅವರು ಪವರ್ಫುಲ್. ಏನೋ ಸಮಜಾಯಿಷಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