ಕಾಂಗ್ರೆಸ್‌ ಆಡಳಿತ ವಿರೋಧಿ ಅಲೆ ಇಲ್ಲ


Team Udayavani, Nov 24, 2017, 9:09 AM IST

24-12.jpg

ವಿಧಾನಸಭೆ: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎಂಬುದು ಇಲ್ಲ. ಉತ್ತರ ಕರ್ನಾಟಕ ಭಾಗದವರೂ ಸೇರಿ ಸಮಗ್ರ ಕರ್ನಾಟಕದ ಜನ ನಮ್ಮ ಸರ್ಕಾರದ ಸಾಧನೆ ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ರಾಜಕೀಯ ಮಾತನಾಡಲ್ಲ ಎಂದು ಹೇಳುತ್ತಾ ರಾಜಕೀಯವಾಗಿಯೇ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ, ಐದು ವರ್ಷ ಆಡಳಿತ ನಡೆಸಿದ ಸರ್ಕಾರದ ವಿರುದ್ಧ ಸಹಜವಾಗಿ ಆಡಳಿತ ವಿರೋಧಿ ಅಲೆ ಇರುವುದು ಸಹಜ. ಆದರೆ, ನಮ್ಮ ಸರ್ಕಾರಕ್ಕೆ ಆ ರೀತಿಯ ಅಲೆ ಯಾವುದೂ ಇಲ್ಲ ಎಂದು ಪ್ರತಿಪಾದಿಸಿದರು. ಮಿಷನ್‌ 150 ಎಂಬುದು ನಿಮ್ಮ ಭ್ರಮೆ. ಬಿಜೆಪಿಯ ಮಿಷನ್‌ 150 ಏನಾಗಿದೆ ಎಂಬುದು ಗೊತ್ತಿದೆ. ಮಿಷನ್‌ 150 ಹೋಗಿ 50 ಆಗಲಿದೆ ಎಂಬ ಆತಂಕದಿಂದ ಬಿಜೆಪಿಯವರು ಹತಾಶರಾಗಿ ನಿರಾಧಾರ ಆರೋಪ ಮಾಡಿಕೊಂಡು ತಿರುಗಾಡುತ್ತಿದ್ದಾರೆ. ಗೇಯೋ ಎತ್ತಿಗೆ ಮೇವು ಹಾಕಿ ಎಂಬುದು ನಮ್ಮ ಮನವಿ. ಐದು ವರ್ಷ ನಿಮ್ಮ ನಿರೀಕ್ಷೆಗೆ ತಕ್ಕಂತೆ ನುಡಿದಂತೆ ನಡೆದಿದ್ದೇವೆ. ಮುಂದೆಯೂ ಆಶೀರ್ವಾದ ಮಾಡಿ ಎಂದು ಜನರ ಮುಂದೆ ಹೋಗುತ್ತಿದ್ದೇವೆ ಎಂದು ಹೇಳಿದರು. ಮುಂದಿನ ಬಾರಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳಿ. ಅದಕ್ಕೇನೂ ತಕರಾರಿಲ್ಲ. ಏಕೆಂದರೆ ನೀವು ಆ ರೀತಿ ಹೇಳಲೇ  ಬೇಕು. ಆದರೆ, ಮಿಷನ್‌ 150  ಎಂದು ತಿರುಗಾಡುತ್ತಿರಬೇಡಿ ಎಂದು ಬಿಜೆಪಿಯವರಿಗೆ ಟಾಂಗ್‌ ನೀಡಿದರು.

ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯಲ್ಲಿ ಇನ್ನೇನು ಗೆದ್ದೇ ಬಿಟ್ಟೆವು ಎಂದು ಬೀಗಿದರು. ಚುನಾವಣೆ ಸಿದ್ದರಾಮಯ್ಯ -ಯಡಿಯೂರಪ್ಪ ನಡುವೆ, ಸಿದ್ದರಾಮಯ್ಯ- ಶ್ರೀನಿವಾಸ  ಪ್ರಸಾದ್‌ ನಡುವೆ, ಮುಂದಿನ ವಿಧಾನಸಭೆ ಚುನಾವಣೆ ದಿಕ್ಸೂಚಿ ಎಂದೆಲ್ಲಾ ಹೇಳಿದರು. ಫಲಿತಾಂಶಕ್ಕೆ ಮುನ್ನಾದಿನ ವಿಜಯೋತ್ಸವ ಆಚರಿಸಲು ಹೋಗುತ್ತಿದ್ದೇವೆ ಎಂದು ಹೇಳಿದರು. ಇವರ ಅಬ್ಬರ ನೋಡಿ ನನಗೂ ಒಮ್ಮೆ ಆತಂಕವಾಗಿತ್ತು. ಆದರೆ, ನಾವು ಕೆಲಸ ಮಾಡಿ ಅದಕ್ಕೆ ಕೂಲಿ ಕೊಡಿ ಎಂದು ಕೇಳಿದ್ದೇವು. ಜನರ ಆಶೀರ್ವಾದ ಸಿಕ್ಕಿತು ಎಂದು ಹೇಳಿದರು.

