ಖಾಸಗಿ ವಿಧೇಯಕ ಮಂಡನೆಗೆ ಅವಕಾಶ ಕೋರಿ ಪ್ರತಿಭಟನೆ


Team Udayavani, Nov 25, 2017, 7:13 AM IST

25-2.jpg

ವಿಧಾನ ಪರಿಷತ್ತು: “ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲೇ ಓದಿಸಬೇಕು’ ಎಂಬ ಖಾಸಗಿ ವಿಧೇಯಕ ಮಂಡನೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಸದಸ್ಯ ರಘು ಆಚಾರ್‌ ಪ್ರತಿಭಟನೆ ನಡೆಸಿದರು.

ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ಖಾಸಗಿ ವಿಧೇಯಕ ಮಂಡಿಸಲು ಅವಕಾಶ ನೀಡುವಂತೆ ರಘು ಆಚಾರ್‌ ವಿನಂತಿಸಿದರು. ಇದಕ್ಕೆ ಸಭಾಪತಿಗಳು ನಿರಾಕರಿಸಿದ್ದರಿಂದ ಅವರು ಸಭಾಪತಿಗಳ ಪೀಠದ ಎದುರು ಧಾವಿಸಿ ಪ್ರತಿಭಟನೆ ಆರಂಭಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಶಂಕರಮೂರ್ತಿ, “ಸದನದಲ್ಲಿ ಖಾಸಗಿ ವಿಧೇಯಕ ಮಂಡಿಸಲು ಕೆಲವು ನಿಯಮಗಳಿವೆ. ಅವುಗಳ ಅನುಸಾರವೇ ಮಂಡಿಸಬೇಕು. ರಘು ಆಚಾರ್‌ ಕೊಟ್ಟಿರುವ ವಿಧೇಯಕದ ಪ್ರತಿಯನ್ನು ಈಗಾಗಲೇ ಸಂಬಂಧಪಟ್ಟ ಕಾನೂನು ಮತ್ತು ಸಂಸದೀಯ ವಿಭಾಗಕ್ಕೆ ಕಳುಹಿಸಲಾಗಿದೆ. ಅವರು ಅದನ್ನು ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಬೇಕು.
ಅಲ್ಲಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮುಂದಿನ ಅಧಿವೇಶನ ನಡೆದಾಗ ಅವಕಾಶ ನೀಡುವುದಾಗಿ’ ಹೇಳಿದರು.

ಇದಕ್ಕೆ ಒಪ್ಪದ ರಘು ಆಚಾರ್‌ ಪ್ರತಿಭಟನೆ ಮುಂದುವರಿಸಿದರು. ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, “ಆಡಳಿತ ಪಕ್ಷದ ಸದಸ್ಯರೇ ಸರ್ಕಾರದ ವಿರುದ್ಧ ಹೀಗೆ ಪ್ರತಿಭಟನೆ ಮಾಡುವುದನ್ನು ನೋಡಿದರೆ ಈ ಸರ್ಕಾರ ಯಾವ ಸ್ಥಿತಿಗೆ ತಲುಪಿದೆ ಎಂಬುದು ಗೊತ್ತಾಗುತ್ತದೆ’ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ಸದಸ್ಯರು, ರಘು ಆಚಾರ್‌ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಆಪಾದಿಸಿದರು. ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್‌ ಸದಸ್ಯ ವಿ.ಎಸ್‌.ಉಗ್ರಪ್ಪ, ಖಾಸಗಿ ವಿಧೇಯಕ ಮಂಡಿಸುವ ಹಕ್ಕು ಸದನದ ಎಲ್ಲ ಸದಸ್ಯರಿಗೂ ಇದೆ. ಆದರೆ, ಸಮಯದ ಅಭಾವ ಇರುವುದರಿಂದ ಸದ್ಯಕ್ಕೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಪ್ರತಿಭಟನೆ ಕೈ ಬಿಡಬೇಕೆಂದು ಮನವಿ ಮಾಡಿಕೊಂಡರು. ಸಚಿವ ತನ್ವೀರ್‌ ಸೇs… ಕೂಡ ಪ್ರತಿಭಟನೆ ಹಿಂಪಡೆಯುವಂತೆ ಆಗ್ರಹಿಸಿದರು. ನಂತರ ರಘು ಆಚಾರ್‌ ಪ್ರತಿಭಟನೆ ಹಿಂಪಡೆದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.