ಖಾಸಗಿ ವಿಧೇಯಕ ಮಂಡನೆಗೆ ಅವಕಾಶ ಕೋರಿ ಪ್ರತಿಭಟನೆ


Team Udayavani, Nov 25, 2017, 7:13 AM IST

25-2.jpg

ವಿಧಾನ ಪರಿಷತ್ತು: “ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲೇ ಓದಿಸಬೇಕು’ ಎಂಬ ಖಾಸಗಿ ವಿಧೇಯಕ ಮಂಡನೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಸದಸ್ಯ ರಘು ಆಚಾರ್‌ ಪ್ರತಿಭಟನೆ ನಡೆಸಿದರು.

ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ಖಾಸಗಿ ವಿಧೇಯಕ ಮಂಡಿಸಲು ಅವಕಾಶ ನೀಡುವಂತೆ ರಘು ಆಚಾರ್‌ ವಿನಂತಿಸಿದರು. ಇದಕ್ಕೆ ಸಭಾಪತಿಗಳು ನಿರಾಕರಿಸಿದ್ದರಿಂದ ಅವರು ಸಭಾಪತಿಗಳ ಪೀಠದ ಎದುರು ಧಾವಿಸಿ ಪ್ರತಿಭಟನೆ ಆರಂಭಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಶಂಕರಮೂರ್ತಿ, “ಸದನದಲ್ಲಿ ಖಾಸಗಿ ವಿಧೇಯಕ ಮಂಡಿಸಲು ಕೆಲವು ನಿಯಮಗಳಿವೆ. ಅವುಗಳ ಅನುಸಾರವೇ ಮಂಡಿಸಬೇಕು. ರಘು ಆಚಾರ್‌ ಕೊಟ್ಟಿರುವ ವಿಧೇಯಕದ ಪ್ರತಿಯನ್ನು ಈಗಾಗಲೇ ಸಂಬಂಧಪಟ್ಟ ಕಾನೂನು ಮತ್ತು ಸಂಸದೀಯ ವಿಭಾಗಕ್ಕೆ ಕಳುಹಿಸಲಾಗಿದೆ. ಅವರು ಅದನ್ನು ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಬೇಕು.
ಅಲ್ಲಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮುಂದಿನ ಅಧಿವೇಶನ ನಡೆದಾಗ ಅವಕಾಶ ನೀಡುವುದಾಗಿ’ ಹೇಳಿದರು.

ಇದಕ್ಕೆ ಒಪ್ಪದ ರಘು ಆಚಾರ್‌ ಪ್ರತಿಭಟನೆ ಮುಂದುವರಿಸಿದರು. ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, “ಆಡಳಿತ ಪಕ್ಷದ ಸದಸ್ಯರೇ ಸರ್ಕಾರದ ವಿರುದ್ಧ ಹೀಗೆ ಪ್ರತಿಭಟನೆ ಮಾಡುವುದನ್ನು ನೋಡಿದರೆ ಈ ಸರ್ಕಾರ ಯಾವ ಸ್ಥಿತಿಗೆ ತಲುಪಿದೆ ಎಂಬುದು ಗೊತ್ತಾಗುತ್ತದೆ’ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ಸದಸ್ಯರು, ರಘು ಆಚಾರ್‌ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಆಪಾದಿಸಿದರು. ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್‌ ಸದಸ್ಯ ವಿ.ಎಸ್‌.ಉಗ್ರಪ್ಪ, ಖಾಸಗಿ ವಿಧೇಯಕ ಮಂಡಿಸುವ ಹಕ್ಕು ಸದನದ ಎಲ್ಲ ಸದಸ್ಯರಿಗೂ ಇದೆ. ಆದರೆ, ಸಮಯದ ಅಭಾವ ಇರುವುದರಿಂದ ಸದ್ಯಕ್ಕೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಪ್ರತಿಭಟನೆ ಕೈ ಬಿಡಬೇಕೆಂದು ಮನವಿ ಮಾಡಿಕೊಂಡರು. ಸಚಿವ ತನ್ವೀರ್‌ ಸೇs… ಕೂಡ ಪ್ರತಿಭಟನೆ ಹಿಂಪಡೆಯುವಂತೆ ಆಗ್ರಹಿಸಿದರು. ನಂತರ ರಘು ಆಚಾರ್‌ ಪ್ರತಿಭಟನೆ ಹಿಂಪಡೆದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.