ಸಾಲಮನ್ನಾ: ರಾಜ್ಯದಲ್ಲಿ ರೈತರ 52 ಸಾವಿರ ಕೋಟಿ ರೂ.ಅಲ್ಪಾವಧಿ ಸಾಲ ವಿದ್ದು ಆ ಪೈಕಿ 10730 ಕೋಟಿ ರೂ. ಸಹಕಾರ ಬ್ಯಾಂಕುಗಳಲ್ಲಿನ ಸಾಲದ ಮೊತ್ತ. ಅದರಲ್ಲಿ ರಾಜ್ಯ ಸರ್ಕಾರದಿಂದ 22 ಲಕ್ಷ ರೈತರಿಗೆ 50 ಸಾವಿರ ರೂ. ನಂತೆ 8165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೇವೆ. ರೈತರ ಬಗ್ಗೆ ನೀವು ಮಾತನಾಡುವುದಾದರೆ ಮೊದಲು ಕೇಂದ್ರದ ಬಳಿ ಹೋಗಿ ರಾಷ್ಟ್ರೀಕೃತ ಬ್ಯಾಂಕು ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಿಕೊಂಡು ಬನ್ನಿ. ಆಗ ಮಾತ್ರ ನಿಮಗೆ ರೈತರ ಬಗ್ಗೆ ಮಾತನಾಡಲು ನೈತಿ ಕತೆ ಇರುತ್ತದೆ ಎಂದು ಬಿಜೆಪಿ ನಾಯಕರನ್ನು ಚುಚ್ಚಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಮ್ಮ ಸರ್ಕಾರದ ಈ ಅವಧಿಯ ಕೊನೆಯ ಅಧಿವೇಶನ ಇದು. ಮೊದಲ ವರ್ಷ ಬಿಟ್ಟರೆ ಈ ಬಾರಿ ವೈದ್ಯರ ಮುಷ್ಕರ ಹೊರತುಪಡಿಸಿ ಪ್ರತಿಭಟನೆಗಳು, ಹೋರಾಟಗಳು ಕಡಿಮೆಯಾಗಿವೆ. ಇದು ಸಹ ಸರ್ಕಾರದ ಬಗ್ಗೆ ಜನರಿಗೆ ಸಮಾಧಾನ ಇದೆ ಎಂಬುದು ತೋರಿಸುತ್ತದೆ ಎಂದರು. 

ಕೈಮುಗಿದು ಪಿಎಂಗೆ ಮನವಿ ಮಾಡ್ತೇನೆ: ಸಿದ್ದರಾಮಯ್ಯ
ವಿಧಾನಸಭೆ: ಮಹದಾಯಿ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮೋದಿ ಅವರ ಮಧ್ಯಪ್ರವೇಶವೊಂದೇ ಪರಿಹಾರ ಎಂದು 
ಪುನರುಚ್ಚರಿಸಿರುವ ಸಿದ್ದರಾಮಯ್ಯ, ನ್ಯಾಯಾಧಿಕರಣದ ಹೊರಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು
ನಾವು ಈಗಲೂ ಸಿದ್ಧ ಎಂದು ಹೇಳಿದರು. ಜತೆಗೆ, ಕೈ ಮುಗಿದು ಕೇಳಿಕೊಳ್ಳುತ್ತೇನೆ.  ಪ್ರಧಾನಿಯವರು ತಕ್ಷಣ 3 ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು. ನಾವು ಮುಕ್ತ ಮನಸ್ಸಿ ನಿಂದ ಇದ್ದೇವೆ ಎಂದು ಸದನದ ಮೂಲಕ ಮನವಿ ಮಾಡಿದರು. ಈ ವಿಚಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆ ದಿದ್ದು, ಗೋವಾ ಮುಖ್ಯಮಂತ್ರಿಯ ವರಿಗೆ ಮನವಿ ಮಾಡಿದ್ದನ್ನು ವಿವರಿಸಿದ ಅವರು, ಸೂಕ್ತ ಸ್ಪಂದನೆ ಸಿಗದ ಬಗ್ಗೆ ಅಸಮಾಧಾನ
ವ್ಯಕ್ತಪಡಿಸಿದರು. 

ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವೇ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಮಸ್ಯೆ ಬಗೆಹರಿಸುವುದು ಸಮಸ್ಯೆಯಾಗದು. ನಾವೂ ಸಹ ಮುಕ್ತವಾಗಿದ್ದೇವೆ. ಆದರೆ, ಪ್ರತಿಪಕ್ಷದವರನ್ನು ಒಪ್ಪಿಸಿಕೊಂಡು ಬನ್ನಿ ಎಂದು ಹೇಳುವುದು ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಸದಸ್ಯರತ್ತ ಛಾಟಿ ಬೀಸಿದರು. ಇನ್ನು ಒಂದು ತಿಂಗಳಲ್ಲಿ ರಾಜ್ಯ ಸರ್ಕಾರದ ನೆರವಿಲ್ಲದೆ ಕೇಂದ್ರ ಸರ್ಕಾರದ ನೆರವಿನೊಂದಿಗೆ ಮಹದಾಯಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.  ಸಮಸ್ಯೆ ಪರಿಹಾರವಾದರೆ ನಾವು ಸ್ವಾಗತಿಸುತ್ತೇವೆ. ಕುರುಡನಿಗೆ ಯಾರಾ  ದರೂ ಕಣ್ಣು ಕೊಟ್ಟರೆ ಅದು ಸಂತೋಷವಲ್ಲವೇ ಎಂದರು.

ಮಾತನಾಡಿದವರು ನಾಲ್ವರು!
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಚರ್ಚಿಸಲು ವಿಧಾನಸಭೆಯಲ್ಲಿ ಮೂರು ದಿನಗಳ ಕಾಲ ಸಮಯ ನಿಗದಿಪಡಿಸಲಾಗಿತ್ತು. ಆದರೂ, ಸಿಕ್ಕಿದ್ದು 5 ಗಂಟೆ 15 ನಿಮಿಷ ಕಾಲಾವಧಿ. ಆ ಪೈಕಿ ಮಾತನಾಡಿದವರು ಕೇವಲ ನಾಲ್ಕು ಸದಸ್ಯರು. ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ಜೆಡಿಎಸ್‌ನ ವೈ.ಎಸ್‌.ವಿ.ದತ್ತ ಹಾಗೂ ಕೋನರೆಡ್ಡಿ, ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಎ.ಎಸ್‌. ಪಾಟೀಲ್‌ ನಡಹಳ್ಳಿ ಮಾತ್ರ.

ಸಿಎಂಗೆ ಜ್ವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ವರದಿಂದ ಬಳಲುತ್ತಿದ್ದು, ಅದರ ನಡುವೆಯೇ ಗುರುವಾರ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರಿಸಿದರು. ಜ್ವರದಿಂದ ಬಳಲುತ್ತಿರುವ ಬಗ್ಗೆ ತಿಳಿಸಿದ ಅವರು, ಒಮ್ಮೆ ನೀರು ಕುಡಿದು ಸುಧಾರಿಸಿಕೊಂಡರು. ನಾನೆಂದೂ ಉತ್ತರ ನೀಡುವಾಗ ನೀರು ಕುಡಿಯವುದೇ ಇಲ್ಲ. ಆದರೆ, ಜ್ವರದಿಂದ  ಬಳಲುತ್ತಿದ್ದೇನೆ. ಹೀಗಾಗಿ, ನೀರು ಕುಡಿದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಎಳ್ಳಷ್ಟೂ ತಾರತಮ್ಯ ಮಾಡಿಲ್ಲ. ಸಮಗ್ರ ಕರ್ನಾಟಕ, ಅಖೀಲ ಕರ್ನಾಟಕ ಅಭಿವೃದ್ಧಿಯೇ ನಮ್ಮ ಮಂತ್ರ.
 ●ಸಿದ್ದರಾಮಯ್ಯ, ಮುಖ್ಯಮಂತ್ರಿ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದರು

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.